Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಸಿಡಿ' ಆರೋಪದ ಬಗ್ಗೆ ನೂತನ ಸಚಿವ...

'ಸಿಡಿ' ಆರೋಪದ ಬಗ್ಗೆ ನೂತನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ15 Jan 2021 5:38 PM IST
share
ಸಿಡಿ ಆರೋಪದ ಬಗ್ಗೆ ನೂತನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದೇನು ?

ಬೆಂಗಳೂರು,ಜ. 15: ಕೆಲ ಶಾಸಕರು ಆರೋಪಿಸಿರುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಯಾವುದೇ ಸಿಡಿ ಯಾರ ಬಳಿಯೂ ಇಲ್ಲ. ಇದು ನೂರಕ್ಕೆ 100ರಷ್ಟು ಸುಳ್ಳು ಎಂದು ನೂತನ ಸಚಿವ ಮುರುಗೇಶ್ ಆರ್.ನಿರಾಣಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಗೆ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವರು ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಂಬಂಧಿಸಿದ ಸಿಡಿ ಇದೆ ಎಂದು ಕಟ್ಟುಕಥೆ ಹೇಳುತ್ತಿದ್ದು, ಅಂತಹ ಯಾವುದೇ ಸಿಡಿ ಯಾರೊಬ್ಬರ ಬಳಿಯೂ ಇಲ್ಲ ಎಂದರು.

ಮಂತ್ರಿ ಸ್ಥಾನ ಸಿಗದೆ ಇರುವವರು ಅನಗತ್ಯವಾಗಿ ನಾಯಕತ್ವದ ವಿರುದ್ಧ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಬೇಡ. ಪಕ್ಷ ಮತ್ತು ಸಿಎಂ ವಿರುದ್ಧ ಮಾತನಾಡುವುದು ಯಾರಿಗೂ ಶೋಭೆ ತರುವುದಿಲ್ಲ. ಏನೇ ಸಮಸ್ಯೆಗಳಿದ್ದರೂ ನಾಲ್ಕು ಗೋಡೆಗಳ ಮಧ್ಯೆ ಇರಬೇಕೆ ಹೊರತು ಹಾದಿಬೀದಿಯಲ್ಲಿ ಮಾತನಾಡುವುದರಿಂದ ಯಾವುದೇ ಸರಿಯಲ್ಲ ಎಂದು ಮುರುಗೇಶ್ ನಿರಾಣಿ ಆಕ್ಷೇಪಿಸಿದರು.

ಒತ್ತಡ ಸರಿಯಲ್ಲ: ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2‘ಎ'ಗೆ ಸೇರಿಸಲು ನಡೆಸುತ್ತಿರುವ ಪಾದಯಾತ್ರೆಯ ಹಿಂದೆ ಯಾರಿದ್ದಾರೆಂದು ನಾನು ಹೇಳುವುದಿಲ್ಲ. ಅದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ಮುರುಗೇಶ್ ನಿರಾಣಿ, ಜಯಮೃಂತ್ಯುಜಯ ಸ್ವಾಮಿ ವಿರುದ್ಧ ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದರು.

ನಾನು ಈ ಹಿಂದೆ ಪಾದಯಾತ್ರೆ ಕೈಬಿಡಿ ಎಂದು ಶ್ರೀಗಳಿಗೆ ಮನವಿ ಮಾಡಿದ್ದೆ. ಬಳಿಕ ಸಿ.ಸಿ.ಪಾಟೀಲ್ ಶ್ರೀಗಳಿಗೆ ಪಾದಯಾತ್ರೆ ನಡೆಸದಂತೆ ಮನವಿ ಮಾಡಿದ್ದರು. ನಾವು ಶ್ರೀಗಳಿಗೆ ಹೇಳುವಷ್ಟು ದೊಡ್ಡವರಲ್ಲ ಎಂದ ಅವರು, ಏಕಾಏಕಿ ಪಾದಯಾತ್ರೆ ಮಾಡಿ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವಂತೆ ಒತ್ತಡ ಹಾಕುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಈಗಾಗಲೇ ಸಿಎಂ ಬಿಎಸ್‍ವೈ ನಮ್ಮ ಸಮುದಾಯವನ್ನು 2ಎಗೆ ಸೇರಿಸಲು ಒಪ್ಪಿಗೆ ನೀಡುವ ಭರವಸೆ ನೀಡಿದ್ದಾರೆ. ಅವರ ಮಾತಿನಲ್ಲಿ ಎಲ್ಲರೂ ನಂಬಿಕೆ ಇಡಬೇಕು. ಶ್ರೀಗಳು ತಕ್ಷಣವೇ ಪಾದಯಾತ್ರೆ ರದ್ದು ಮಾಡಬೇಕೆಂದು ಅನೇಕ ಮುಖಂಡರು ಮನವಿ ಮಾಡಿದ್ದೇವೆ. ಯಾರೋ ಅವಕಾಶ ಸಿಗದವರು ಅವರಿಗೆ ಬೆಂಬಲ ನೀಡುತ್ತಿದ್ದಾರೆಂದು ಯತ್ನಾಳ್ ವಿರುದ್ಧ ಪರೋಕ್ಷ ಟೀಕೆ ಮಾಡಿದರು.

ಆಲಂ ಪಾಷ ಓರ್ವ ವಂಚಕ: ಈ ಹಿಂದೆ ನಾನು ಕೈಗಾರಿಕೆ ಸಚಿವನಾಗಿದ್ದಾಗ ಉದ್ಯಮಿ ಆಲಂ ಪಾಷಗೆ ಜಮೀನು ಹಂಚಿಕೆ ಮಾಡಲಾಗಿದೆ. ಅವರಿಗೆ ಹಣ ಕಟ್ಟಲು ಸಮಯ ನೀಡಲಾಗಿತ್ತು. ನಿಗದಿತ ಸಮಯದಲ್ಲಿ ಹಣ ಕಟ್ಟಲು ಸಾಧ್ಯವಾಗಲಿಲ್ಲ. ಸಮಯ ವ್ಯರ್ಥ ಮಾಡಿ ಜಮೀನು ಹೊಡೆಯಲು ಯತ್ನಿಸಿದರು ಎಂದು ನಿರಾಣಿ ವಾಗ್ದಾಳಿ ನಡೆಸಿದರು.

ಆ ಜಮೀನು ಕೆಐಎಡಿಬಿ ಅಧೀನದಲ್ಲಿಯೇ ಇದೆ. ಕಾನೂನು ಪ್ರಕಾರ ಹಣ ಕಟ್ಟಿದ್ದರೆ ಜಮೀನು ನೀಡಲಾಗುತ್ತದೆ. ನಿಗದಿತ ಸಮಯದಲ್ಲಿ ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ ಜಮೀನು ನೀಡಿಲ್ಲ. ಆಲಂ ಪಾಷ ಓರ್ವ ವಂಚಕ. ಆತ ಬ್ಲ್ಯಾಕ್‍ಮೇಲ್ ಮಾಡುವುದರಲ್ಲಿ ಎತ್ತಿದ ಕೈ ಎಂದು ನಿರಾಣಿ ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X