Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂತರ್ ರಾಷ್ಟ್ರೀಯ ಹ್ಯಾಕರ್...

ಅಂತರ್ ರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣನಿಂದ 9 ಕೋಟಿ ರೂ. ಮೌಲ್ಯದ ಬಿಟ್ ಕಾಯಿನ್ ಜಪ್ತಿ

ವಾರ್ತಾಭಾರತಿವಾರ್ತಾಭಾರತಿ15 Jan 2021 7:56 PM IST
share
ಅಂತರ್ ರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣನಿಂದ 9 ಕೋಟಿ ರೂ. ಮೌಲ್ಯದ ಬಿಟ್ ಕಾಯಿನ್ ಜಪ್ತಿ

ಬೆಂಗಳೂರು, ಜ.15: ಚೀನಾ ನಿರ್ಮಿತ ಆನ್‍ಲೈನ್ ಗೇಮ್ ಸೇರಿದಂತೆ ಅಂತರ್‍ರಾಷ್ಟ್ರೀಯ ಜಾಲತಾಣಗಳನ್ನು ಹ್ಯಾಕ್ ಮಾಡಿ ಅಕ್ರಮ ಹಣ ಸಂಪಾದನೆ ಆರೋಪದಡಿ ಬಂಧನಕ್ಕೊಳಗಾಗಿರುವ ಶ್ರೀಕೃಷ್ಣನ ವಿಚಾರಣೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು, 9 ಕೋಟಿ ರೂ. ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ ಮಾಡಿದ್ದಾರೆ.

ಅಂತರ್‍ರಾಷ್ಟ್ರೀಯ ಮಟ್ಟದ ವೆಬ್‍ಸೈಟ್‍ಗಳು ಸೇರಿದಂತೆ ಬೇರೆಬೇರೆ ದೇಶದ ವಿವಿಧ ಪೋಕರ್ ಗೇಮ್ ವೆಬ್‍ಸೈಟ್ ಮತ್ತು ಕ್ರಿಪ್ಟೋ ಕರೆನ್ಸಿಗಳಾದ ಬಿಟ್ ಕಾಯಿನ್, ವೈಎಫ್‍ಐ, ಇಥೇರಿಯಂ ಖಾತೆಗಳನ್ನು ಆತ ಹ್ಯಾಕ್ ಮಾಡಿರುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, ಈತ ನೀಡಿದ ಮಾಹಿತಿ ಆಧರಿಸಿ 9 ಕೋಟಿ ರೂ. ಮೌಲ್ಯದ 31 ಬಿಟ್ ಕಾಯಿನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಆರೋಪಿಯು ಅಂತರ್‍ರಾಷ್ಟ್ರೀಯ ಮಟ್ಟದ ವೆಬ್‍ಸೈಟ್‍ಗಳನ್ನು, ಬೇರೆ ಬೇರೆ ದೇಶದ ವಿವಿಧ ಪೋಕರ್ ಗೇಮ್ ವೆಬ್‍ಸೈಟ್‍ಗಳನ್ನು ಮತ್ತು ಕ್ರಿಪ್ಟೋ ಕರೆನ್ಸಿಗಳಾದ ಬಿಟ್ ಕಾಯಿನ್, ವೈಎಫ್‍ಐ, ಇಥೇರಿಯಂ ಖಾತೆಗಳನ್ನು ಹ್ಯಾಕ್ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಡೇಟಾ ಕಳವು: ಹ್ಯಾಕರ್ ಶ್ರೀಕೃಷ್ಣ ತನ್ನ ಸಹಚರರಾದ ಸುನೀಷ್ ಹೆಗ್ಡೆ, ಪ್ರಸಿದ್ ಶೆಟ್ಟಿ, ಸುಜಯ್, ಹೇಮಂತ್ ಮುದ್ದಪ್ಪ, ರಾಬಿನ್ ಖಂಡೇಲ್‍ವಾಲ್ ಹಾಗೂ ಇತರರೊಂದಿಗೆ ಸೇರಿಕೊಂಡು ಅಕ್ರಮ ಹಣ ಗಳಿಸುವ ಉದ್ದೇಶದಿಂದ ದೇಶದ ಹಾಗೂ ಬೇರೆ ಬೇರೆ ದೇಶಗಳ ಪೋಕರ್ ಗೇಮಿಂಗ್ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿದ ನಂತರ ಡೇಟಾವನ್ನು ಕಳವು ಮಾಡುತ್ತಿದ್ದ. ಬಳಿಕ ಆ ಡೇಟಾವನ್ನು ತಮ್ಮ ಗೇಮಿಂಗ್ ವೆಬ್‍ಸೈಟ್‍ಗೆ ಉಪಯೋಗಿಸಿಕೊಳ್ಳುವ ಪ್ರವೃತ್ತಿ ಹೊಂದಿದ್ದಾನೆ ಎನ್ನುವ ವಿಚಾರವೂ ಗೊತ್ತಾಗಿದೆ.

ಆರೋಪಿ ಪ್ರತಿಷ್ಠಿತ ಹೋಟೆಲ್‍ಗಳಲ್ಲಿ, ರೆಸಾರ್ಟ್ ಗಳಲ್ಲಿ ವಾಸ್ತವ್ಯ ಮಾಡುತ್ತಿದ್ದು, ಐಶಾರಾಮಿ ಜೀವನಕ್ಕಾಗಿ ಬಿಟ್ ಕಾಯಿನ್ ಖಾತೆಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಕಳವು ಮಾಡಿ ಬಿಟ್ ಕಾಯಿನ್ ಟ್ರೇಡರ್ ರಾಬಿನ್ ಖಂಡೇಲ್‍ವಾಲ್ ಸೇರಿದಂತೆ ಇತರ ಬಿಟ್ ಕಾಯಿನ್ ಟ್ರೇಡರ್ ಗಳಿಗೆ ನೀಡಿ ಅವರಿಂದ ತನ್ನ ಸಹಚರರ ಬ್ಯಾಂಕ್ ಖಾತೆಗೆ ಹಾಗೂ ಹವಾಲ ಮುಖಾಂತರ ಹಣವನ್ನು ಸಂಗ್ರಹಿಸಿಕೊಂಡು ಐಶಾರಾಮಿ ಜೀವನ ನಡೆಸುತ್ತಿದ್ದ ಎನ್ನುವ ಮಾಹಿತಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ.

2019ನೆ ಸಾಲಿನಲ್ಲಿ ಆರೋಪಿಯು ಅಕ್ರಮವಾಗಿ ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಕರ್ನಾಟಕ ಸರಕಾರದ ಇ-ಪ್ರಕ್ಯೂರ್‍ಮೆಂಟ್ ಸೈಟ್ ಅನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ಹಣವನ್ನು ತನ್ನ ಸಹಚರರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡು ಸರಕಾರದ ಬೊಕ್ಕಸಕ್ಕೆ ನಷ್ಟವನ್ನು ಉಂಟು ಮಾಡಿದ್ದಾನೆ ಎಂದು ಆಯುಕ್ತರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X