Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. “ಚೀನಾದಲ್ಲಿ ಉಯಿಘರ್ ಮುಸ್ಲಿಮರ ಜನಾಂಗೀಯ...

“ಚೀನಾದಲ್ಲಿ ಉಯಿಘರ್ ಮುಸ್ಲಿಮರ ಜನಾಂಗೀಯ ಹತ್ಯೆ ನಡೆಸಿರುವ ಸಾಧ್ಯತೆ ಇದೆ”

ಅಮೆರಿಕ ಸಂಸತ್ ವರದಿ

ವಾರ್ತಾಭಾರತಿವಾರ್ತಾಭಾರತಿ15 Jan 2021 8:35 PM IST
share
“ಚೀನಾದಲ್ಲಿ ಉಯಿಘರ್ ಮುಸ್ಲಿಮರ ಜನಾಂಗೀಯ ಹತ್ಯೆ ನಡೆಸಿರುವ ಸಾಧ್ಯತೆ ಇದೆ”

ವಾಶಿಂಗ್ಟನ್, ಜ. 15: ಚೀನಾವು ಕ್ಸಿನ್‌ಜಿಯಾಂಗ್ ವಲಯದಲ್ಲಿರುವ ಉಯಿಘರ್ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತ ಮುಸ್ಲಿಮರನ್ನು ಗುರಿಯಾಗಿಸಿ ಜನಾಂಗೀಯ ಹತ್ಯೆ ನಡೆಸಿರುವ ಸಾಧ್ಯತೆಯಿದೆ ಎಂದು ಅವೆುರಿಕದ ಸಂಸತ್ತು ಕಾಂಗ್ರೆಸ್ ನೇಮಿಸಿರುವ ಆಯೋಗವೊಂದು ತನ್ನ ವರದಿಯಲ್ಲಿ ತಿಳಿಸಿದೆ.

 ಉಯಿಘರ್ ಜನಾಂಗೀಯರು ತಮ್ಮ ಮೂಲಭೂತ ಮಾನವಹಕ್ಕುಗಳನ್ನು ಚಲಾಯಿಸಿರುವುದಕ್ಕಾಗಿ ಚೀನಾ ಸರಕಾರ ಮತ್ತು ಕಮ್ಯುನಿಸ್ಟ್ ಪಕ್ಷಗಳು ಅವರ ವಿರುದ್ಧ ಹಿಂದೆಂದೂ ಇಲ್ಲದಷ್ಟು ಪ್ರಮಾಣದಲ್ಲಿ ಸೆನ್ಸಾರ್‌ಶಿಪ್ ವಿಧಿಸುತ್ತಿವೆ, ಬೆದರಿಕೆಯೊಡ್ಡುತ್ತಿವೆ ಮತ್ತು ಅವರನ್ನು ಸ್ವೇಚ್ಛಾಚಾರದಿಂದ ಬಂಧಿಸುತ್ತಿವೆ ಎಂದು ಕಾಂಗ್ರೆಶ್ಶನಲ್ ಎಕ್ಸೆಕ್ಯೂಟಿವ್ ಕಮಿಶನ್ ಆನ್ ಚೀನಾ (ಸಿಇಸಿಸಿ) ಬಿಡುಗಡೆ ಮಾಡಿರುವ ವರದಿ ಹೇಳಿದೆ.

‘‘ಚೀನಾದ ಈ ರೀತಿಯ ದಮನ ನೀತಿಯು ದೇಶದ ಬೇರೆ ಯಾವುದೇ ಭಾಗಕ್ಕಿಂತಲೂ ಹೆಚ್ಚಾಗಿ ಕ್ಸಿನ್‌ಜಿಯಾಂಗ್ ಉಯಿಘರ್ ಸ್ವಾಯತ್ತ ವಲಯ (ಎಕ್ಸ್‌ಯುಎಆರ್)ದಲ್ಲಿ ಎದ್ದು ಕಾಣುತ್ತಿದೆ. ಅಲ್ಲಿ ಮಾನವತೆಯ ವಿರುದ್ಧ ಅಪರಾಧ ಹಾಗೂ ಸಂಭಾವ್ಯ ಜನಾಂಗೀಯ ಹತ್ಯೆ ನಡೆಯುತ್ತಿರಬಹುದು ಎನ್ನುವುದನ್ನು ಸೂಚಿಸುವ ಹೊಸ ಪುರಾವೆಗಳು ಹೊರಬರುತ್ತಿವೆ’’ ಎಂದು ಗುರುವಾರ ಬಿಡುಗಡೆಗೊಂಡ ವರದಿ ಹೇಳಿದೆ.

 ‘‘ಇದೇ ರೀತಿಯ ದಮನ ಕಾರ್ಯಾಚರಣೆಯು ಹಾಂಕಾಂಗ್‌ನಲ್ಲೂ ನಡೆಯುತ್ತಿರುವುದಕ್ಕೆ ಪುರಾವೆಗಳು ಲಭಿಸಿವೆ. ಅಲ್ಲಿ ‘ಒಂದು ದೇಶ, ಎರಡು ವ್ಯವಸ್ಥೆ’ ಎಂಬ ಆಡಳಿತ ಮಾದರಿಯನ್ನು ಸಂಪೂರ್ಣವಾಗಿ ಮೂಲೆಗುಂಪು ಮಾಡಲಾಗಿದೆ’’ ಎಂದು ವರದಿ ತಿಳಿಸಿದೆ.

ಚೀನಾದ ಅಧಿಕಾರಿಗಳು ಉಯಿಘರ್ ಮತ್ತು ಇತರ ಬುಡಕಟ್ಟು ಮುಸ್ಲಿಮ್ ಗುಂಪುಗಳ ಸದಸ್ಯರನ್ನು ಸ್ವೇಚ್ಛಾಚಾರದಿಂದ ಬಂಧಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಆದರೆ, ಉದ್ಯೋಗ ತರಬೇತಿ ಕೊಡುವುದಕ್ಕಾಗಿ ಹಾಗೂ ಭಯೋತ್ಪಾದನೆ ನಿಗ್ರಹ ಉದ್ದೇಶಗಳಿಗಾಗಿ ಅವರನ್ನು ಶಿಬಿರಗಳಲ್ಲಿ ಇಡಲಾಗುತ್ತಿದೆ ಎಂದು ಸರಕಾರಿ ಮಾಧ್ಯಮಗಳು ಹೇಳಿಕೊಳ್ಳುತ್ತಿವೆ ಎಂದು ಅದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X