Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಯೋಧರಿಗೆ ವೇತನ ಪಾವತಿಸದ ದಿಲ್ಲಿಯ...

ಕೋವಿಡ್ ಯೋಧರಿಗೆ ವೇತನ ಪಾವತಿಸದ ದಿಲ್ಲಿಯ ಮೂರು ಮನಪಾಗಳಿಗೆ ಹೈಕೋರ್ಟ್ ಚಾಟಿಯೇಟು

ವಾರ್ತಾಭಾರತಿವಾರ್ತಾಭಾರತಿ15 Jan 2021 9:48 PM IST
share
ಕೋವಿಡ್ ಯೋಧರಿಗೆ ವೇತನ ಪಾವತಿಸದ ದಿಲ್ಲಿಯ ಮೂರು ಮನಪಾಗಳಿಗೆ ಹೈಕೋರ್ಟ್ ಚಾಟಿಯೇಟು

ಹೊಸದಿಲ್ಲಿ,ಜ.15: ವೈದ್ಯರು,ನರ್ಸ್‌ಗಳು ಮತ್ತು ಸ್ವಚ್ಛತಾ ಕಾರ್ಮಿಕರು ಸೇರಿದಂತೆ ಕೋವಿಡ್-19 ಮುಂಚೂಣಿಯ ಕಾರ್ಯಕರ್ತರಿಗೆ ಬಾಕಿಯಿರುವ ವೇತನ ಮತ್ತು ಪಿಂಚಣಿಗಳು ಪಾವತಿಯಾಗುವಂತಾಗಲು ‘ದೊರೆಗಳಂತೆ ಬದುಕುತ್ತಿರುವ ’ ಕೌನ್ಸಿಲರ್‌ಗಳು ಮತ್ತು ಹಿರಿಯ ಅಧಿಕಾರಿಗಳ ವಿಶೇಷ ಸೌಲಭ್ಯಗಳು ಸೇರಿದಂತೆ ಇಲ್ಲಿಯ ಮೂರು ಮಹಾನಗರ ಪಾಲಿಕೆಗಳ ಎಲ್ಲ ಅನಗತ್ಯ ವೆಚ್ಚಗಳನ್ನು ನಿಲ್ಲಿಸಲು ತಾನು ಉದ್ದೇಶಿಸಿರುವುದಾಗಿ ದಿಲ್ಲಿ ಉಚ್ಚ ನ್ಯಾಯಾಲಯವು ತಿಳಿಸಿದೆ.

 ಕೊರೋನ ಯೋಧರು ಸೇರಿದಂತೆ ಮೂರು ಮಹಾನಗರ ಪಾಲಿಕೆಗಳ ಹಾಲಿ ಮತ್ತು ನಿವೃತ್ತ ನೌಕರರ ವೇತನಗಳು ಮತ್ತು ಪಿಂಚಣಿಗಳನ್ನು ಪಾವತಿಸಲಾಗಿಲ್ಲ ಎಂದು ದೂರಿಕೊಂಡು ಸಲ್ಲಿಸಲಾಗಿರುವ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗಳ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿಗಳಾದ ವಿಪಿನ್ ಸಾಂಘಿ ಮತ್ತು ರೇಖಾ ಪಲ್ಲಿ ಅವರ ಪೀಠವು,ಹಿರಿಯ ಅಧಿಕಾರಿಗಳಿಗಾಗಿ ಮಾಡಿರುವ ವೆಚ್ಚಗಳ ವಿವರಗಳನ್ನು ಸಲ್ಲಿಸುವಂತೆ ಮನಪಾಗಳಿಗೆ ನಿರ್ದೇಶ ನೀಡಿತು. ಈ ಮನಪಾಗಳಲ್ಲಿ ಯಾರದಾದರೂ ವೇತನ ಕಡಿತ ಮಾಡುವುದಿದ್ದರೆ ಅದು ಈ ಹಿರಿಯ ಅಧಿಕಾರಿಗಳು ಮತ್ತು ಕೌನ್ಸಿಲರ್‌ಗಳಿಂದ ಆರಂಭಗೊಳ್ಳುತ್ತದೆ ಎಂದು ಪೀಠವು ತಿಳಿಸಿತು.

 ಕೋವಿಡ್-19 ಸಾಂಕ್ರಾಮಿಕದ ಈ ಕಷ್ಟಕಾಲದಲ್ಲಿ ಹಿರಿಯ ಅಧಿಕಾರಿಗಳ ವಿಶೇಷ ಸೌಲಭ್ಯಗಳಂತಹ ಅನಗತ್ಯ ವೆಚ್ಚಗಳಿಗಿಂತ ಕೊರೋನ ಯೋಧರ ವೇತನ ಪಾವತಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಹೇಳಿದ ಪೀಠವು,ಇದಕ್ಕಾಗಿ ಮೂರೂ ಮನಪಾಗಳ ಎಲ್ಲ ಅನಗತ್ಯ ವೆಚ್ಚಗಳನ್ನು ನಿಲ್ಲಿಸಲು ತಾನು ಉದ್ದೇಶಿಸಿರುವುದಾಗಿ ಸ್ಪಷ್ಟಪಡಿಸಿತು.

ಉನ್ನತ ಸ್ಥಾನಗಳಲ್ಲಿರುವವರು ದೊರೆಗಳಂತೆ ಜೀವನ ಸಾಗಿಸುತ್ತಿದ್ದಾರೆ. ಅವರಿಗೆ ಒಮ್ಮೆ ಬಿಸಿ ತಟ್ಟಿದರೆ ಎಲ್ಲವೂ ಸರಿಯಾಗುತ್ತದೆ ಎಂದ ನ್ಯಾಯಾಲಯವು,ಮೂರು ಮತ್ತು ನಾಲ್ಕನೇ ದರ್ಜೆ ನೌಕರರೇಕೆ ನರಳಬೇಕು ಎಂದು ಪ್ರಶ್ನಿಸಿತು.

ವೇತನ ಮತ್ತು ಪಿಂಚಣಿಗಳು ಸಂವಿಧಾನದಡಿ ಮೂಲಭೂತ ಹಕ್ಕುಗಳಾಗಿರುವುದರಿಂದ ಇವುಗಳನ್ನು ಪಾವತಿಸದಿರುವುದಕ್ಕೆ ಹಣಕಾಸಿನ ಕೊರತೆಯ ನೆಪವನ್ನು ಹೇಳುವಂತಿಲ್ಲ ಎಂದು ನ್ಯಾಯಾಲಯವು ಹೇಳಿತು.

ಮೂಲ ತೆರಿಗೆ ನಿಯೋಜನೆಯಡಿ ಮನಪಾಗಳಿಗೆ ವರ್ಗಾಯಿಸಿರುವ ಹಣದಲ್ಲಿ ಅವುಗಳಿಗೆ ನೀಡಿರುವ ಸಾಲದ ಮೊತ್ತವನ್ನು ಕಡಿತಗೊಳಿಸುವ ದಿಲ್ಲಿ ಸರಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯವು,ಆರ್‌ಬಿಐ ಕೂಡ ಸಾಲಗಳ ಮರುಪಾವತಿಗೆ ಸ್ತಂಭನವನ್ನು ಘೋಷಿಸಿತ್ತು ಎಂದು ಬೆಟ್ಟು ಮಾಡಿತು.

ಸರಕಾರವು ಸಾಲದ ಹಣವನ್ನು ಕಡಿತಗೊಳಿಸದಿದ್ದರೆ ತಮ್ಮೆಲ್ಲ ಉದ್ಯೋಗಿಗಳಿಗೆ ವೇತನ ಪಾವತಿಸಲು ಸಾಧ್ಯವಾಗುತ್ತದೆ ಎಂದು ಮನಪಾಗಳು ವಾದಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X