Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ ?:...

ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ ?: ಮಾಧ್ಯಮದವರ ವಿರುದ್ಧ ರೇಗಾಡಿದ ನಿತೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Jan 2021 9:51 PM IST
share
ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ ?: ಮಾಧ್ಯಮದವರ ವಿರುದ್ಧ ರೇಗಾಡಿದ ನಿತೀಶ್ ಕುಮಾರ್

ಪಾಟ್ನ, ಜ.15: ತನ್ನ ಮನೆ ಸಮೀಪವೇ ನಡೆದ ಕೊಲೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹನೆ ಕಳೆದುಕೊಂಡು ರೇಗಿದ ಘಟನೆ ಶುಕ್ರವಾರ ನಡೆದಿರುವುದಾಗಿ ವರದಿಯಾಗಿದೆ.

ಇಂಡಿಗೊ ಸಂಸ್ಥೆಯ ಮ್ಯಾನೇಜರ್ ರೂಪೇಶ್ ಕುಮಾರ್ ಸಿಂಗ್‌ರನ್ನು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಕಾರಿನಲ್ಲಿ ಮನೆಗೆ ಬಂದ ಸಿಂಗ್, ಗೇಟು ತೆರೆಯಲು ಕಾಯುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಅವರ ಮೇಲೆ ಗುಂಟು ಹಾರಿಸಿ ಪರಾರಿಯಾಗಿದ್ದು ರೂಪೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು.

ರೂಪೇಶ್ ಮನೆಯು ಮುಖ್ಯಮಂತ್ರಿ ನಿತೀಶ್ ಕುಮಾರ್ ಮನೆಗಿಂತ ಸುಮಾರು 2 ಕಿ.ಮೀ ದೂರವಿದೆ. ಶುಕ್ರವಾರ ಪಾಟ್ನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ನಿತೀಶ್ ಕುಮಾರ್‌ರಲ್ಲಿ ಈ ವಿಷಯ ಪ್ರಸ್ತಾಪಿಸಿದ ಮಾಧ್ಯಮದವರು, ನಿಮ್ಮ ಮನೆಯ ಬಳಿಯೇ ಇಂತಹ ಕೃತ್ಯ ನಡೆದಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಮೂಡಿಸಿದೆ ಎಂದರು. ಇದಕ್ಕೆ ಸಹನೆ ಕಳೆದುಕೊಂಡ ಕುಮಾರ್ ‘ನಿಮ್ಮ ಪ್ರಶ್ನೆ ಸಂಪೂರ್ಣ ತಪ್ಪು ಮತ್ತು ಅಸಮಂಜಸವಾಗಿದೆ.  ನೀವು ಯಾರ ಪರವಾಗಿದ್ದೀರಿ? ಇದು ನಿಮಗೆ ನನ್ನ ನೇರ ಪ್ರಶ್ನೆ’ ಎಂದರು. . ಇದನ್ನು ಅಪರಾಧ ಎಂದು ಕರೆಯಬೇಡಿ. ಹತ್ಯೆ ನಡೆದಿದೆ ಮತ್ತು ಇಂತಹ ಕೃತ್ಯಗಳ ಹಿಂದೆ ಯಾವಾಗಲೂ ಉದ್ದೇಶವಿರುತ್ತದೆ. ಕೊಲೆಯ ಹಿಂದಿನ ಕಾರಣ ತಿಳಿದುಕೊಳ್ಳಬೇಕಿದೆ. ಇದನ್ನು ಪೊಲೀಸರು ಮಾಡುತ್ತಾರೆ. ನೀವು ಮಹಾನ್ ವ್ಯಕ್ತಿಗಳು. ನಿಮ್ಮಲ್ಲಿ ಯಾವುದೇ ಸುಳಿವು ಇದ್ದರೆ ಪೊಲೀಸರೊಂದಿಗೆ ಹಂಚಿಕೊಳ್ಳಿ.

2005ಕ್ಕಿಂತ ಮೊದಲು ಏನಾಗಿತ್ತು. ಆಗ ಅಪರಾಧ, ಹಿಂಸಾಚಾರ ಅತ್ಯಧಿಕವಾಗಿತ್ತು. 15 ವರ್ಷ ಆಡಳಿತ ನಡೆಸಿದವರು, ಪತಿ-ಪತ್ನಿಯ (ಲಾಲೂಪ್ರಸಾದ್ ಯಾದವ್ - ರಾಬ್ರೀ ದೇವಿ) ಆಡಳಿತದಲ್ಲಿ ಅಪರಾಧ ಪ್ರಕರಣ ಮುಗಿಲು ಮುಟ್ಟಿದ್ದಾಗ ನೀವೇಕೆ ಆ ಬಗ್ಗೆ ಸುಮ್ಮನಿದ್ದೀರಿ? ಏನಾದರೂ ಘಟನೆ ಸಂಭವಿಸಿದರೆ ನಾವು ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ನಿಮ್ಮ ಬಗ್ಗೆ ಗೌರವವಿದೆ. ಆದರೆ ನಿಮಗೆ ವಿಶೇಷ ಸಲಹೆ ನೀಡುವವರಿಗೆ ನೀವು ತರಬೇತಿ ನೀಡಬೇಕಾಗಿದೆ’ ಎಂದು ಹರಿಹಾಯ್ದರು.

ಕೊಲೆಯ ಬಗ್ಗೆ ಪತ್ರಕರ್ತರು ನೀಡುವ ಮಾಹಿತಿಯನ್ನು ತಕ್ಷಣ ಗಮನಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ನಿತೀಶ್ ಕುಮಾರ್ ಸೂಚಿಸಿದರು. ನಿತೀಶ್ ಕುಮಾರ್ ವರ್ತನೆ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ಮುಖಂಡ ತೇಜಸ್ವಿ ಯಾದವ್ ‘ನಿತೀಶ್ ಕುಮಾರ್ ಕ್ರಿಮಿನಲ್‌ಗಳೆದುರು ಶರಣಾಗಿದ್ದಾರೆ. ಅಪರಾಧ ನಡೆಯದಂತೆ ಯಾರೊಬ್ಬರೂ ತಡೆಯಲಾಗದು ಎಂದು ಹೇಳಿದ್ದಾರೆ. ಕ್ರಿಮಿನಲ್‌ಗಳ ಬಗ್ಗೆ ಮಾಹಿತಿಯಿದ್ದರೆ ಹಂಚಿಕೊಳ್ಳಿ ಎಂದು ಪತ್ರಕರ್ತರನ್ನೇ ಕೇಳಿದ್ದಾರೆ. ಮುಖ್ಯಮಂತ್ರಿಗಳು ಪತ್ರಕರ್ತರ ನಿಷ್ಟೆಯ ಬಗ್ಗೆ ಪ್ರಶ್ನೆಯೆತ್ತಿರುವುದು ಬಿಹಾರದ ಜನತೆಗೆ ಕೆಟ್ಟ ಸುದ್ದಿಯಾಗಿದೆ’ ಎಂದು ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X