Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ಲಸಿಕೆ ಅಭಿಯಾನಕ್ಕೆ ತನ್ನ...

ಕೋವಿಡ್-19 ಲಸಿಕೆ ಅಭಿಯಾನಕ್ಕೆ ತನ್ನ ದತ್ತಾಂಶಗಳ ಬಳಕೆಗೆ ಚು.ಆಯೋಗ ಅಸ್ತು

ವಾರ್ತಾಭಾರತಿವಾರ್ತಾಭಾರತಿ15 Jan 2021 10:03 PM IST
share
ಕೋವಿಡ್-19 ಲಸಿಕೆ ಅಭಿಯಾನಕ್ಕೆ ತನ್ನ ದತ್ತಾಂಶಗಳ ಬಳಕೆಗೆ ಚು.ಆಯೋಗ ಅಸ್ತು

ಹೊಸದಿಲ್ಲಿ,ಜ.15: ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಮತಗಟ್ಟೆ ಮಟ್ಟದಲ್ಲಿ 50 ವರ್ಷಕ್ಕೆ ಮೇಲ್ಪಟ್ಟ ಫಲಾನುಭವಿಗಳನ್ನು ಗುರುತಿಸಲು ಸರಕಾರಕ್ಕೆ ಸಂಪೂರ್ಣ ಸಹಕಾರವನ್ನು ನೀಡಲು ಚುನಾವಣಾ ಆಯೋಗವು ಒಪ್ಪಿಕೊಂಡಿದೆ. ಆದರೆ ಲಸಿಕೆ ಅಭಿಯಾನವು ಪೂರ್ಣಗೊಂಡ ಬಳಿಕ ಆರೋಗ್ಯ ಅಧಿಕಾರಿಗಳು ತನ್ನಿಂದ ಪಡೆದುಕೊಂಡ ದತ್ತಾಂಶಗಳನ್ನು ಅಳಿಸಬೇಕು ಎಂದು ಅದು ಬಯಸಿದೆ ಎಂದು ಈ ಬೆಳವಣಿಗೆಯನ್ನು ಬಲ್ಲ ಮೂಲಗಳು ಶುಕ್ರವಾರ ತಿಳಿಸಿವೆ.

ಮತಗಟ್ಟೆ ಮಟ್ಟದಲ್ಲಿ 50 ವರ್ಷಕ್ಕೂ ಮೇಲ್ಪಟ್ಟವರನ್ನು ಗುರುತಿಸಲು ನೆರವಾಗುವಂತೆ ಕೋರಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಕಳೆದ ವರ್ಷದ ಡಿ.31ರಂದು ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರವನ್ನು ಬರೆದಿದ್ದರು.

ದತ್ತಾಂಶಗಳ ಸುರಕ್ಷತೆಯ ಕುರಿತಂತೆ ,ಸೈಬರ್ ಭದ್ರತೆಯನ್ನು ಖಚಿತಪಡಿಸಲು ಹಾಲಿ ಅಸ್ತಿತ್ವದಲ್ಲಿರುವ ಅತ್ಯುತ್ತಮ ಪದ್ಧತಿಗಳನ್ನು ಸರಕಾರವು ಪಾಲಿಸಲಿದೆ ಎಂದು ಪತ್ರದಲ್ಲಿ ತಿಳಿಸಿದ್ದ ಭಲ್ಲಾ,ದತ್ತಾಂಶಗಳನ್ನು ಲಸಿಕೆ ನೀಡಿಕೆ ಉದ್ದೇಶಕ್ಕೆ ಮಾತ್ರ ಬಳಸಲಾಗುವುದು ಎಂದು ಆಯೋಗಕ್ಕೆ ಭರವಸೆ ನೀಡಿದ್ದರು.

ಸರಕಾರದ ಮನವಿಯ ಬಗ್ಗೆ ವಿವರವಾಗಿ ಚರ್ಚಿಸಿದ ಬಳಿಕ ಆಯೋಗವು ಲಸಿಕೆ ಅಭಿಯಾನಕ್ಕೆ ಸಂಪೂರ್ಣ ಸಹಕಾರ ನೀಡಲು ನಿರ್ಧರಿಸಿರುವುದಾಗಿ ಜ.4ರಂದು ಗೃಹ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದೆ ಎಂದು ಈ ಮೂಲಗಳು ಹೇಳಿವೆ.

 ಲಸಿಕೆ ಅಭಿಯಾನವು ಪೂರ್ಣಗೊಂಡ ಬಳಿಕ ಆರೋಗ್ಯ ಅಧಿಕಾರಿಗಳು ತನ್ನಿಂದ ಪಡೆದುಕೊಂಡಿರುವ ದತ್ತಾಂಶಗಳನ್ನು ಅಳಿಸಬೇಕು ಮತ್ತು ದೈನಂದಿನ ಸಮಸ್ಯೆಗಳನ್ನು ಬಗೆಹರಿಸಲು ತನ್ನ ಕೆಲವು ಹಿರಿಯ ಅಧಿಕಾರಿಗಳು ಗೃಹ ಸಚಿವಾಲಯದಲ್ಲಿಯ ನೋಡಲ್ ಅಧಿಕಾರಿಗಳ ಸಂಪರ್ಕದಲ್ಲಿರುತ್ತಾರೆ ಎಂದೂ ಆಯೋಗವು ಹೇಳಿದೆ.

ಶನಿವಾರದಿಂದ ಆರಂಭಗೊಳ್ಳುವ ಲಸಿಕೆ ಅಭಿಯಾನಕ್ಕಾಗಿ ಇತ್ತೀಚಿನ ಮಾರ್ಗಸೂಚಿಯಂತೆ 50 ವರ್ಷಕ್ಕೂ ಮೇಲಿನವರನ್ನು ಗುರುತಿಸಲು ಸರಕಾರವು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳ ಇತ್ತೀಚಿನ ಮತದಾರರ ಪಟ್ಟಿಗಳನ್ನು ಬಳಸಿಕೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X