Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಬಸ್‌ ನಲ್ಲಿ ಕಿರುಕುಳ ನೀಡಿದ...

ಮಂಗಳೂರು: ಬಸ್‌ ನಲ್ಲಿ ಕಿರುಕುಳ ನೀಡಿದ ವ್ಯಕ್ತಿ; ವೈರಲ್‌ ಆದ ಯುವತಿಯ ಇನ್‌ ಸ್ಟಾಗ್ರಾಂ ಪೋಸ್ಟ್

ವಾರ್ತಾಭಾರತಿವಾರ್ತಾಭಾರತಿ15 Jan 2021 10:34 PM IST
share
ಮಂಗಳೂರು: ಬಸ್‌ ನಲ್ಲಿ ಕಿರುಕುಳ ನೀಡಿದ ವ್ಯಕ್ತಿ; ವೈರಲ್‌ ಆದ ಯುವತಿಯ ಇನ್‌ ಸ್ಟಾಗ್ರಾಂ ಪೋಸ್ಟ್

ಮಂಗಳೂರು,ಜ.15: ಮಂಗಳೂರಿನ ಸಿಟಿ ಬಸ್ಸೊಂದರಲ್ಲಿ ವ್ಯಕ್ತಿಯೋರ್ವ 24ರ ಹರೆಯದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದು, ಈ ಕುರಿತಾದಂತೆ ಯುವತಿಯು ಸಾಮಾಜಿಕ ತಾಣ ಇನ್‌ ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಪೋಸ್ಟ್‌ ಮಾಡಿದ ಕೆಲವೇ ಸಮಯಗಳಲ್ಲಿ ಫೋಟೊ ವೈರಲ್‌ ಆಗಿದ್ದು, ಪ್ರಕರಣದ ಕುರಿತಾದಂತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಗಿ ಯುವತಿಯು ʼವಾರ್ತಾಭಾರತಿʼಗೆ ತಿಳಿಸಿದ್ದಾರೆ.

ಜ.14ರಂದು ಯುವತಿಯು ಕೊಣಾಜೆಯಿಂದ ಮಂಗಳೂರಿನ ಪಂಪ್‌ ವೆಲ್‌ ಗೆ ಖಾಸಗಿ ಸಿಟಿ ಬಸ್‌ ಮುಖಾಂತರ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಬಸ್‌ ಹತ್ತಿದ್ದು, ಸೀಟುಗಳು ಖಾಲಿಯಿದ್ದರೂಆತ ಯುವತಿಯ ಬಳಿ ಬಂದು ಕುಳಿತಿದ್ದ. ಯುವತಿಯ ಹೇಳಿಕೆ ಪ್ರಕಾರ “ಕೆ.ಎಸ್.‌ ಹೆಗ್ಡೆ ಆಸ್ಪತ್ರೆಯ ಸಮೀಪ ಬಸ್‌ ನಿಲ್ಲಿಸಿದಾಗ ಆತ ನನ್ನೊಂದಿಗೆ  ಅನುಚಿತವಾಗಿ ವರ್ತಿಸಲು ಹಾಗೂ ದೇಹವನ್ನು ಮುಟ್ಟಲು ಪ್ರಾರಂಭಿಸಿದ್ದ. ಈ ವೇಳೆ ನಾನು ಆತನನ್ನು ಗದರಿದ ಕಾರಣ ಬೆದರಿದ ಆತ ಬೇರೆ ಸೀಟಿನಲ್ಲಿ ಕುಳಿತು ಮುಂದಿನ ನಿಲ್ದಾಣದಲ್ಲಿ ಇಳಿದಿದ್ದ”.

“ಮೂರು ನಿಲ್ದಾಣ ಕಳೆದ ಬಳಿಕ ಆತ ಮತ್ತೊಂದು ಬಸ್‌ ನಿಂದ ಇಳಿದು ಮತ್ತೊಮ್ಮೆ ಇದೇ ಬಸ್‌ ಹತ್ತಿ ನನ್ನ ಪಕ್ಕ ಕುಳಿತುಕೊಂಡ. ಮೊದಲಿನಂತೆಯೇ ದೇಹವನ್ನು ಸ್ಪರ್ಶಿಸಲು ಆರಂಭಿಸಿದ. ಈ ವೇಳೆ ಕೋಪಗೊಂಡ ನಾನು, ಬೇರೆ ಸೀಟಿನಲ್ಲಿ ಕುಳಿತುಕೊಳ್ಳುವಂತೆ ಹೇಳಿದೆ. ಆದರೆ ಆತ ಮತ್ತೆ ತನ್ನ ಕ್ರಿಯೆಯನ್ನು ಪುನರಾರಂಭಿಸಿದ. ನಾನು ಜೋರಾಗಿ ಗದರುತ್ತಿದ್ದರೂ ಕೂಡಾ ಬಸ್‌ ನಲ್ಲಿರುವ ಚಾಲಕನಾಗಲಿ, ನಿರ್ವಾಹಕನಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ”

“ನಾನು ನಿನ್ನ ಫೋಟೊವನ್ನು ತೆಗೆದು ಸಾಮಾಜಿಕ ತಾಣದಲ್ಲಿ ಪೋಸ್ಟ್‌ ಮಾಡುತ್ತೇನೆ ಅಂದಾಗ ಆತ ಅನಿರೀಕ್ಷಿತವಾಗಿ ತನ್ನ ಮಾಸ್ಕ್‌ ತೆಗೆದು ಪೋಸ್‌ ಕೊಡಲು ಆರಂಭಿಸಿದ. ಫೋಟೊ ಕ್ಲಿಕ್ಕಿಸಿದ ಬಳಿಕ ತ್ಯಾಂಕ್ಯೂ ಹೇಳಿದ. ಈ ಪೋಸ್ಟ್‌ ಅನ್ನು ನಿಮ್ಮಲ್ಲರಿಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರಕಟಿಸುತ್ತಿದ್ದೇನೆ. 99% ಮಹಿಳೆಯರು ದಿನಾ ಸಿಟಿ ಬಸ್‌ ಗಳಲ್ಲಿ ಇಂತಹಾ ಕಿರುಕುಳ ಅನುಭವಿಸುತ್ತಾರೆ. ಅವರು ಯಾರೂ ತಮ್ಮ ಭವಿಷ್ಯ ಮತ್ತು ಮಾನಕ್ಕೆ ಹೆದರಿ ಯಾರ ಮುಂದೆಯೂ ಹೇಳಿಕೊಳ್ಳುವುದಿಲ್ಲ ಮತ್ತು ಪ್ರತಿಕ್ರಿಯಿಸುವುದಿಲ್ಲ. ಇನ್ನು ಅಲ್ಲಿರುವ ಸಹ ಪ್ರಯಾಣಿಕರಾಗಲಿ, ಪೊಲೀಸರಾಗಲಿ, ಬಸ್‌ ಸಿಬ್ಬಂದಿಯಾಗಲಿ ಯಾವುದೇ ಪ್ರತಿಕ್ರಿಯೆ ನೀಡದೇ ರಿಯಾಲಿಟಿ ಶೋ ನೋಡುವಂತೆ ವೀಕ್ಷಿಸುತ್ತಿರುತ್ತಾರೆ” ಎಂದು ತಮ್ಮ ಇನ್‌ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ಕುರಿತು ʼವಾರ್ತಾಭಾರತಿʼ ಯುವತಿಯೊಂದಿಗೆ ಕಾನೂನು ಕ್ರಮದ ಕುರಿತು ವಿಚಾರಿಸಿದಾಗ, “ಈ ಕುರಿತು ನಾನು ಈಗಾಗಲೇ ಮಹಿಳಾ ಆಯೋಗಕ್ಕೆ ದೂರು ನೀಡಿದ್ದೇನೆ. ಈ ವ್ಯಕ್ತಿಯನ್ನು ಬಂಧಿಸುವ ಅವಶ್ಯಕತೆಯಿಲ್ಲ. ಇಂತಹಾ ಒಬ್ಬನನ್ನು ಬಂಧಿಸಿದರೆ ಯಾವುದೇ ಪ್ರಯೋಜನವಿಲ್ಲ. ದಿನನಿತ್ಯ ಇದೇ ರೀತಿ ಬಸ್‌ ಗಳಲ್ಲಿ ಮತ್ತು ಸಾರ್ವಜನಿಕ ಸಾರಿಗೆಗಳಲ್ಲಿ ಹಲವಾರು ಮಹಿಳೆಯರು, ಮಕ್ಕಳು ಮತ್ತು ಪುರುಷರು ಕೂಡಾ ತೊಂದರೆಗೊಳಗಾಗುತ್ತಾರೆ. ನನಗೆ ಈ ಕುರಿತಾದಂತೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕಿತ್ತು. ಇಂತಹಾ ಘಟನೆಗಳು ನಡೆದಾಗ ಹಲವರು ಪ್ರತಿಕ್ರಿಯಿಸುವುದಿಲ್ಲ. ಆದರೆ ಇನ್ನು ಮುಂದೆ ಎಲ್ಲರೂ ಪ್ರತಿಕ್ರಿಯಿಸುವ ಅಗತ್ಯವಿದೆ. ಒಬ್ಬನನ್ನು ಬಂಧಿಸಿ ಏನೂ ಸಾಧಿಸಲಾಗುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಈ ಪ್ರಕರಣದ ಕುರಿತಾದಂತೆ ಯುವತಿಯು ಇನ್‌ ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಭಾರೀ ಪ್ರತಿಕ್ರಿಯೆಯು ಕಂಡು ಬಂದಿದ್ದು, ಈಗಾಗಲೇ 75,000ಕ್ಕೂ ಹೆಚ್ಚು ಮಂದಿ ಪೋಸ್ಟ್‌ ಲೈಕ್‌ ಮಾಡಿದ್ದಾರೆ. ಹಲವಾರು ಮಂದಿ ತಮ್ಮ ಸ್ಟೇಟಸ್‌ ಗಳಲ್ಲಿ ಮತ್ತು ಖಾತೆಗಳಲ್ಲಿ ಶೇರ್‌ ಮಾಡಿ, ಈ ಕುರಿತಾದಂತೆ ಜಾಗೃತಿ ಮೂಡಿಸುವಲ್ಲಿ ಕೈಜೋಡಿಸಿದ್ದಾರೆ.

ಈ ಕುರಿತು ವಾರ್ತಾಭಾರತಿಯೊಂದಿಗೆ ಮಾತನಾಡಿದ ಮಹಿಳಾ ಪೊಲೀಸ್‌ ಠಾಣೆಯ ಎಸ್ಸೈ ರೋಸಮ್ಮ, "ಯುವತಿಯು ದೂರನ್ನು ಬರಹದ ಮೂಲಕ ನೀಡದಿರುವ ಕಾರಣ ಅಪರಿಚಿತ ವ್ಯಕ್ತಿಯ ವಿರುದ್ಧ ನಾವು ಯಾವುದೇ ಎಫ್‌ʼಐಆರ್‌ ದಾಖಲಿಸಿಲ್ಲ. ಈ ಕುರಿತಾದಂತೆ ನಾವು ಅಭಿಯಾನ ಕೈಗೊಳ್ಳಲು ತೀರ್ಮಾನಿಸಿದ್ದೇವೆ. ಯಾವುದೇ ಮಹಿಳೆಯರು ಇಂತಹಾ ಪ್ರಕರಣಗಳು ನಡೆದಾಗ ಸುಮ್ಮನಿರದೇ ನಿಮ್ಮಿಂದಾಗುವ ಪ್ರತಿಕ್ರಿಯೆಯನ್ನು ನೀಡಬೇಕು” ಎಂದು ಹೇಳಿಕೆ ನೀಡಿದ್ದಾರೆ.

View this post on Instagram

A post shared by Azlins_quotes (@azlins_quotes)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X