Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಎಸ್‌ವೈ ಸಿಎಂ ಆಗಬೇಕೆಂದು ಹೊತ್ತಿದ್ದ...

ಬಿಎಸ್‌ವೈ ಸಿಎಂ ಆಗಬೇಕೆಂದು ಹೊತ್ತಿದ್ದ ಹರಕೆ ತೀರಿಸಲು ಸರಕಾರದ ಹಣಕ್ಕೆ ಮೊರೆ ಹೋದ ಬಿಜೆಪಿ ಶಾಸಕ !

ವಾರ್ತಾಭಾರತಿವಾರ್ತಾಭಾರತಿ15 Jan 2021 10:36 PM IST
share
ಬಿಎಸ್‌ವೈ ಸಿಎಂ ಆಗಬೇಕೆಂದು ಹೊತ್ತಿದ್ದ ಹರಕೆ ತೀರಿಸಲು ಸರಕಾರದ ಹಣಕ್ಕೆ ಮೊರೆ ಹೋದ ಬಿಜೆಪಿ ಶಾಸಕ !

ಚಿಕ್ಕಮಗಳೂರು, ಜ.15: ತಮ್ಮ ಬೇಡಿಕೆ ಈಡೇರಿಸುವಂತೆ ದೇವರಿಗೆ ಹರಕೆ ಹೊರುವ ಸಾರ್ವಜನಿಕರು, ಭಕ್ತರು ತಮ್ಮ ಬೇಡಿಕೆ ಈಡೇರಿದಾಗ ತಮ್ಮ ಸ್ವಂತ ಹಣದಲ್ಲಿ ಹರಕೆ ಈಡೇರಿಸುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಬ್ಬರು ಜನಪ್ರತಿನಿಧಿ ತಾವು ಹೊತ್ತ ಹರಕೆ ತೀರಿಸಲು ಸರಕಾರದ ಹಣಕ್ಕೆ ಮೊರೆ ಹೋಗಿರುವುದು ಬೆಳಕಿಗೆ ಬಂದಿದೆ.

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಯಡಿಯೂರಪ್ಪ ರಾಜ್ಯದ ಸಿಎಂ ಆಗಬೇಕೆಂದು ತಾಲೂಕಿನ ಫಲ್ಗುಣಿ ಕಾಲನಾಥೇಶ್ವರ ದೇವರಿಗೆ ಹರಕೆ ಹೊತ್ತಿದ್ದು, ಯಡಿಯೂರಪ್ಪ ಸಿಎಂ ಆದಲ್ಲಿ ದೇವಾಲಯಕ್ಕೆ ಮರದ ರಥ ಮಾಡಿಸಿ ಕೊಡುವುದಾಗಿಯೂ ಹಾಗೂ ತಮ್ಮ ಕ್ಷೇತ್ರದಲ್ಲೇ ಇರುವ ಬೆಟಗೆರೆ ಕಾಲಭೈರೇಶ್ವರ ದೇವಾಲಯದ ಜೀರ್ಣೋದ್ಧಾರ ಮಾಡುವುದಾಗಿಯೂ ಹರಕೆ ಹೊತ್ತಿದ್ದರು ಎನ್ನಲಾಗಿದೆ.

ಕುಮಾರಸ್ವಾಮಿ ಹರಕೆ ಹೊತ್ತಂತೆ ಬಿ.ಎಸ್.ಯಡಿಯೂರಪ್ಪ ಸದ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದು, ಆದರೆ ಹರಕೆ ತೀರಿಸಲು ಶಾಸಕ ಕುಮಾರಸ್ವಾಮಿ ತಮ್ಮ ಸ್ವಂತ ಹಣ ಖರ್ಚು ಮಾಡದೇ ಸರಕಾರದ ಹಣದ ಮೊರೆ ಹೋಗಿದ್ದಾರೆ. ತಾನು ಹೊತ್ತ ಹರಕೆ ತೀರಿಸಲು ಹಣ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದಿದ್ದು, ಈ ಪತ್ರಕ್ಕೆ ಮನ್ನಣೆ ನೀಡಿರುವ ಸಿಎಂ ಯಡಿಯೂರಪ್ಪ ಅವರು ಫಲ್ಗುಣಿ ಕಾಲನಾಥೇಶ್ವರ ದೇವಾಲಯಕ್ಕೆ ಮರದ ರಥ ನಿರ್ಮಾಣ ಮಾಡಲು 25 ಲಕ್ಷ ರೂ. ಹಾಗೂ ಬೆಟಗೆರೆ ಕಾಲಭೈರವೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ 5 ಲಕ್ಷ ಸೇರಿ ಒಟ್ಟು 30 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ.

ಶಾಸಕ ಕುಮಾರಸ್ವಾಮಿ ತಾನು ಹೊತ್ತಿದ್ದ ಹರಕೆ ವಿಚಾರ ಹಾಗೂ ಸಿಎಂ ಹಣ ಬಿಡುಗಡೆ ಮಾಡಿರುವ ವಿಚಾರವನ್ನು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ಮುಖ್ಯಮಂತ್ರಿಗೆ ಅವರು ಬರೆದ ಪತ್ರ ಹಾಗೂ ಅದೇ ಪತ್ರದ ಮೇಲೆ ಸಿಎಂ ಹಣ ಬಿಡುಗಡೆಗೆ ಆದೇಶ ಮಾಡಿ ಸಹಿ ಮಾಡಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಶಾಸಕ ಕುಮಾರಸ್ವಾಮಿ ಅವರು ತಮ್ಮ ಹರಕೆಯನ್ನು ಸರಕಾರದ ಹಣದಲ್ಲಿ ತೀರಿಸಲು ಮುಂದಾಗಿರುವುದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ತಮ್ಮ ಹರಕೆಯನ್ನು ಸ್ವಂತ ಹಣದಲ್ಲಿ ತೀರಿಸಬೇಕೇ ಹೊರತು ಸರಕಾರದ ಹಣದಲ್ಲಿ ಅಲ್ಲ ಎಂದು ಕಮೆಂಟ್ ಮಾಡಿದ್ದಾರೆ.

ಸಂಕ್ರಾಂತಿ ಹಬ್ಬದ ಸಿಹಿ ಸುದ್ದಿ ನಮ್ಮ ಮೆಚ್ಚಿನ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆದರೆ ಫಲ್ಗುಣಿಯ ಶ್ರೀಕಲಾನಾಥೇಶ್ವರ ದೇವಸ್ಥಾನಕ್ಕೆ...

Posted by MP Kumara Swamy on Wednesday, 13 January 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X