ಹುಬ್ಬಳ್ಳಿ: ಜ.17ರಂದು ಇಹ್ಸಾನ್ ಸೆಂಟರ್ ಉದ್ಘಾಟನಾ ಸಮಾರಂಭ
ಹುಬ್ಬಳ್ಳಿ, ಜ.16: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಪ್ರಾಯೋಜಕತ್ವದಲ್ಲಿ ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದಲ್ಲಿ ಇಹ್ಸಾನ್ ಸೆಂಟರ್ ಜ.17 ರಂದು ರವಿವಾರ ಬೆಳಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಇಹ್ಸಾನ್ ಸಮಿತಿಯ ದಶ ವಾರ್ಷಿಕ ಘೋಷಣೆಯೂ ನಡೆಯಲಿದೆ.
ಇಹ್ಸಾನ್ ಕರ್ನಾಟಕ ಸಮಿತಿ ಮುಖ್ಯಸ್ಥ ಮೌಲಾನಾ ಎನ್.ಕೆ.ಎಂ ಶಾಫಿ ಸಅದಿ ಬೆಂಗಳೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹುಬ್ಬಳ್ಳಿ ಗ್ರಾಮಾಂತರ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯಾ ಉದ್ಘಾಟನಾ ಭಾಷಣ ಹಾಗೂ ಇಹ್ಸಾನ್ ಕರ್ನಾಟಕ ಸಮಿತಿ ಉಪಾಧ್ಯಕ್ಷ ಡಾ.ಎಂ.ಎಸ್.ಎಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಅವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಇಹ್ಸಾನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಎಸ್.ಪಿ ಹಂಝ ಸಖಾಫಿ ಬಂಟ್ವಾಳ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಹುಬ್ಬಳ್ಳಿ ನಗರ ಶಾಸಕ ಅರವಿಂದ್ ಬೆಲ್ಲದ್, ಹುಬ್ಬಳ್ಳಿ ಮಾಜಿ ಶಾಸಕ ಅಬ್ದುಲ್ ಹಕೀಮ್ ಹಿಂಡಿಸಗೇರಿ, ಕರ್ನಾಟಕ ವಕ್ಫ್ ಸದಸ್ಯರಾದ ಅಡ್ವಕೇಟ್ ಆಸಿಫ್ ಅಲಿ ಶೇಖ್, ಅನ್ವರ್ ಬಾಷಾ, ಯಾಕೂಬ್ ಯೂಸುಫ್, ಕರ್ನಾಟಕ ಮುಸ್ಲಿಮ್ ಜಮಾಅತ್ ಉಪಾಧ್ಯಕ್ಷ ಸೈಫುಲ್ಲಾ ಸಾಬ್, ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಅಧ್ಯಕ್ಷ ಡಾ.ಶೇಖ್ ಬಾವ ಮಂಗಳೂರು, ಪ್ರಧಾನ ಕಾರ್ಯದರ್ಶಿ ಖಮರುದ್ದೀನ್ ಗೂಡಿನಬಳಿ, ಕೆಸಿಎಫ್ ಸೌದಿ ಅರೇಬಿಯಾ ನಾಯಕರಾದ ಹಂಝ ಮೈಂದಾಳ, ಮುಸ್ತಫಾ ಹಾಸನ್, ಇಸ್ಮಾಯಿಲ್ ಜೋಗಿಬೆಟ್ಟು ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.