Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ. 19: ಹೆಜಮಾಡಿ ಸರ್ವಋತು ಬಂದರಿಗೆ...

ಜ. 19: ಹೆಜಮಾಡಿ ಸರ್ವಋತು ಬಂದರಿಗೆ ಮುಖ್ಯಮಂತ್ರಿಯಿಂದ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ16 Jan 2021 11:14 PM IST
share

ಪಡುಬಿದ್ರಿ : ಪರಿಸರದ ಮೀನುಗಾರರ 45 ವರ್ಷಗಳ ಸುದೀರ್ಘ ಹೋರಾಟದ ಫಲವಾಗಿ 180.8ಕೋಟಿ ರೂ. ಗಳ ಯೋಜನೆ, ಹೆಜಮಾಡಿಯ ಸರ್ವಋತು ಮೀನುಗಾರಿಕಾ ಬಂದರು ಕಾಮಗಾರಿಗೆ ಜನವರಿ 19ರಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಶಿಲಾನ್ಯಾಸಗೈಯ್ಯಲಿರುವರು.

ಮೀನುಗಾರಿಕಾ ಇಲಾಖೆಗೆ ಸೇರಿರುವ ಸುಮಾರು 70ಎಕ್ರೆ ಜಾಗದಲ್ಲಿನ ಭೂಮಿಯಲ್ಲಿ ಮೀನುಗಾರಿಕಾ ಬಂದರಿಗಾಗಿ ಸುಸಜ್ಜಿತ ಮೀನುಗಾರಿಕಾ ಜಟ್ಟಿ, ಬ್ರೇಕ್‍ವಾಟರ್ ಸೌಲಭ್ಯ, ಬೋಟ್ ರಿಪೇರಿ ಶೆಡ್, ಹರಾಜು ಮಳಿಗೆ, ವರ್ಕ್‍ಮೆನ್ ಶೆಡ್, ಕಚೇರಿಗಳು, ಶೌಚಾಲಯ, ಕ್ಯಾಟರಿಂಗ್ ಸೌಲಭ್ಯಗಳೊಂದಿಗೆ ಹೆಜಮಾಡಿ ಬಂದರಿನ ನಿರ್ಮಾಣವಾಗಲಿದೆ. 

ಚೆನ್ನೈನ ಶ್ರೀಪತಿ ಎಸೋಸಿಯೇಟ್ಸ್ ಕಂಪೆನಿಯು ಟೆಂಡರ್ ಮೂಲಕವಾಗಿ ಈ ಯೋಜನೆಯನ್ನು ಮೂರು ವರ್ಷಗಳಲ್ಲಿ ಕಾರ್ಯ ಗತಗೊಳಿಸಲಿದೆ ಎಂದು ಬಂದರು ಹಾಗೂ ಮೀನುಗಾರಿಕಾ ಇಲಾಖಾ ಸಹಾಯಕ ಕಾರ್ಯಪಾಲಕ ಎಂಜೀನಿಯರ್ ಉದಯ ಕುಮಾರ್ ತಿಳಿಸಿದ್ದಾರೆ.

ಮಂಗಳೂರು, ಉಡುಪಿ ಭಾಗದ ಮೀನುಗಾರರು ತಮ್ಮ ಕಾಯಕದ ನಡುವೆ ಸಮುದ್ರದಲ್ಲಿ ಹಂಚಿ ಹೋಗಿರುವ ವೇಳೆ ಮಳೆಗಾಲದ ವಿಪರೀತ ಮಳೆ, ಸುಂಟರಗಾಳಿ, ಪ್ರಕ್ಷುಬ್ದ ವಾತಾವರಣದಲ್ಲಿ ದಡ ಸೇರಲು ಮಲ್ಪೆ ಅಥವಾ ಮಂಗಳೂರು ಮೀನುಗಾರಿಕಾ ಬಂದರಿಗೇ ಧಾವಿಸಬೇಕಿತ್ತು. ಈ ಬಗ್ಗೆ ಇಲ್ಲಿನ ಮೀನುಗಾರರು ಹೋರಾಟ ಹಾಗೂ ಪ್ರಯತ್ನದಿಂದ 99ಕೋಟಿ ರೂ. ಗಳ ಮೀನುಗಾರಿಕಾ ಜಟ್ಟಿ ಹೆಜಮಾಡಿ ಕೋಡಿಯಲ್ಲಿ ನಿರ್ಮಾಣಗೊಂಡು ವೀರಪ್ಪ ಮೊಯಿಲಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಲೋಕಾರ್ಪಣೆಗೊಂಡಿತ್ತು. ಮುಂದೆ ಇಲ್ಲಿ ಹೂಳಿನ ಸಮಸ್ಯೆ ಅಧಿಕವಾಗಿ ಬೋಟುಗಳ ಒಳ, ಹೊರ ಸಂಚಾರಕ್ಕೆ ತೀರಾ ಅಡಚಣೆಗಳಾಗಿ ಮೀನುಗಾರಿಕೆಗೆ ತೊಂದರೆ ಉಂಟಾಗಿತ್ತು. ಬಳಿಕ ಇಲ್ಲಿನ ಮೀನುಗಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರು.

ಪರಿಶೀಲನೆ: ಕಾಪು ಶಾಸಕ ಲಾಲಾಜಿ ಮೆಂಡನ್ ನೇತೃತ್ವದಲ್ಲಿ ಬಂದರು ಹಾಗೂ ಮೀನುಗಾರಿಕಾ ಇಲಾಖೆಯ ವಿವಿಧ ಅಧಿಕಾರಿ ಗಳು ಹೆಜಮಾಡಿ ಕೋಡಿಗೆ ಭೇಟಿಯಿತ್ತು ಶಿಲಾನ್ಯಾಸಕ್ಕಾಗಿ ಸ್ಥಳ ಪರಿಶೀಲನೆಯನ್ನು ಶನಿವಾರ ನಡೆಸಿತು. ಹೆಜಮಾಡಿ ಹಾಗೂ ಪರಿಸರದ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

ಬಂದರು ಹಾಗೂ ಮೀನುಗಾರಿಕಾ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಲಾಲಾಜಿ ಮೆಂಡನ್ ಸಹಿತ ಜಿಲ್ಲೆಯ ಶಾಸಕರು ಈ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X