Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವಜನ ಸಬಲೀಕರಣಕ್ಕಾಗಿ ಯುವ ಸಬಲೀಕರಣ...

ಯುವಜನ ಸಬಲೀಕರಣಕ್ಕಾಗಿ ಯುವ ಸಬಲೀಕರಣ ನಿಗಮ ಅನಿವಾರ್ಯ : ಕೆ.ಟಿ.ತಿಪ್ಪೇಸ್ವಾಮಿ

ಯುವಜನ ಹಕ್ಕಿನ ಮೇಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ17 Jan 2021 2:31 PM IST
share
ಯುವಜನ ಸಬಲೀಕರಣಕ್ಕಾಗಿ ಯುವ ಸಬಲೀಕರಣ ನಿಗಮ ಅನಿವಾರ್ಯ : ಕೆ.ಟಿ.ತಿಪ್ಪೇಸ್ವಾಮಿ

ಮಂಗಳೂರು : ರಾಜ್ಯದ ಎರಡು ಕೋಟಿಗೂ ಅಧಿಕ  ಯುವಜನತೆಗಾಗಿ ಸಬಲೀಕರಣ ನಿಗಮ ಸ್ಥಾಪನೆ ಮಾಡುವುದು ಅನಿವಾರ್ಯ. ಏಳು ವರ್ಷಗಳಿಂದ ಈ ಬಗ್ಗೆ ಕರ್ನಾಟಕದ ಹಲವು ಕಡೆ, ಹಲವು ಸಂಘಟನೆಗಳಿಂದ ಒತ್ತಾಯ ನಡೆಯುತ್ತಿದೆ ಎಂದು ಭಾರತ ಸರಕಾರದ ರಾಷ್ಟ್ರೀಯ ಯುವಜನ ಅಭಿವೃದ್ಧಿ ನಿಧಿ ಕಾರ್ಯಕಾರಿಣಿ ಮತ್ತು ಪರಿಷತ್ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ನಗರದ  ಕುದ್ರೋಳಿಯ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಸಭಾಂಗಣದಲ್ಲಿಂದು ಸಂವಾದ ಯುವ ಸಂಪನ್ಮೂಲ ಕೇಂದ್ರದ ವತಿಯಿಂದ ಹಮ್ಮಿಕೊಂಡ  ಯುವಜನ ಹಕ್ಕಿನ ಮೇಳವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಮಕ್ಕಳ ಹಕ್ಕುಗಳ ಘೋಷಣೆಯಾದಂತೆ ಯುವಜನ ಹಕ್ಕುಗಳು ಘೋಷಣೆಯ ಆಗಬೇಕು ಯುವಜನರ ಸಬಲೀಕರಣಕ್ಕಾಗಿ ಯುವಜನರ ಶಿಕ್ಷಣ, ಆರೋಗ್ಯ, ಉದ್ಯೋಗದ ಪ್ರಸ್ತಾವಗಳು ಇರುವ, ಭದ್ರತೆಯ ಭರವಸೆ ನೀಡುವ, ಯುವಕ ಯುವತಿಯರ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ  ಹಕ್ಕುಗಳ ನೆಲೆಯ ರಾಜ್ಯ ಮತ್ತು ರಾಷ್ಟ್ರೀಯ ಯುವನೀತಿ ರೂಪಿಸಬೇಕು, ಈಗ ಕೇಂದ್ರವು ತಯಾರಿ ಮಾಡುತ್ತಿರುವ ಯುವನೀತಿಯು ಇಂತಹ ಅಂಶಗಳನ್ನು ಒಳಗೊಂಡಿರಬೇಕು. ಈ ಹಿಂದೆ ಕರ್ನಾಟಕ ರಾಜ್ಯ ಯುವ ನೀತಿ 2012 ರ ಶಿಫಾರಸಿನಂತೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಾಗಿ ಮರು ನಾಮಕರಣಗೊಡಿತು. ಹೆಸರು ಬದಲಾಯಿತು ಆದರೆ ಸಬಲೀಕರಣದ ಕಾರ್ಯಕ್ರಮಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯಲಿಲ್ಲ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ ಪೂರ್ಣ ಪ್ರಮಾಣದ ಯುವಜನ ನೀತಿ ಮರು ಪರಿಷ್ಕರಣಗೊಂಡು ಜಾರಿಯಾಗ ಬೇಕಾಗಿದೆ. ಮುಖ್ಯ ಮಂತ್ರಿ ಯುವ ಜನತೆಗೆ ಬಜೆಟ್  ಮಂಡನೆ ಮಾಡುವ ಭರವಸೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರು ಯುವ ಜನರಿಗಾಗಿ ಪ್ರತ್ಯೇಕ ಗ್ರಾಮ ಸಭೆ ನಡೆಸುವ ಭರವಸೆ ನೀಡಿರುವುದು ಆಶಾದಯಕ ಬೆಳವಣಿಗೆ ಯಾಗಿದೆ ಎಂದು ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರು ಸಂವಾದ ಯುವ ಸಂಪನ್ಮೂಲ ಕೇಂದ್ರದ ಸಂಚಾಲಕ ದೇವರಾಜ್ ಪ್ರಸ್ತಾವಿಕವಾಗಿ ಮಾತನಾಡುತ್ತಾ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪರಿಸರ, ಆರೋಗ್ಯ ,ಲಿಂಗಸಮಾನತೆ, ಸಾಮಾಜಿಕ ನ್ಯಾಯ, ಸಾಮಾಜಿಕ ಸೌಹಾರ್ದತೆಯ ವಿಚಾರದಲ್ಲಿ ಯುವಜನ ಶಿಕ್ಷಣದಲ್ಲಿ ತೊಡಗಿಸಿಕೊಂಡಿರುವ ಸಂವಾದ ಸಂಸ್ಥೆ ಮತ್ತು ಅದರ ಅಂಗವಾದ ಬದುಕು ಜೀವನೋಪಾಯ ಕಲಿಕಾ ಕೇಂದ್ರ ಹಾಗೂ ಸಂವಾದದ ಒಡನಾಡಿ ಯುವಜನ ಮುಂದಾಳುಗಳ ಸಾಮೂಹಿಕ ಪ್ರಯತ್ನ. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಯುವಜನ ಮೇಳಗಳು ವಿಕೇಂದ್ರಿತವಾಗಿ  ನಡೆಯುತ್ತಿದೆ ಎಂದು  ತಿಳಿಸಿದ್ದಾರೆ.

ಸಮಾರಂಭದಲ್ಲಿ ಚಲನ ಚಿತ್ರನಟ, ಕಲಾವಿದ  ಮೋಹನ್ ಶ್ರೇಣಿ, ಮಂಗಳೂರು ಸಂವಾದ ಯುವ ಸಂಪನ್ಮೂಲ ಕೇಂದ್ರದ ಸಂಚಾಲಕಿ ಮಂಜುಳಾ ಸ್ವಾಗತಿಸಿದರು. ಇದೇ ಸಂದರ್ಭ ದಲ್ಲಿ ವಿವಿಧ ಕ್ಷೇತ್ರದ ಯುವ ಸಾಧಕರಾದ ಕೊಳಲು ವಾದಕ ವೇಣು ಗೋಪಾಲ ದೇಮುಂಡ, ಸ್ಯಾಕ್ಸೋಪೋನ್ ವಾದಕ ಅಶ್ವಿನಿ, ಮಹಿಳಾ ಆಟೋ ಚಾಲಕಿ ಪೂರ್ಣಿಮಾ, ಪ್ರಾಣಿ ಸಂರಕ್ಷಕ ತೌಸಿಪ್ ಅಹಮ್ಮದ್, ತೆಂಗಿನ ಮರ ಹತ್ತುವ ಶ್ರಮಿಕ ಸಾಧಕ ಸುನಿಲ್ ಕೊರಗ, ಪೇಪರ್ ಸೀಡ್ ಸ್ಥಾಪಕ ನಿತಿನ್ ವಾಸ್, ಆ್ಯಂಟಿ ಪೊಲ್ಯೂಶನ್ ಡ್ರೈವ್ ಸಂಸ್ಥೆ ಯ ನಿರ್ದೇಶಕ ಅಬ್ದುಲ್ ಎ.ರಹ್ಮಾನ್  ಪರವಾಗಿ ವ್ಯವಸ್ಥಾಪಕ ಮುಹಮ್ಮದ್ ಆಸಿಫ್ ರವರನ್ನು ಅತಿಥಿಗಳು ಗೌರವಿಸಿ ಸನ್ಮಾನಿಸಿದರು.

ನಾದ ಮಣಿ ನಾಲ್ಕೂರು, ತರಿಕಿಟ ಕಲಾವಿದರು ಹಾಗೂ ವಿವಿಧ ಸಂವಾದ ಯುವ ಮನ್ನಡೆ ತಂಡದ ಕಲಾವಿದರು ಮೇಳದಲ್ಲಿ ಜಾಗೃತಿ ಹಾಡು ಹಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X