Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನಕದಾಸರನ್ನು ದಾಸ ಎಂದು ಕರೆಯುವುದು...

ಕನಕದಾಸರನ್ನು ದಾಸ ಎಂದು ಕರೆಯುವುದು ಸರಿಯಲ್ಲ: ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ

ವಾರ್ತಾಭಾರತಿವಾರ್ತಾಭಾರತಿ17 Jan 2021 8:03 PM IST
share
ಕನಕದಾಸರನ್ನು ದಾಸ ಎಂದು ಕರೆಯುವುದು ಸರಿಯಲ್ಲ: ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ

ಮೈಸೂರು,ಜ.17: ದಾಸ ಅಂದರೆ ಸೇವಕ, ಗುಲಾಮ ಎನ್ನುವ ಅರ್ಥವಿದೆ. ಕನಕರು ತಮ್ಮನ್ನು ಹರಿಯ ದಾಸ ಅಂತ ಅಂದುಕೊಂಡಿರಬಹುದು. ಆದರೆ, ನಾವು ಅವರಿಗೆ ದಾಸ ಅಂತ ಬಳಸುವುದು ಅಪಮಾನ ಮಾಡಿದಂತೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರು ವಿವಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ರವಿವಾರ “ಕನಕದಾಸರ 533ನೇ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ದೀಪ ಬೆಳಗುವ ಮೂಲಕ  ಚಾಲನೆ ನೀಡಿದರು.

ಈ ಸಂದರ್ಭ ಪ್ರೊ.ಆರವಿಂದ ಮಾಲಗತ್ತಿ ಅವರು ಮಾತನಾಡಿ, ದಾಸತ್ವವ ಮೀರಿದ ವ್ಯಕ್ತಿತ್ವ ಕನಕರಿಗೆ ಇದೆ. ತಿಮ್ಮಪ್ಪ ಕನಕನಾಗಿ, ಕನಕ ದಾಸರಾಗಿ, ತ್ರಿವಿಕ್ರಮ ದಾಸನಾಗಿ ಬದಲಾಗಿದ್ದಾರೆ. ಕನಕರು ದಾಸ ಎನ್ನುವ ಪದದ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಕೂಳ ದಾಸ, ಮೂಳ ದಾಸ, ಮಾದಿಗ ದಾಸ, ಹೊಲೆಯ ದಾಸ ಅಂತ ಕೀರ್ತನೆಗಳಲ್ಲಿ ಬರೆದಿದ್ದಾರೆ ಎಂದು ಹೇಳಿದರು.

ನಿಂದಿಸುವ ಪದಗಳನ್ನು ಸ್ವಾಭಿಮಾನದ ಪದಗಳಾಗಿ ಕಾವ್ಯದಲ್ಲಿ ಬಳಸುತ್ತಿದ್ದರು ಅನ್ನಿಸುತ್ತೆ. ದಾಸ ಅನ್ನುವ ಪದ ಬಳಕೆ ಸಮರ್ಥನೀಯ ಅಲ್ಲ ಅನ್ನಿಸುತ್ತೆ. ಕನಕದಾಸರನ್ನು ದಾಸ ಅಂತ ಕರೆಯುವುದು ಬೇಡ. ಕನಕವ್ಯಾಸರು ಅಂತ ಬಳಸಿದರೆ ಸೂಕ್ತ ಅನ್ನಿಸುತ್ತೆ. ವ್ಯಾಸ ಅಂದರೆ ವಿಸ್ತೃತವಾದದ್ದು ಅಂತ ಅರ್ಥ. ಅದಾಗ್ಯೂ ಕನಕವ್ಯಾಸ ಅಂತ ಬಳಸುವುದು ಸರಿಯಲ್ಲ ಅನ್ನಿಸಿದರೆ ಕನಕರು ಅಂತ ಸಂಬೋಧಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

"ಸಿದ್ದರಾಮಯ್ಯ ಅವರಿಗೆ ಗಂಡೆದೆಯ ಗುಂಡಿಗೆ ಇದೆ"
ಸಿದ್ದರಾಮಯ್ಯರಿಗೆ ಗಂಡೆದೆಯ ಗುಂಡಿಗೆ ಇದೆ. ನಾನು ಬೇಕಾದರೆ ಗೋಮಾಂಸ ತಿನ್ನುತ್ತೇನೆ ಎನ್ನುವ ಧೈರ್ಯ ಎಲ್ಲರಿಗೂ ಬರುವುದಿಲ್ಲ. ಕನಕದಾಸರ ಕೀರ್ತನೆಯೊಂದರಲ್ಲಿ ಕೃಷ್ಣ ಹಸುವನ್ನ ಕೊಂದ, ಕರುವನ್ನು ಕೊಂದ ಅನ್ನೋ ಮಾತಿದೆ. ರಾಕ್ಷಸನೊಬ್ಬ ಹಸುವಿನ ರೂಪದಲ್ಲಿ ಬಂದಿದ್ದಕ್ಕೆ ಕೃಷ್ಣ ಹಸುವನ್ನ ಕೊಂದಿದ್ದಾನೆ ಅಂತ ಬರೆದಿದ್ದಾರೆ. ಆದರೆ, ಅವರ ಕೀರ್ತನೆಯಲ್ಲಿ ಕಾರಣ ಕೊಟ್ಟಿಲ್ಲ ಎಂದರು.

ಹಸುವಿನಲ್ಲಿ ದೇವರಿದೆ ಎಂದು ಹೇಳುತ್ತಾರೆ. ಹಾಗಿದ್ದಲ್ಲಿ, ಹಸುವಿನ ರೂಪದಲ್ಲಿ ರಾಕ್ಷಸ ಬರಲು ಸಾಧ್ಯವೇ?, ಹಾಗೇ ಬಂದಿದ್ದರೆ ಆ ಹಸುವನ್ನು ಯಾಕೆ ಕೃಷ್ಣ ಕೊಲ್ಲಬೇಕಿತ್ತು. ಈ ಪ್ರಶ್ನೆ ನಮಗೆ ಯಾವಾಗಲೂ ಕಾಡುತ್ತೆ. ಹಾಗಾಗಿ, ಸಿದ್ದರಾಮಯ್ಯನವರ ಹೇಳಿಕೆ ನನಗೆ ಗಂಡೆದೆಯ ಹೇಳಿಕೆ ಅಂತ ಅನ್ನಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಮೈಸೂರು ವಿ.ವಿ.ನಿವೃತ್ತ ಪ್ರಾಧ್ಯಾಪಕ ಡಾ.ಸಿ.ನಾಗಣ್ಣ, ಕಾಂಗ್ರೆಸ್ ಮುಖಂಡ ಕೆ.ಮರಿಗೌಡ, ಕರಾಹಿವಗವೇ ಅಧ್ಯಕ್ಷ ಕೆ.ಎಸ್.ಶಿವರಾಮ್, ಜಟ್ಟಿ ಹುಂಡಿ ಬಸವರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಹೆಚ್ಚು ವಿವಾದಕ್ಕೆ ಒಳಗಾದ ರಾಜಕಾರಣಿ ನಾನೇ: ಸಿದ್ದರಾಮಯ್ಯ

ಹೆಚ್ಚು ವಿವಾದಕ್ಕೆ ಒಳಗಾದ ರಾಜಕಾರಣಿ ನಾನೇ. ಗೋಮಾಂಸ ಸೇವನೆ ಅವರವರ ಆಹಾರದ ಹಕ್ಕು. ಸಮಾಜ ಒಡೆಯುವ ಕೆಲಸ ಮಾಡಬೇಡಿ ಎಂದಿದ್ದೆ. ಇದನ್ನು ವಿವಾದ ಮಾಡಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. 

ಒಂದು ಹಸು, ಎಮ್ಮೆ, ಎತ್ತು ಸಾಕಲು ದಿನಕ್ಕೆ 7 ಕೆಜಿ ಮೇವು ಬೇಕು. ತಿಂಗಳಿಗೆ 3 ಸಾವಿರ ಬೇಕು. ಸಾಧ್ಯವಾದಷ್ಟು ಸತ್ಯ ಹೇಳುವುದಕ್ಕೆ ಪ್ರಯತ್ನಿಸುತ್ತೇನೆ, ಹಳ್ಳಿ ಭಾಷೆಯಲ್ಲಿ ಮಾತಾಡುತ್ತೇನೆ, ಅದಕ್ಕೆ ಆರೆಸ್ಸೆಸ್ ಅವರು ನನ್ನ ಹೇಳಿಕೆಗೆ ರಂಗು, ರಂಗು ಬಣ್ಣ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು. 

ಇತ್ತೀಚೆಗೆ ಹನುಮ ಹುಟ್ಟಿದ ದಿನ ಗೊತ್ತಿಲ್ಲ, ನಿಮಗೆ ಗೊತ್ತಿದ್ದರೆ ಹೇಳಿ ಎಂದಿದ್ದಕ್ಕೆ ಅದನ್ನು ವಿವಾದ ಮಾಡಿದರು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X