Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹನಿಟ್ರ್ಯಾಪ್ ಬೇಧಿಸಿದ ಸುರತ್ಕಲ್...

ಹನಿಟ್ರ್ಯಾಪ್ ಬೇಧಿಸಿದ ಸುರತ್ಕಲ್ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

ಟ್ರ್ಯಾಪ್‌ಗೊಳಗಾಗಿದ್ದರೆ ಅಂಜಿಕೆ ಇಲ್ಲದೆ ಮಾಹಿತಿ ನೀಡಿ: ಪೊಲೀಸ್ ಕಮಿಷನರ್

ವಾರ್ತಾಭಾರತಿವಾರ್ತಾಭಾರತಿ18 Jan 2021 1:27 PM IST
share
ಹನಿಟ್ರ್ಯಾಪ್ ಬೇಧಿಸಿದ ಸುರತ್ಕಲ್ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

ಮಂಗಳೂರು, ಜ.18: ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿ ಮನೆಗೆ ಆಹ್ವಾನಿಸಿ ಬ್ಲಾಕ್‌ಮೇಲ್ ಮಾಡಿ ಹಣ ದೋಚುತ್ತಿದ್ದ ಹನಿಟ್ರಾಪ್ ಜಾಲವೊಂದನ್ನು ಸುರತ್ಕಲ್ ಪೊಲೀಸರು ಬೇಧಿಸಿದ್ದಾರೆ.

ಜಾಲದ ಆರೋಪಿಗಳಾದ ರೇಶ್ಮಾ ಯಾನೆ ನೀಮಾ (32), ಇಕ್ಲಾಬ್ ಮುಹಮ್ಮದ್ ಯಾನೆ ಇಕ್ಬಾಲ್(35), ಝೀನ್ ಯಾನೆ ಝೀನತ್ ಮುಬೀನ್(28), ನಾಸಿಫ್ ಯಾನೆ ಅಬ್ದುಲ್ ಖಾದರ್ ನಾಝಿಫ್(34) ಎಂಬವರನ್ನು ಬಂಧಿಸಲಾಗಿದ್ದು, ಇನ್ನೂ ನಾಲ್ಕೈದು ಆರೋಪಿಗಳು ಈ ಜಾಲದಲ್ಲಿರುವ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಮೂಲತಃ ಕೇರಳ ಮೂಲದವರನ್ನು ಬಂಧಿತ ಆರೋಪಿಗಳ ಪೈಕಿ ರೇಶ್ಮಾ ಮತ್ತು ಝೀನತ್ ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿ ಅವರನ್ನು ಒಬ್ಬಂಟಿಯಾಗಿರುವುದಾಗಿ ನಂಬಿಸಿ ಮನೆಗೆ ಆಹ್ವಾನಿಸುತ್ತಿದ್ದರು. ಮನೆಗೆ ಬಂದವರನ್ನು ಇಕ್ಬಾಲ್ ಹಾಗೂ ಅಬ್ದುಲ್ ಖಾದರ್ ನಾಸಿಫ್ ಸಹಾಯದಿಂದ ಬೆದರಿಸಿ ಹಲ್ಲೆ ನಡೆಸಿ ಬ್ಲಾಕ್ ಮೇಲ್ ಮಾಡಿ ಅವರಿಂದ ಹಣ ವಸೂಲು ಮಾಡಲಾಗುತ್ತಿತ್ತು ಎಂದು ಪೊಲೀಸ್ ಆಯುಕ್ತರು ಹೇಳಿದರು.

ಹನಿಟ್ರ್ಯಾಪ್ ಗೆ ಒಳಗಾದ ಓರ್ವ ಸಂತ್ರಸ್ತನಿಂದ ಮಾಹಿತಿ ದೊರಕಿದ್ದು, ಇನ್ನೂ ಐದಾರು ಮಂದಿ ಇವರ ಬ್ಲಾಕ್‌ಮೇಲ್ ತಂತ್ರಕ್ಕೆ ಒಳಗಾಗಿರುವುದು ತಿಳಿದುಬಂದಿದೆ. ಮಾರ್ಯಾದೆಗೆ ಅಂಜಿ ಹೆಚ್ಚಿನವರು ದೂರು ನೀಡಲು ಮುಂದಾಗುವುದಿಲ್ಲ. ಇದನ್ನೇ ಆರೋಪಿಗಳು ಬಂಡವಾಳವಾಗಿಸಿ ಮತ್ತಷ್ಟು ಜನರನ್ನು ತಮ್ಮ ಬಲೆಗೆ ಬೀಳಿಸಲು ಪ್ರಯತ್ನಿಸುತ್ತಾರೆ. ಆದ್ದರಿಂದ ಈ ರೀತಿ ಹನಿಟ್ರ್ಯಾಪ್‌ಗೆ ಒಳಾಗದವರು ಅಂಜಿಕೆ ಇಲ್ಲದೆ ಪೊಲೀಸರಿಗೆ ಮಾಹಿತಿಯನ್ನು ಗೌಪ್ಯವಾಗಿ ನೀಡುವ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಿ ಇನ್ನಷ್ಟು ಅಮಾಯಕರು ಇಂತಹ ಆರೋಪಿಗಳ ಕೃತ್ಯಕ್ಕೆ ಬಲಿಯಾಗುವುದನ್ನು ತಡೆಯಬಹುದು ಎಂದು ಕಮಿಷನರ್ ಶಶಿಕುಮಾರ್ ಸಾರ್ವಜನಿಕರಿಗೆ ಮನವಿ ಮಾಡಿದರು.

ಬಂಧಿತ ಆರೋಪಿಗಳಿಂದ ನಾಲ್ಕು ಮೊಬೆಲ್ ಫೋನ್‌ಗಳು, ಎಟಿಎಂ ಸೇರಿ ಐದು ಕ್ರೆಡಿಟ್ ಕಾರ್ಡ್‌ಗಳ, ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಝೀನ್ ಹಾಗೂ ಆಕೆಯ ಗಂಡ ಆರೋಪಿ ಇಕ್ಬಾಲ್ ಕಾನ- ಕಟ್ಲಾ ಪರಿಸರದ ಫ್ಲೋರೆಂಟೈನ್ ಅಪಾರ್ಟ್‌ಮೆಂಟ್‌ನಲ್ಲಿ ವಾಸ್ತವ್ಯವಿದ್ದಾರೆ. ಆರೋಪಿ ನಾಸಿಫ್ ಸೂರಿಂಜೆ ಮೂಲದವನಾಗಿದ್ದು, ಸದ್ಯ ಚೊಕ್ಕಬೆಟ್ಟು ಪರಿಸರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಾರೆ ಎಂದು ಶಶಿಕುಮಾರ್ ವಿವರ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಹರಿರಾಂ ಶಂಕರ್, ಉಪ ಪೊಲೀಸ್ ಆಯುಕ್ತ ವಿನಯ್ ಗಾಂವ್ಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X