Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು...

“ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ರಾಜಕಾರಣಿಗಳು ನೇಮಕ ಮಾಡುತ್ತಾರೆ” ಎಂದ ‘ತುಘ್ಲಕ್’ ಸಂಪಾದಕರ ವಿರುದ್ಧ ಕೇಸ್

ವಾರ್ತಾಭಾರತಿವಾರ್ತಾಭಾರತಿ18 Jan 2021 5:02 PM IST
share
“ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ರಾಜಕಾರಣಿಗಳು ನೇಮಕ ಮಾಡುತ್ತಾರೆ” ಎಂದ ‘ತುಘ್ಲಕ್’ ಸಂಪಾದಕರ ವಿರುದ್ಧ  ಕೇಸ್

ಚೆನ್ನೈ,ಜ.18: ಪೊಂಗಲ್ ದಿನದಂದು ಮಾಡಿದ್ದ ಭಾಷಣದಲ್ಲಿ  ನ್ಯಾಯಾಧೀಶರನ್ನು ಅವಮಾನಿಸಿದ್ದಾರೆಂದು ಆರೋಪಿಸಿ ದಾಖಲಾದ ದೂರಿನ ಹಿನ್ನೆಲೆಯಲ್ಲಿ ತಮಿಳು ಮ್ಯಾಗಝಿನ್ ತುಘ್ಲಕ್‍ನ  ಸಂಪಾದಕ  ಎಸ್  ಗುರುಮೂರ್ತಿ ಆವರ ವಿರುದ್ಧ ತಿರುನೆಲ್ವೇಲಿ ಪೊಲೀಸರು ಸಿಎಸ್‍ಆರ್ (ಕಮ್ಯುನಿಟಿ ಸರ್ವಿಸ್ ರಿಜಿಸ್ಟರ್) ದೂರು ದಾಖಲಿಸಿದ್ದಾರೆ. ಚೋ ರಾಮಸ್ವಾಮಿ ಅವರು ಆರಂಭಿಸಿದ್ದ ತುಘ್ಲಕ್ ಮ್ಯಾಗಜೀನ್‍ನ ಪ್ರಸಕ್ತ ಸಂಪಾದಕ ಗುರುಮೂರ್ತಿ ಲೆಕ್ಕ ಪರಿಶೋಧಕರೂ ಆಗಿದ್ದಾರೆ.

ಚೇರಣಮಹಾದೇವಿ ಎಂಬಲ್ಲಿನ ವಕೀಲ ರಾಜಾ ಗೋಪಾಲ್ ಹಾಗೂ ಸ್ಥಳೀಯ ಬಾರ್ ಅಸೋಸಿಯೇಶನ್‍ನ  ಇತರ ಮೂವರು ಜನವರಿ 16ರಂದು ದೂರು ದಾಖಲಿಸಿದ್ದರು.

ನ್ಯಾಯಾಧೀಶರುಗಳು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಸೇವೆಗೆ ಭಡ್ತಿ ಪಡೆಯಲು ರಾಜಕಾರಣಿಗಳ ಬೆಂಬಲ ಕೋರುತ್ತಿದ್ದಾರೆ ಎಂದು ಜನವರಿ 14ರಂದು ತುಘ್ಲಕ್ ಆಯೋಜಿಸಿದ್ದ ಸಮಾರಂಭದಲ್ಲಿ ಗುರುಮೂರ್ತಿ ಹೇಳಿದ್ದಾರೆಂದು ಆರೋಪಿಸಲಾಗಿದೆ.

"ನ್ಯಾಯಾಲಯಗಳ ಹಾಗೂ ಸುಪ್ರೀಂ ಕೋರ್ಟ್‍ನ ಎಲ್ಲಾ ನ್ಯಾಯಾಧೀಶರುಗಳನ್ನು ರಾಜಕಾರಣಿಗಳು ನೇಮಕಗೊಳಿಸಿದ್ದಾರೆ.  ಇಂತಹ ಹಲವು ಜನರು  ನ್ಯಾಯಾಧೀಶರಾಗಲು ಮಧ್ಯವರ್ತಿಗಳ ಮೂಲಕ ಕೆಲ ಪ್ರಭಾವಿಗಳ ಕಾಲಿಗೆ ಬೀಳುತ್ತಾರೆ. ಇದು ನಾಚಿಕೆಗೇಡು. ಅರ್ಹತೆಯ ಆಧಾರದಲ್ಲಿ ನ್ಯಾಯಾಧೀಶರುಗಳ ನೇಮಕವಾಗಿದ್ದರೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ" ಎಂದು ಸಮಾರಂಭದಲ್ಲಿ ಗುರುಮೂರ್ತಿ ಹೇಳಿದ್ದರು. ಅವರು ತಮಿಳಿನಲ್ಲಿ ಹೀಗೆ ಹೇಳಿದ್ದ ಸಂದರ್ಭ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಎಚ್ ರಾಜಾ ಕೂಡ ಉಪಸ್ಥಿತರಿದ್ದರು.

ಜನವರಿ 16ರಂದು ಗುರುಮೂರ್ತಿ ತಮ್ಮ ಹೇಳಿಕೆಗೆ ವಿಷಾಧಿಸಿದ್ದರಲ್ಲದೆ ಆವೇಶದ ಭರದಲ್ಲಿ ತಾವು ಹಾಗೆ ಹೇಳಿದ್ದಾಗಿ ತಿಳಿಸಿದ್ದರು. ʼನ್ಯಾಯಾಧೀಶರ ಹುದ್ದೆಗೆ ಅರ್ಜಿದಾರರುʼ ಎಂದು ಹೇಳುವ ಬದಲು ʼನ್ಯಾಯಾಧೀಶರುʼ ಎಂದು ಹೇಳಿದ್ದೆ ಎಂದೂ ಅವರು ಟ್ವೀಟ್ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X