Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರುಣಾಚಲ ಪ್ರದೇಶದಲ್ಲಿ 101 ಮನೆಗಳಿರುವ...

ಅರುಣಾಚಲ ಪ್ರದೇಶದಲ್ಲಿ 101 ಮನೆಗಳಿರುವ ‘ಗ್ರಾಮ’ ನಿರ್ಮಿಸಿದ ಚೀನಾ: ಸಾಬೀತುಪಡಿಸಿದ ಉಪಗ್ರಹ ಚಿತ್ರಗಳು

ಎನ್‍ಡಿಟಿವಿ ವರದಿ

ವಾರ್ತಾಭಾರತಿವಾರ್ತಾಭಾರತಿ18 Jan 2021 5:27 PM IST
share
ಅರುಣಾಚಲ ಪ್ರದೇಶದಲ್ಲಿ 101 ಮನೆಗಳಿರುವ ‘ಗ್ರಾಮ’ ನಿರ್ಮಿಸಿದ ಚೀನಾ: ಸಾಬೀತುಪಡಿಸಿದ ಉಪಗ್ರಹ ಚಿತ್ರಗಳು

ಹೊಸದಿಲ್ಲಿ,ಜ.18: ಅರುಣಾಚಲ ಪ್ರದೇಶದಲ್ಲಿ ಸುಮಾರು 101 ಮನೆಗಳಿರುವ ಹೊಸ ಗ್ರಾಮವನ್ನು ಚೀನಾ ನಿರ್ಮಿಸಿರುವುದನ್ನು ತೋರಿಸುವ ಉಪಗ್ರಹ ಚಿತ್ರಗಳು ತನಗೆ ದೊರಕಿವೆ ಎಂದು ndtv.com ವರದಿ ಮಾಡಿದೆ. ನವೆಂಬರ್ 1, 2020 ದಿನಾಂಕ ನಮೂದಿಸಲ್ಪಟ್ಟಿರುವ ಈ ಉಪಗ್ರಹ ಚಿತ್ರಗಳನ್ನು ಹಲವಾರು ತಜ್ಞರು ವಿಶ್ಲೇಷಿಸಿದ್ದಾರೆಂದೂ ಎನ್‍ಡಿಟಿವಿ ಹೇಳಿದೆ.  ಭಾರತ-ಚೀನಾ ನಡುವಿನ ವಾಸ್ತವಿಕ ಗಡಿ ನಿಯಂತ್ರಣ ರೇಖೆಯ ಬಳಿಯ ಭಾರತೀಯ ಭೂಭಾಗದಲ್ಲಿ ನಿರ್ಮಾಣಗೊಂಡಿರುವ ಈ ಗ್ರಾಮದ ವಿಸ್ತೀರ್ಣ ಅಂದಾಜು  4.5 ಕಿಮೀ ಆಗಿದೆ.

ತ್ಸಾರು ಚು ನದಿ ದಂಡೆ ಪ್ರದೇಶದಲ್ಲಿರುವ ಈ ಗ್ರಾಮ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿದ್ದು ಇದು ಭಾರತ-ಚೀನಾ ನಡುವಿನ ವಿವಾದಿತ ಪ್ರದೇಶಗಳಲ್ಲೊಂದಾಗಿದೆ. ಆಗಸ್ಟ್ 26, 2019ರ ಉಪಗ್ರಹ ಚಿತ್ರದಲ್ಲಿ ಅಲ್ಲಿ ಯಾವುದೇ ಗ್ರಾಮದ ಕುರುಹು ಇರಲಿಲ್ಲ. ಆದುದರಿಂದ ಈ ಗ್ರಾಮ ಕಳೆದ ವರ್ಷ ನಿರ್ಮಾಣವಾಗಿರಬೇಕೆಂದು ಅಂದಾಜಿಸಲಾಗಿದೆ.

ಎನ್‍ಡಿಟಿವಿ ಈ ಉಪಗ್ರಹ ಚಿತ್ರಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಕಳುಹಿಸಿ ಪ್ರತಿಕ್ರಿಯೆ ಕೇಳಿದಾಗ ಎನ್‍ಡಿಟಿವಿ ವರದಿಯನ್ನು ಸಚಿವಾಲಯ ಅಲ್ಲಗಳೆದಿಲ್ಲ. "ಗಡಿ ಪ್ರದೇಶಗಳಲ್ಲಿ ಚೀನಾ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಕುರಿತಂತೆ  ಇತ್ತೀಚಿಗಿನ ವರದಿಗಳನ್ನು ನೋಡಿದ್ದೇವೆ.  ಹಿಂದೆ ಕೂಡ ಚೀನಾ ಇಂತಹ ನಿರ್ಮಾಣ ಕೆಲಸ ನಡೆಸಿದೆ" ಎಂದಷ್ಟೇ ಹೇಳಿದ್ದಾಗಿ ndtv.com ವರದಿ ತಿಳಿಸಿದೆ.

"ಗಡಿ ಪ್ರದೇಶದಲ್ಲಿನ ಮೂಲಭೂತ ಸೌಲಭ್ಯ ಉತ್ತಮ ಪಡಿಸಲು ಸರಕಾರ ಬದ್ಧವಾಗಿದೆ. ಗಡಿ ಪ್ರದೇಶದ ಜನರಿಗೆ ಅನುಕೂಲವಾಗಲು ಅಲ್ಲಿ ರಸ್ತೆ, ಸೇತುವೆಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ" ಎಂದು ಸರಕಾರ ಹೇಳಿದೆ. ಆದರೆ ಗ್ರಾಮದ ನಿರ್ಮಾಣಕ್ಕೆ ಆಕ್ಷೇಪ ಸೂಚಿಸಲಾಗಿದೆಯೇ ಎಂಬ ಪ್ರಶ್ನೆಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿಲ್ಲ.

ಎನ್‍ಡಿಟಿವಿ ಈ ಉಪಗ್ರಹ ಚಿತ್ರಗಳನ್ನು ಪ್ರಾನೆಟ್ ಲ್ಯಾಬ್ಸ್ ಇಂಕ್ ಮೂಲಕ ಪಡೆದಿದೆ ಎಂದು ಹೇಳಿದೆ. ಭಾರತ ಸರಕಾರ ತನ್ನ ಅಧಿಕೃತ ನಕ್ಷೆ ಎಂದು ಬಳಸುವ  ಸರ್ವೇಯರ್ ಜನರಲ್ ಆಫ್ ಇಂಡಿಯಾದ ಆನ್ಲೈನ್ ನಕ್ಷೆಯಲ್ಲೂ ಚೀನಾದ ಈ ಗ್ರಾಮ ಭಾರತದ ಭೂಭಾಗದಲ್ಲಿರುವುದು ಕಾಣಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ.

ವರದಿ ಗಮನಿಸಿದ್ದೇವೆ: ವಿದೇಶ ವ್ಯವಹಾರ ಇಲಾಖೆ

ಅರುಣಾಚಲ ಪ್ರದೇಶದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ ಚೀನಾ ನಿರ್ಮಾಣ ಕಾಮಗಾರಿ ನಡೆಸುತ್ತಿದೆ ಎಂಬ ವರದಿಯನ್ನು ಗಮನಿಸಿದ್ದೇವೆ ಎಂದು ವಿದೇಶ ವ್ಯವಹಾರ ಇಲಾಖೆ ಹೇಳಿದೆ. ತನ್ನ ಭದ್ರತೆ ಮತ್ತು ಸುರಕ್ಷತೆಗೆ ಪರಿಣಾಮ ಬೀರಬಹುದಾದ ಎಲ್ಲಾ ಬೆಳವಣಿಗೆಯನ್ನೂ ಭಾರತ ನಿರಂತರವಾಗಿ ಎಚ್ಚರಿಕೆಯಿಂದ ವೀಕ್ಷಿಸುತ್ತಿದೆ. ಚೀನಾವು ಗಡಿ ಭಾಗದಲ್ಲಿ ಈ ರೀತಿಯ ಮೂಲಸೌಕರ್ಯ ಅಭಿವೃದ್ಧಿ ಕಾರ್ಯವನ್ನು ಹಲವು ವರ್ಷಗಳಿಂದ ನಡೆಸುತ್ತಾ ಬಂದಿದೆ ಎಂದು ವಿದೇಶ ವ್ಯವಹಾರ ಇಲಾಖೆಯ ಹೇಳಿಕೆ ತಿಳಿಸಿದೆ. ಇಂತಹ ಬೆಳವಣಿಗೆಯ ಮೇಲೆ ನಿಗಾ ಇರಿಸುವ ಜೊತೆಗೆ, ದೇಶದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯ ರಕ್ಷಣೆಗೆ ಅಗತ್ಯದ ಕ್ರಮಗಳನ್ನು ಭಾರತ ಕೈಗೊಳ್ಳುತ್ತದೆ. ಜತೆಗೆ, ಅರುಣಾಚಲ ಸೇರಿದಂತೆ ಗಡಿಭಾಗದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಿ ನಾಗರಿಕರ ಜೀವನೋಪಾಯ ಸುಧಾರಿಸಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X