Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಫಿ ಬೋರ್ಡ್ ಕಚೇರಿ ಮುಚ್ಚಲು...

ಕಾಫಿ ಬೋರ್ಡ್ ಕಚೇರಿ ಮುಚ್ಚಲು ಕೇಂದ್ರದಿಂದ ಹುನ್ನಾರ ಆರೋಪ: ಕಾಫಿ ಬೆಳೆಗಾರರ ಸಂಘದಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ18 Jan 2021 11:11 PM IST
share
ಕಾಫಿ ಬೋರ್ಡ್ ಕಚೇರಿ ಮುಚ್ಚಲು ಕೇಂದ್ರದಿಂದ ಹುನ್ನಾರ ಆರೋಪ: ಕಾಫಿ ಬೆಳೆಗಾರರ ಸಂಘದಿಂದ ಧರಣಿ

ಚಿಕ್ಕಮಗಳೂರು, ಜ.18: ಕೇಂದ್ರ ಸರಕಾರ ಪಟ್ಟಣದಲ್ಲಿರುವ ಕಾಫಿ ಮಂಡಳಿ ಕಚೇರಿಯನ್ನು ಮುಚ್ಚಲು ಮುಂದಾಗಿದೆ ಎಂದು ಆರೋಪಿಸಿ ಕಾಫಿ ಬೆಳೆಗಾರರು ಆಲ್ದೂರಿನಲ್ಲಿ ಸೋಮವಾರ ಧರಣಿ ನಡೆಸಿದರು.

ಆಲ್ದೂರು ಕಾಫಿ ಬೆಳೆಗಾರರ ಸಂಘದ ನೇತೃತ್ವದಲ್ಲಿ ಬಸ್‍ಸ್ಟ್ಯಾಂಡ್ ಮುಂಭಾಗದಿಂದ ಕಾಫಿ ಮಂಡಳಿ ಉಳಿಸಿ, ಕಾಫಿ ಉದ್ಯಮ, ಬೆಳೆಗಾರರು ಮತ್ತು ಕಾರ್ಮಿಕರನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ಮೆರವಣಿಗೆ ನಡೆಸಿದ ನೂರಾರು ಬೆಳೆಗಾರರು ಕಾಫಿ ಮಂಡಳಿ ಕಚೇರಿ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಕೇಂದ್ರ ಸರಕಾರದ ನಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಆಲ್ದೂರು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಸಿ.ಸುರೇಶ್, ಕಾಫಿ ಬೆಳೆಗಾರರಿಗೆ ಸಂಪರ್ಕ ಸೇತುವಾಗಿ ಅವರಿಗೆ ಮಾರ್ಗದರ್ಶನ ಮಾಡುತ್ತಿರುವ ಆಲ್ದೂರಿನ ಕಾಫಿ ಮಂಡಳಿ ಕಚೇರಿಯನ್ನು ಮುಚ್ಚುತ್ತಿರುವುದು ದುರದೃಷ್ಟಕರ. ಬೆಳೆಗಾರರು ಮತ್ತು ಕಾಫಿ ಉದ್ಯಮದ ಹಿತದೃಷ್ಟಿಯಿಂದ ಕಾಫಿ ಮಂಡಳಿ ಕಚೇರಿಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಒತ್ತಾಯಿಸಿದ ಅವರು, ಇಂದಿನ ಧರಣಿ ಸಾಂಕೇತಿಕವಾಗಿದ್ದು, ಸದ್ಯದಲ್ಲೇ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೂ ಹೋರಾಟವನ್ನು ವಿಸ್ತರಿಸಲಾಗುವುದು ಎಂದು ಹೇಳಿದರು.

ಕಾಫಿ ಮಂಡಳಿ ಮಾಜಿ ಸದಸ್ಯ ಡಿ.ಎಂ.ವಿಜಯ್ ಮಾತನಾಡಿ, ಅತಿವೃಷ್ಠಿ, ಅನಾವೃಷ್ಠಿ, ಬೆಲೆ ಕುಸಿತ, ಬೆಳೆ ಕುಂಠಿತ, ಗಿಡಗಳಿಗೆ ರೋಗಭಾದೆ, ಕಾರ್ಮಿಕರ ಕೊರತೆ ಸೇರಿದಂತೆ ಹತ್ತು ಹಲವು ಸಮಸ್ಯೆಗಳಿಂದ ಜರ್ಝರಿತರಾಗಿರುವ ಬೆಳೆಗಾರರ ನೆರವಿಗೆ ಬಾರದ ಕೇಂದ್ರ ಸರಕಾರ ಇದೀಗ ಕಾಫಿ ಮಂಡಳಿ ಕಚೇರಿಯನ್ನು ಮುಚ್ಚುವ ಮೂಲಕ ಅವರನ್ನು ಬೀದಿಗೆ ತಳ್ಳುತ್ತಿದೆ ಎಂದು ಆರೋಪಿಸಿದರು.

ಸಾರ್ವಜನಿಕ ವಲಯಗಳು ದೇಶದ ಜನತೆಯ ಆಸ್ತಿ, ಅವುಗಳನ್ನು ಮುಚ್ಚಲು ಅಥವಾ ಮಾರಲು ಯಾವುದೇ ಸರಕಾರಗಳಿಗೂ ಅಧಿಕಾರ ಅಥವಾ ಹಕ್ಕಿಲ್ಲ ಎಂದ ಅವರು, ಕಾಫಿ ಬೆಳೆಗಾರರು ಇದರ ವಿರುದ್ಧ ತಿರುಗಿ ಬೀಳಬೇಕು, ಪಕ್ಷಾತೀತವಾಗಿ ಒಂದಾಗಿ ಬೀದಿಗಿಳಿದು ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಈ ವೇಳೆ ಧರಣಿ ನಿರತರ ಮನವೊಲಿಕೆಗೆ ಮುಂದಾದ ಕಾಫಿ ಮಂಡಳಿ ಸಂಶೋಧನಾ ವಿಭಾಗದ ನಿರ್ದೇಶಕ ಸೂರ್ಯ ಪ್ರಕಾಶ್, ಕಾಫಿ ಮಂಡಳಿಯನ್ನು ಮುಚ್ಚುತ್ತಿಲ್ಲ. ಆರ್ಥಿಕವಾಗಿ ಹೊರೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕಡಿಮೆ ಮಾಡಲಾಗುತ್ತಿದೆ. ಸಿಬ್ಬಂದಿ ಕೊರತೆಯಾಗುವುದರಿಂದ ಕೆಲವು ಕಚೇಗಳನ್ನು ಮುಚ್ಚಲಾಗುತ್ತಿದೆ ಎಂದು ಸಮಜಾಯಿಷಿ ನೀಡಿದರು. ಇದಕ್ಕೊಪ್ಪದ ಬೆಳೆಗಾರರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕಡಿಮೆ ಮಾಡಿ, ಕಚೇರಿಗಳನ್ನು ಮುಚ್ಚಿದರೆ ನೀವು ಬೆಳೆಗಾರರ ಮತ್ತು ಉದ್ಯಮದ ಹಿತವನ್ನು ಹೇಗೆ ಕಾಯುತ್ತೀರಿ ? ಕೇಂದ್ರಕ್ಕೆ ಸರಿಯಾಗಿ ಮನವರಿಕೆ ಮಾಡುವ ಮೂಲಕ ಮಂಡಳಿಯನ್ನು ಉಳಿಸಿ ಎಂದು ಆಗ್ರಹಿಸಿದರು.

ಇದೇ ವೇಳೆ ಕಾಫಿ ಮಂಡಳಿ ಕಚೇರಿ ಮುಚ್ಚವುದನ್ನು ವಿರೋಧಿಸಿ ಜ.25ರಂದು ಆಲ್ದೂರಿನಿಂದ ಚಿಕ್ಕಮಗಳೂರಿನವರೆಗೆ ಕಾಲ್ನಡಿಗೆ ಜಾಥಾ ನಡೆಸಲು ಬೆಳೆಗಾರರು ನಿರ್ಧಾರ ಕೈಗೊಂಡರು. ಆಲ್ದೂರು ಕಾಫಿ ಬೆಳೆಗಾರರ ಸಂಘದ ಕಾರ್ಯದರ್ಶಿ ಎಚ್.ಇ.ಲವ, ಖಜಾಂಚಿ ತೌಸೀಫ್ ಅಲಿ, ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ಜಬ್ಬೀರ್ ಅಸ್ಗರ್, ಸಿ.ಸಿ.ಈರೇಗೌಡ, ಎಸ್.ಡಿ.ಅಶೋಕ್, ಜಿ.ಯು.ರಘು ಧರಣಿಯಲ್ಲಿ ಪಾಲೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X