Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. “ಅಸಮತೋಲಿತ ಲಸಿಕೆ ವಿತರಣೆಯಿಂದ ಜಗತ್ತು...

“ಅಸಮತೋಲಿತ ಲಸಿಕೆ ವಿತರಣೆಯಿಂದ ಜಗತ್ತು ನೈತಿಕ ಅಧಃಪತನದತ್ತ ಸಾಗುತ್ತಿದೆ"

ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ19 Jan 2021 8:36 PM IST
share
“ಅಸಮತೋಲಿತ ಲಸಿಕೆ ವಿತರಣೆಯಿಂದ ಜಗತ್ತು ನೈತಿಕ ಅಧಃಪತನದತ್ತ ಸಾಗುತ್ತಿದೆ

ಜಿನೀವ (ಸ್ವಿಟ್ಸರ್‌ಲ್ಯಾಂಡ್), ಜ. 19: ಕೊರೋನ ವೈರಸ್ ಲಸಿಕೆಗಳ ಅಸಮಾನ ವಿತರಣೆಯಿಂದಾಗಿ ಜಗತ್ತು ‘ವಿಪ್ಲವಕಾರಿ ನೈತಿಕ ಅರ್ಧಪತನ’ದತ್ತ ಸಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೋಮವಾರ ಎಚ್ಚರಿಸಿದೆ.

ಶ್ರೀಮಂತ ಮತ್ತು ಬಡ ದೇಶಗಳ ನಡುವಿನ ಅಸಮಾನತೆಯ ಗೋಡೆಯಲ್ಲಿ ಕೊರೋನ ವೈರಸ್ ಲಸಿಕೆಗಳು ಇನ್ನೊಂದು ಇಟ್ಟಿಗೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಹೇಳಿದರು.

 ‘‘ಆರೋಗ್ಯ ಕೆಲಸಗಾರರು ಮತ್ತು ವೃದ್ಧರಿಗೆ ಮೊದಲು ಲಸಿಕೆಗಳನ್ನು ನೀಡಲು ಸರಕಾರಗಳು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ’’ ಎಂದು ಜಾಗತಿಕ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು ಹೇಳಿದರು. ‘‘ಆದರೆ, ಬಡ ದೇಶಗಳಲ್ಲಿರುವ ಆರೋಗ್ಯ ಕೆಲಸಗಾರರು ಮತ್ತು ವೃದ್ಧರಿಗೆ ಲಸಿಕೆಗಳನ್ನು ನೀಡುವ ಮೊದಲೇ ಶ್ರೀಮಂತ ದೇಶಗಳ ಯುವ ಹಾಗೂ ಆರೋಗ್ಯವಂತ ವಯಸ್ಕರಿಗೆ ನೀಡುವುದು ಸರಿಯಲ್ಲ’’ ಎಂದರು.

 ಮುಂದಿನ ತಿಂಗಳು ಲಸಿಕೆಗಳನ್ನು ಪೂರೈಸಲು ಜಾಗತಿಕ ಲಸಿಕೆ ಹಂಚಿಕಾ ಯೋಜನೆ ‘ಕೋವ್ಯಾಕ್ಸ್’ ಸಿದ್ಧತೆಗಳನ್ನು ಆರಂಭಿಸಿರುವಂತೆಯೇ, ಸಮತೋಲಿತ ಲಸಿಕೆ ಹಂಚಿಕೆಯ ಭರವಸೆಯು ದುರ್ಬಲಗೊಳ್ಳುತ್ತಿದೆ ಎಂದು ಗೇಬ್ರಿಯೇಸಸ್ ನುಡಿದರು. ‘ಕೋವ್ಯಾಕ್ಸ್’ ಎನ್ನುವುದು ಜಗತ್ತಿನ ಬಡ ದೇಶಗಳಿಗೆ ಕಡಿಮೆ ವೆಚ್ಚದಲ್ಲಿ ಕೊರೋನ ವೈರಸ್ ಲಸಿಕೆ ವಿತರಿಸಲು ವಿಶ್ವ ಆರೋಗ್ಯ ಸಂಸ್ಥೆಯು ರೂಪಿಸಿದ ಕಾರ್ಯಕ್ರಮವಾಗಿದೆ.

 ‘‘ಸಮಾನ ವಿತರಣೆಯ ಮಾತುಗಳನ್ನು ಅವರು ಆಡುತ್ತಿದ್ದಾರಾದರೂ, ಕೆಲವು ದೇಶಗಳು ಮತ್ತು ಲಸಿಕೆ ಪೂರೈಕಾ ಕಂಪೆನಿಗಳು ದ್ವಿಪಕ್ಷೀಯ ಒಪ್ಪಂದಗಳನ್ನು ಮಾಡಿಕೊಳ್ಳುತ್ತಿವೆ ಹಾಗೂ ಕೋವ್ಯಾಕ್ಸ್ ಕಾರ್ಯಕ್ರಮದಿಂದ ದೂರ ಉಳಿದಿವೆ’’ ಎಂದು ಅವರು ನುಡಿದರು.

ಶ್ರೀಮಂತ ದೇಶಗಳಿಂದ ದ್ವಿಪಕ್ಷೀಯ ಒಪ್ಪಂದಗಳು

‘‘ಶ್ರೀಮಂತ ದೇಶಗಳ ಈ ತುರ್ತಿನಿಂದಾಗಿ ಲಸಿಕೆಗಳ ಬೆಲೆಗಳು ಹೆಚ್ಚುತ್ತಿವೆ ಹಾಗೂ ಅವುಗಳು ಸರದಿ ತಪ್ಪಿಸಿ ಲಸಿಕೆಗಳನ್ನು ಪಡೆದುಕೊಳ್ಳುತ್ತಿವೆ’’ ಎಂದರು. ‘‘ಇದು ತಪ್ಪು. ಲಸಿಕೆ ಪೂರೈಕೆಗೆ ಸಂಬಂಧಿಸಿ ಕಳೆದ ವರ್ಷ 44 ದ್ವಿಪಕ್ಷೀಯ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ ಹಾಗೂ ಈ ವರ್ಷದಲ್ಲಿ ಈಗಾಗಲೇ ಕನಿಷ್ಠ 12 ಒಪ್ಪಂದಗಳಿಗೆ ಸಹಿ ಹಾಕಲಾಗಿದೆ’’ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X