Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರಿಯಾ ಯೋಜನೆ ರೂಪಿಸಲು ಕುಲಪತಿಗಳಿಗೆ 15...

ಕ್ರಿಯಾ ಯೋಜನೆ ರೂಪಿಸಲು ಕುಲಪತಿಗಳಿಗೆ 15 ದಿನ ಗಡುವು ವಿಧಿಸಿದ ಡಿಸಿಎಂ ಅಶ್ವತ್ಥ ನಾರಾಯಣ

‘ಎಲ್ಲ ವಿವಿಗಳಿಗೆ ಎನ್‍ಐಆರ್‍ಎಫ್ ರ್ಯಾಂಕ್, ನ್ಯಾಕ್ ಮಾನ್ಯತೆ’

ವಾರ್ತಾಭಾರತಿವಾರ್ತಾಭಾರತಿ19 Jan 2021 10:20 PM IST
share
ಕ್ರಿಯಾ ಯೋಜನೆ ರೂಪಿಸಲು ಕುಲಪತಿಗಳಿಗೆ 15 ದಿನ ಗಡುವು ವಿಧಿಸಿದ ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಜ.19: ಉನ್ನತ ಶಿಕ್ಷಣ ವಿಭಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಶಸ್ವಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯ, ಕಾಲೇಜುಗಳು ನ್ಯಾಕ್ ಮಾನ್ಯತೆ, ಎನ್‍ಐಆರ್‍ಎಫ್ ರ್ಯಾಂಕ್ ಪಡೆಯುವ ಸಂಬಂಧ 15 ದಿನಗಳ ಒಳಗಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಗಡುವು ವಿಧಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸರಕಾರದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಸಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಮ್ಮ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲೊಂದು ಬಹುದೊಡ್ಡ ಬದಲಾವಣೆ. ಇದಕ್ಕೆ ಅನುಗುಣವಾಗಿ ನಾವೆಲ್ಲ ಹೆಜ್ಜೆ ಇಡಬೇಕು. ಸ್ಪರ್ಧಾತ್ಮಕವಾಗಿರುವ ಈ ಸಂದರ್ಭದಲ್ಲಿ ಪ್ರತಿ ವಿವಿಯು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನ (National Institutional Ranking Framework-NIRF) ರ್ಯಾಂಕ್ ಹೊಂದಿರಬೇಕು ಹಾಗೂ ಪ್ರತಿ ಕಾಲೇಜ್‍ಗೂ ನ್ಯಾಕ್ ಮಾನ್ಯತೆ (National Assessment and Accreditation Council Accreditation) ಇರಲೇಬೇಕು ಎಂದು ಹೇಳಿದರು.

ಮೊದಲಿನಂತೆ ನಿಧಾನಗತಿಯಲ್ಲಿ ಕೆಲಸ ಮಾಡಿದರೆ ಸಾಲುವುದಿಲ್ಲ. ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ ಓಡಬೇಕು. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಏನೇನಾಗುತ್ತಿದೆ ಎಂಬುದನ್ನು ಗಮನಿಸಬೇಕು. ಅದರಂತೆ ನಮ್ಮ ವಿವಿಗಳನ್ನು ವರ್ತಮಾನದ ಅಗತ್ಯಗಳಿಗೆ ಅನುಗುಣವಾಗಿ ಮರುರೂಪಿಸಬೇಕು. ಅದಕ್ಕೆ ಶಿಕ್ಷಣ ನೀತಿಯನ್ನು ಜೋಡಿಸಬೇಕು ಹಾಗೂ ಜಾಗತಿಕವಾಗಿ ಎಲ್ಲರೂ ಒಪ್ಪಿರುವ ಇಂಥ ರ್ಯಾಂಕ್-ಮಾನ್ಯತೆ ಅತ್ಯಗತ್ಯ ಎಂದು ಕುಲಪತಿಗಳಿಗೆ ಉಪ ಮುಖ್ಯಮಂತ್ರಿ ಸಲಹೆ ನೀಡಿದರು.

ಮುಂದಿನ 3 ವರ್ಷಗಳಲ್ಲಿ ಯಾವ್ಯಾವ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು, ಎನ್‍ಐಆರ್‍ಎಫ್ ರ್ಯಾಂಕ್, ನ್ಯಾಕ್ ಮಾನ್ಯತೆ ಪಡೆಯಲು ಏನೆಲ್ಲ ಸಿದ್ಧತೆ ನಡೆಸಲಾಗುವುದು ಎಂಬ ವಿವರಗಳನ್ನು ಕ್ರಿಯಾ ಯೋಜನೆಯಲ್ಲಿ ಉಲ್ಲೇಖಿಸಿ ಮುಂದಿನ ಸಭೆಯಲ್ಲಿ ತಿಳಿಸಬೇಕು ಎಂದು ಅವರು ಹೇಳಿದರು. 
ಎನ್‍ಐಆರ್‍ಎಫ್ ರಾಂಕಿಂಗ್-ನ್ಯಾಕ್ ಮಾನ್ಯತೆಯನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತಿಲ್ಲ. ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಬೇಕಾದರೆ, ಹೆಚ್ಚು ಅನುದಾನ ಪಡೆಯಬೇಕಾದರೆ ಇವು ಅತ್ಯಗತ್ಯ. ಉನ್ನತ ಶಿಕ್ಷಣವನ್ನು ತಳಮಟ್ಟದಿಂದಲೆ ಬಲಿಷ್ಠಗೊಳಿಸಬೇಕಾದರೆ ಇವೆಲ್ಲ ಅಂಶಗಳು ಅಗತ್ಯ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಸದ್ಯಕ್ಕೆ ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‍ಸಿ)ಯು ಎನ್‍ಐಆರ್‍ಎಫ್ ರಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮೈಸೂರು ವಿವಿ-27, ಬೆಂಗಳೂರು ವಿವಿ-68, ಶಿವಮೊಗ್ಗದ ಕುವೆಂಪು ವಿವಿ-73 ಹಾಗೂ ಬೆಳಗಾವಿಯ ವಿಟಿಯು-80ನೇ ಸ್ಥಾನದಲ್ಲಿವೆ. ಮುಂದಿನ ಬಾರಿ ರಾಂಕಿಂಗ್ ಪಟ್ಟಿ ಸಿದ್ಧವಾಗುವ ಹೊತ್ತಿಗೆ ಮೈಸೂರು ವಿವಿ 20ರೊಳಗಿನ ಸ್ಥಾನಕ್ಕೆ, ಬೆಂಗಳೂರು ವಿವಿ 50ರೊಳಗಿನ ಸ್ಥಾನಕ್ಕೆ ಬರಬೇಕು. ವಿಟಿಯು ಇನ್ನೂ ಉತ್ತಮ ಸ್ಥಾನಕ್ಕೆ ಬರಬೇಕು. ಇದೇ ಪಟ್ಟಿಯಲ್ಲಿ ತುಮಕೂರು ಮತ್ತು ಮಂಗಳೂರು ವಿವಿಗಳು 150ರೊಳಗಿನ ಸ್ಥಾನದಲ್ಲಿವೆ. ಉಳಿದ ಯಾವ ವಿವಿಗಳಿಗೂ ಈ ರ್ಯಾಂಕ್ ಸಿಕ್ಕಿಲ್ಲ. ಕೊನೆಯ ಪಕ್ಷ ಅದರ ಚೌಕಟ್ಟಿನೊಳಕ್ಕೆ ಬಂದಿಲ್ಲ ಎಂದು ಅವರು ಹೇಳಿದರು.

ಬೋಧನೆ, ಕಲಿಕೆ, ಸಂಪನ್ಮೂಲ ಸಂಗ್ರಹ, ಸಂಶೋಧನೆ ಮತ್ತು ವೃತ್ತಿಪರತೆ, ಫಲಿತಾಂಶ, ಜನರನ್ನು ತಲುಪುವ ರೀತಿ ಹಾಗೂ ಅದೇ ಜನರನ್ನು ಒಳಗೊಳ್ಳುವ ರೀತಿಯೂ ಸೇರಿದಂತೆ ಪ್ರಮುಖ ಐದು ಅಂಶಗಳನ್ನು ಆಧಾರವಾಗಿ ಇಟ್ಟಿಕೊಂಡು ಎನ್‍ಐಆರ್‍ಎಫ್ ರ್ಯಾಂಕಿಂಗ್ ನೀಡಲಾಗುತ್ತದೆ ಎಂದು ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು. 

3 ವಿವಿಗಳಿಗೆ ಅರ್ಹತೆಯೇ ಇಲ್ಲ: ನಮ್ಮ ರಾಜ್ಯದ ಸರಕಾರಿ ಸ್ವಾಮ್ಯದ 19 ವಿವಿಗಳ ಪೈಕಿ ಎನ್‍ಐಆರ್‍ಎಫ್ ರ್ಯಾಂಕಿಂಗ್ ಪಟ್ಟಿಯಲ್ಲಿ ಎ-ಅದಕ್ಕಿಂತ ಮೇಲ್ಪಟ್ಟು ಸ್ಥಾನದಲ್ಲಿ 6 ವಿವಿ, ಬಿ-ಎ ಹಂತದಲ್ಲಿ 4 ವಿವಿಗಳಿದ್ದರೆ, ಮಾನ್ಯತೆ ಪಡೆದ 9 ವಿವಿಗಳಿವೆ. ಉಳಿದಂತೆ ಇನ್ನೆರಡು ವಿವಿಗಳು ಅರ್ಜಿ ಹಾಕಿಕೊಂಡಿದ್ದು, ಇನ್ನು 4 ವಿವಿಗಳು ಅರ್ಜಿಯನ್ನೇ ಹಾಕಿಲ್ಲ. 3 ವಿವಿಗಳು ಎನ್‍ಐಆರ್‍ಎಫ್ ರ್ಯಾಂಕಿಂಗ್‍ಗೆ ಅರ್ಹತೆಯನ್ನೇ ಹೊಂದಿಲ್ಲ ಎಂದು ಅವರು ಸಭೆಗೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ಒಟ್ಟು 430 ಕಾಲೇಜುಗಳಿದ್ದು, ಕೇವಲ 50 ಕಾಲೇಜುಗಳಿಗೆ ಮಾತ್ರ ನ್ಯಾಕ್ ಮಾನ್ಯತೆ ಸಿಕ್ಕಿದೆ. ಕೊನೆ ಪಕ್ಷ ಮುಂದಿನ ಮೂರು ವರ್ಷಗಳಲ್ಲಿ 230 ಕಾಲೇಜುಗಳನ್ನು ನ್ಯಾಕ್ ವ್ಯಾಪ್ತಿಗೆ ತರಬೇಕೆನ್ನುವ ಗುರಿ ಹಾಕಿಕೊಳ್ಳಲಾಗಿದೆ. ಅಷ್ಟೇ ಅಲ್ಲದೆ, ಪ್ರತಿ ವಿವಿ ವ್ಯಾಪ್ತಿಯಲ್ಲೂ ಇಬ್ಬರು ನ್ಯಾಕ್ ಸಂಯೋಜಕರನ್ನು ನೇಮಕ ಮಾಡಲಾಗಿದ್ದು, ಅವರಿಂದ ಕಾಲೇಜುಗಳಿಗೆ ಕಾರ್ಯಾಗಾರ ಮಾಡಿಸಲಾಗುತ್ತಿದೆ. ಎ-ಅದಕ್ಕೂ ಮೇಲ್ಪಟ್ಟು 9 ಕಾಲೇಜು, ಬಿ-ಎ ಮಟ್ಟದಲ್ಲಿ 170  ಕಾಲೇಜುಗಳಿವೆ. ಇನ್ನು ನ್ಯಾಕ್ ಮಾನ್ಯತೆಯನ್ನೆ ಪಡೆಯದ 246 ಕಾಲೇಜುಗಳಿದ್ದು, ಇದಕ್ಕೆ ಅರ್ಹತೆಯೇ ಇಲ್ಲದ 26 ಕಾಲೇಜುಗಳಿವೆ. ಸದ್ಯಕ್ಕೆ 9 ಕಾಲೇಜುಗಳ ನ್ಯಾಕ್ ಮಾನ್ಯತೆಗೆ ಅರ್ಜಿ ಹಾಕಿಕೊಂಡಿದ್ದರೆ, ಉಳಿದ 167 ಕಾಲೇಜುಗಳಿಗೆ ಅರ್ಹತೆಯೇ ಇಲ್ಲದ ಸ್ಥಿತಿ ಇದೆ. ಇದೆಲ್ಲವನ್ನು ಸುಧಾರಿಸಿ ಮುಂದಿನ ಮೂರು ವರ್ಷಗಳಲ್ಲಿ 230 ಕಾಲೇಜುಗಳನ್ನು ನ್ಯಾಕ್ ವ್ಯಾಪ್ತಿಗೆ ತರಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ ಮುಂತಾದವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X