Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಕ್ಕಳ ಮೇಲೆ ಒತ್ತಡ ಹೇರುವುದು ಸೂಕ್ತವೇ?

ಮಕ್ಕಳ ಮೇಲೆ ಒತ್ತಡ ಹೇರುವುದು ಸೂಕ್ತವೇ?

ವಾರ್ತಾಭಾರತಿವಾರ್ತಾಭಾರತಿ20 Jan 2021 11:13 AM IST
share

ಮಾನ್ಯರೇ,

ಜೂನ್-ಜುಲೈ ತಿಂಗಳಿನಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಯುತ್ತದೆಂದು ಶಿಕ್ಷಣ ಮಂತ್ರಿಗಳು ಘೋಷಣೆ ಮಾಡಿದ್ದಾರೆ. ಆದರೆ, ವಾಸ್ತವದಲ್ಲಿ ಪರೀಕ್ಷೆ ಎದುರಿಸಲು ರಾಜ್ಯದಲ್ಲಿರುವ ಸುಮಾರು ಎಂಟು ಲಕ್ಷ ಮಕ್ಕಳು ಮಾನಸಿಕವಾಗಿ ಸಿದ್ಧವಾಗಿದ್ದಾರಾ? ಪರೀಕ್ಷೆಗೆ ಪೂರಕವಾದ ಎಲ್ಲ ಚಟುವಟಿಕೆಗಳು ಆರಂಭವಾಗಿ, ಸಕಲ ಸಿದ್ಧತೆಗಳು ನಡೆಯುತ್ತಿವೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿವೆ.

ಈ ಶೈಕ್ಷಣಿಕ ಸಾಲಿನಲ್ಲಿ ಹತ್ತನೇ ತರಗತಿ ಓದುತ್ತಿರುವ ಮಕ್ಕಳು, ಕೊರೋನ ಕಾರಣದಿಂದ ಕಳೆದ ವರ್ಷದ 9ನೇ ತರಗತಿಯಲ್ಲಿ ಪರೀಕ್ಷೆ ಬರೆಯದೆ ಪಾಸು-ಫೇಲು ಎಂದು ಮೌಲ್ಯಮಾಪನಕ್ಕೆ ಒಳಗಾಗದೆ ನೇರ ಹತ್ತನೇ ತರಗತಿಗೆ ಪ್ರವೇಶ ಪಡೆದಿದ್ದಾರೆ. ಸುಮಾರು ಹತ್ತು ತಿಂಗಳ ನಂತರ ಜನವರಿ 1ರಿಂದ ಈ ಮಕ್ಕಳು ಶಾಲಾ ಆವರಣಕ್ಕೆ ಪ್ರವೇಶಿಸಿದ್ದಾರೆ. ಇಲಾಖೆ ನಿಗದಿಪಡಿಸಿದ ವೇಳಾಪಟ್ಟಿಯಂತೆ ತರಗತಿಗಳು ಈಗ ನಡೆಯುತ್ತಿವೆ. ಬೆಳಗ್ಗೆ, ಮಧ್ಯಾಹ್ನದ ಬ್ಯಾಚ್‌ಗಳಲ್ಲಿ ಮಕ್ಕಳು ಕಲಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿರುವ ಶಾಲೆಗಳಲ್ಲಿ ಬ್ಯಾಚ್ ಕಲಿಕೆಯಿಂದ ತೊಂದರೆಯಾಗುತ್ತಿದೆ. ಇದರಿಂದ ಒಬ್ಬ ವಿದ್ಯಾರ್ಥಿ ವಾರದಲ್ಲಿ ಎರಡು ಮೂರು ದಿನ ಮಾತ್ರ ಶಾಲೆಗೆ ಬರುವಂತಾಗಿದೆ. ಪರಿಣಾಮ ಪಾಠ ಅರ್ಥೈಸಿಕೊಳ್ಳಲಾಗದೆ ಗೊಂದಲ, ಹಿಂಸೆ ಅನುಭವಿಸುವಂತಾಗಿದೆ.

 ಎಲ್ಲಾ ಜಿಲ್ಲೆಗಳು ಎಸೆಸೆಲ್ಸಿ ಫಲಿತಾಂಶವನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳುತ್ತವೆ. ಬಹುತೇಕ ಜಿಲ್ಲೆಗಳು ಪ್ರತಿವರ್ಷವೂ ಎಸೆಸೆಲ್ಸಿ ಓದುವ ಮಕ್ಕಳಿಗೆ ಪರೀಕ್ಷೆ ಬರೆಯಲು ಸಾಕಷ್ಟು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದವು. ಆದರೆ, ಈ ವರ್ಷ ಸಮಯ ಅತ್ಯಂತ ಕಡಿಮೆ ಇರುವ ಕಾರಣ ತರಾತುರಿಯಲ್ಲಿ ಮಕ್ಕಳನ್ನು ಸಿದ್ಧಗೊಳಿಸುವುದು ಕಷ್ಟಕರವಾಗಿದೆ. ಇದೆಲ್ಲದರ ಪರಿಣಾಮ ಒತ್ತಡಕ್ಕೆ ಸಿಲುಕುವುದು ಶಿಕ್ಷಕರು ಮತ್ತು ಮಕ್ಕಳು ಮಾತ್ರ. ಹಾಗಾಗಿ ಸರಕಾರ ಎಸೆಸೆಲ್ಸಿ ಪರೀಕ್ಷೆ ನಡೆಸುವ ಮುನ್ನ ಮಕ್ಕಳು ಈ ಪರೀಕ್ಷೆ ಬರೆಯಲು ಮಾನಸಿಕವಾಗಿ ಸಿದ್ಧರಾಗಿದ್ದಾರೆಯೇ ಎಂದು ಸಾಕಷ್ಟು ಯೋಚಿಸಬೇಕಾಗಿದೆ.

-ಪ್ರಹ್ಲಾದ್ ವಾ. ಪತ್ತಾರ, ಯಡ್ರಾಮಿ, ಕಲಬುರಗಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X