ಕುಂಜತ್ತೂರು: ಕಾರ್ಮಿಕನ ಮೃತದೇಹ ಬಾವಿಯಲ್ಲಿ ಪತ್ತೆ
ಮಂಜೇಶ್ವರ, ಜ.20: ಉತ್ತರ ಪ್ರದೇಶ ಮೂಲದ ಕಾರ್ಮಿಕನೋರ್ವನ ಮೃತದೇಹ ಮಂಜೇಶ್ವರ ಠಾಣಾ ವ್ಯಾಪ್ತಿಯ ಕುಂಜತ್ತೂರು ಎಂಬಲ್ಲಿನ ಕೆರೆಯಲ್ಲಿ ಪತ್ತೆಯಾಗಿದ್ದು, ನಿಗೂಢ ಸಾವಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿದ್ಯುತ್ ಕಂಬ ತಯಾರಿ ಘಟಕದಲ್ಲಿ ಕಾರ್ಮಿಕನಾಗಿದ್ದ ಅನಿಲ್ ಕುಮಾರ್ ಮೃತಪಟ್ಟವರು. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಇವರ ಮೃತದೇಹ ಮಂಗಳವಾರ ಸಂಜೆ ಕುಂಜತ್ತೂರು ಅಂಬಿತ್ತಡಿ ಎಂಬಲ್ಲಿನ ಖಾಸಗಿ ವ್ಯಕ್ತಿಯೋರ್ವರ ಕೆರೆಯಲ್ಲಿ ಪತ್ತೆಯಾಗಿತ್ತು. ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಪರಿಸರವಾಸಿಗಳು ಗಮನಿಸಿದಾಗ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಅನಿಲ್ ತಲೆಯಲ್ಲಿ ಗಾಯ ಕಂಡು ಬಂದಿದೆಯೆನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ನೈಜ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Next Story