Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ಪಕ್ಷ ದೇವೇಗೌಡರ ಹಿಡಿತದಿಂದ ಕೈ...

ಜೆಡಿಎಸ್ ಪಕ್ಷ ದೇವೇಗೌಡರ ಹಿಡಿತದಿಂದ ಕೈ ತಪ್ಪಿದೆ: ಶಾಸಕ ಜಿ.ಟಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ20 Jan 2021 10:41 PM IST
share
ಜೆಡಿಎಸ್ ಪಕ್ಷ ದೇವೇಗೌಡರ ಹಿಡಿತದಿಂದ ಕೈ ತಪ್ಪಿದೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು,ಜ.20: ಜೆಡಿಎಸ್ ಪಕ್ಷ ಎಚ್.ಡಿ.ದೇವೇಗೌಡರ ಹಿಡಿತದಿಂದ ಕೈ ತಪ್ಪಿದೆ. ದೇವೇಗೌಡರೇ ಮಕ್ಕಳ ಮಾತನ್ನು ಕೇಳುವ ಸ್ಥಿತಿಯಲ್ಲಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮನ್ನು ಬೆಳೆಸಿದ ದೇವೇಗೌಡರ ಬಗ್ಗೆ ನಮಗೆ ಅಪಾರ ಗೌರವವಿದೆ. ದೇವೇಗೌಡರಂತೆಯೇ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆಯೂ ಗೌರವಯುತವಾಗಿದ್ದೇನೆ. ಆದರೆ, ಕುಮಾರಸ್ವಾಮಿ ನುಡಿಯೋದೆ ಒಂದು ನಡೆಯೋದೆ ಒಂದು. ಪಕ್ಷದಲ್ಲಿ ದೊಡ್ಡಗೌಡರ ಮಾತು ನಡೆಯುತ್ತಿಲ್ಲ ಎನ್ನುವ ಬೇಸರವಿದೆ ಎಂದರು.

ಪಕ್ಷ ಸಂಘಟನೆಗೆ ಆಸಕ್ತಿ ಇಲ್ಲದವರಿಗೆ ಹೇಗೆ ಹುದ್ದೆ ಕೊಡಲಿ ಎಂಬ ಎಚ್‍ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಚಾಮುಂಡೇಶ್ವರಿ ಕ್ಷೇತ್ರದಿಂದ “ಕುಮಾರ ಪರ್ವ” ಕಾರ್ಯಕ್ರಮ ರೂಪಿಸಿದ್ದನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮರೆತಿದ್ದಾರೆ. ಕುಮಾರ ಪರ್ವದಿಂದಲೇ ಜೆಡಿಎಸ್ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗಿದ್ದು. ಅಲ್ಲದೆ, ಎಚ್‍ಡಿಕೆ ಸಿಎಂ ಆಗಬೇಕೆಂದವರಲ್ಲಿ ನಾನೇ ಮೊದಲಿಗ. ನಾನು ಕುಮಾರಪರ್ವ ಮಾಡಿದ್ದರಿಂದಲೇ ಜೆಡಿಎಸ್ ನ 39 ಮಂದಿಯೂ 20-30 ಸಾವಿರ ಅಂತರದಲ್ಲಿ ಗೆಲುವು ಕಾಣಲು ಸಾಧ್ಯವಾಯಿತು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ನನಗೆ ಮುಖ್ಯಮಂತ್ರಿಗೆ ಸಮನಾದ ಸ್ಥಾನ ನೀಡುತ್ತೇನೆ ಎಂದು ಘೋಷಣೆ ಮಾಡಿದರು. ತದನಂತರ ಬೇಡ ಎಂದರೂ ಉನ್ನತ ಶಿಕ್ಷಣ ಸ್ಥಾನ ನೀಡಿದರು. ಆದರೂ ಅವರ ಮೇಲಿನ ಗೌರವದಿಂದ ಸುಮ್ಮನಾಗಿದ್ದೆ ಎಂದು ತಿಳಿಸಿದರು.

ಚುನಾವಣೆ ಬಂದಾಗ ಇವರೆಲ್ಲಾ ಎಲ್ಲಿರುತ್ತಾರೆ ಎಂದು ಗೊತ್ತಿದೆ ಎಂಬ ಎಚ್‍ಡಿಕೆ ಹೇಳಿಕೆಗೆ ಉತ್ತರಿಸಿ, ನಾನು ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ಗೊತ್ತಿದ್ದರೆ ಯಾವ ಪಕ್ಷಕ್ಕೆ ಹೋಗುತ್ತೇನೆ ಎಂದು ಅವರೇ ಹೇಳಲಿ. ಮೈಸೂರಿಗೆ ಬಂದು ನನ್ನನ್ನ ಉಚ್ಚಾಟಿಸುತ್ತೇನೆ ಎಂದಿದ್ದಾರೆ. ಅವರು ಏನು ನಿರ್ಧಾರ ಕೈಗೊಂಡರೂ ಪ್ರೀತಿಯಿಂದಲೇ ಸ್ವೀಕರಿಸುತ್ತೇನೆ. ನನ್ನ ಪಕ್ಷ ಸಂಘಟನಾ ಸಾಮರ್ಥ್ಯ ಕುಮಾರಸ್ವಾಮಿಗೆ ಗೊತ್ತಿಲ್ಲವೇ? ಎಂದು ಜಿಟಿಡಿ ತಿರುಗೇಟು ನೀಡಿದರು.

ಸಾ.ರಾ.ಮಹೇಶ್ ಅವರು ನನ್ನನ್ನು ಭೇಟಿ ಮಾಡಿದ ನಂತರ ಸಭೆಗಳಲ್ಲಿ ಭಾಗವಹಿಸುವಂತೆ ಕೋರಿದರು. ಇನ್ನೂ ಒಂದೆರಡು ತಿಂಗಳ ಕಾಲ ಬಿಡುವು ನೀಡಿ ಎಂದು ಕೋರಿದೆ. ನಂತರದಲ್ಲಿ ನಡೆದ ನಗರಪಾಲಿಕೆ ಸಭೆಗೆ ಆಹ್ವಾನವೇ ನೀಡಲಿಲ್ಲ. ಹೀಗೆ ನನ್ನನ್ನೂ ಕಡೆಗಣಿಸುವುದೂ ಆವರೇ, ಪಕ್ಷ ಸಂಘಟನೆಗೆ ಒತ್ತು ನೀಡುವುದಿಲ್ಲ ಎಂದು ಹೇಳುವುದೂ ಅವರೇ. ಎಲ್ಲ ನೋವನ್ನು ನಾನು ಸಹಿಸಿಕೊಂಡಿದ್ದೇನೆ ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X