Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿ.ಸಿ.ರೋಡ್ : ಜ. 22ರಂದು ರೈತ, ದಲಿತ,...

ಬಿ.ಸಿ.ರೋಡ್ : ಜ. 22ರಂದು ರೈತ, ದಲಿತ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ20 Jan 2021 10:48 PM IST
share
ಬಿ.ಸಿ.ರೋಡ್ : ಜ. 22ರಂದು ರೈತ, ದಲಿತ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ಧರಣಿ ಸತ್ಯಾಗ್ರಹ

ಬಂಟ್ವಾಳ, ಜ.20: ರೈತ, ದಲಿತ, ಕಾರ್ಮಿಕ ಮತ್ತು ಜನವಿರೋಧಿ ಮಸೂದೆಗಳನ್ನು ಹಿಂಪಡೆಯಲು ಆಗ್ರಹಿಸಿ ಬಂಟ್ವಾಳ ತಾಲೂಕು ಮಟ್ಟದ ಒಂದು ದಿನದ ಉಪವಾಸ ಧರಣಿ ಸತ್ಯಾಗ್ರಹ ಜನವರಿ 22ರಂದು ಬಿ.ಸಿ.ರೋಡ್ ಮಿನಿ ವಿಧಾನ ಸೌಧದ ಮುಂದೆ ಬೆಳಗ್ಗೆ 10:30ರಿಂದ ಸಂಜೆ 4 ಗಂಟೆಯ ವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತಸಂಘ ಹಸಿರು ಸೇನೆಯ ದ.ಕ. ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫರ್ನಾಂಡೀಸ್ ತಿಳಿಸಿದರು.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂ ಸುಧಾರಣೆ ಕಾಯ್ದೆ ಸಹಿತ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲೆ ಪ್ರತೀ ತಾಲೂಕಿನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಜನವರಿ 26ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಿಂದ ಮಂಗಳೂರು ಮಿನಿವಿಧಾನ ಸೌಧದ ವರೆಗೆ ಜಿಲ್ಲೆಯ ಸಾವಿರಾರು ರೈತರು ತಮ್ಮ ಟ್ರ್ಯಾಕ್ಟರ್ ಗಳೊಂದಿಗೆ ಬೃಹತ್ ಮೆರವಣಿಗೆ ಹಾಗೂ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಹೇಳಿದರು.

ಕೇಂದ್ರ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭ ತಂದುಕೊಡುವ ರೈತ, ದಲಿತ, ಕಾರ್ಮಿಕ ಹಾಗೂ ಜನ ವಿರೋಧಿಯಾದ ಮಸೂದೆಗಳನ್ನು ಯಾವುದೇ ಸಾರ್ವಜನಿಕ ಚರ್ಚೆ ಇಲ್ಲದೆ ಜಾರಿ ಮಾಡುತ್ತಿದೆ. ಇದನ್ನು ವಿರೋಧಿಸುವವರಿಗೆ ಅರ್ಬನ್ ನಕ್ಸಲ್, ದೇಶ ವಿರೋಧಿ ಹಣೆಪಟ್ಟಿ ಕಟ್ಟಿ ರೈತರ ಹೋರಾಟದ ದಾರಿ ತಪ್ಪಿಸಲು ಸರಕಾರ ಪ್ರಯತ್ನಿಸುತ್ತಿದೆ. ಆದರೂ ರೈತರು ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರ ಗೊಳಿಸಲಿದ್ದಾರೆ ಎಂದು ಹೇಳಿದರು. 

ಕೇಂದ್ರ ಸರಕಾರ ದೇಶದ ಭೂಮಿ, ಕೃಷಿ, ಮಾರುಕಟ್ಟೆ, ಆಹಾರ ಸಾರ್ವಭೌಮತೆ ಖಾಸಗೀಕರಣದ ಹೆಸರಲ್ಲಿ ಇಡೀ ದೇಶದ ಸಂಪತ್ತು ಕೆಲವೇ ಕೆಲವು ಕಾರ್ಪೊರೇಟ್ ವ್ಯಕ್ತಿಗಳ ಸುಪರ್ದಿಗೆ ನೀಡುತ್ತಿದೆ. ದೇಶದ ಲಾಭದಾಯಕ ಸಂಸ್ಥೆಗಳನ್ನೂ ಖಾಸಗಿಯ ವರಿಗೆ ಮಾರಾಟ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಸಣ್ಣ ಪುಟ್ಟ ಕೈಗಾರಿಕೆಗಳು ಬಾಗಿಲು ಮುಚ್ಚಲಿವೆ. ದೇಶದಲ್ಲಿ ಉದ್ಯೋಗ ಕ್ಷಾಮ ತಲೆದೋರಲಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಲಿದೆ.

ಕರ್ನಾಟಕ ರಾಜ್ಯ ರೈತಸಂಘ ಹಸಿರು ಸೇನೆಯ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಮಾತನಾಡಿ, ದೆಹಲಿಯಲ್ಲಿ ನಡೆಯುತ್ತಿರುವುದು ಕೇವಲ ಒಂದೆರಡು ರಾಜ್ಯದ ರೈತರ ಪ್ರತಿಭಟನೆ ಅಲ್ಲ. ಅಲ್ಲಿ ದೇಶದ ಬಹುತೇಕ ರಾಜ್ಯಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಕೇವಲ ರೈತರ ಸಮಸ್ಯೆ ಅಲ್ಲ. ದೇಶದ ಪ್ರತೀಯೊಂದು ಜನರ ಸಮಸ್ಯೆಯಾಗಿದೆ. ಕೃಷಿ ಕ್ಷೇತ್ರ ಕಾರ್ಪೊರೇಟ್ ಕಂಪೆನಿಗಳ ಪಾಲಾದರೆ ದಿನಬಳಕೆ ವಸ್ತುಗಳ ಬೆಲೆಯನ್ನು ಅವರೇ ನಿರ್ಧರಿಸಲಿದ್ದಾರೆ. ಹೀಗಾಗಿ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗಿ ದೇಶ ಭೀಕರ ಪರಿಸ್ಥಿತಿ ಎದುರಿಸಲಿದೆ. ದೇಶಕ್ಕೆ ಮಾರಕವಾದ ಈ ಕಾಯ್ದೆ ಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲಾ ಜನರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಮಿಕ ಮುಖಂಡ ರಾಮಣ್ಣ ವಿಟ್ಲ, 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ಸಂತ್ರಸ್ತ ಸಮಿತಿಯ ಮುಖಂಡ ರಾಯ್ ಕಾರ್ಲೋ, ಸಾಮಾಜಿಕ ಕಾರ್ಯಕರ್ತ ಅಲ್ತಾಫ್ ತುಂಬೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X