ಅರ್ನಬ್ ಗೋಸ್ವಾಮಿಯನ್ನು ಬಂಧಿಸಲು ಆಗ್ರಹಿಸಿ ಎಸ್ಡಿಪಿಐ ಪ್ರತಿಭಟನೆ
ಮಂಗಳೂರು, ಜ.21: ಎಸ್ಡಿಪಿಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಮಂಗಳೂರು ತಾಲೂಕು ಕಚೇರಿ ಮುಂಭಾಗದಲ್ಲಿ ಗುರುವಾರ ಸಂಜೆ ‘ದೇಶದ್ರೋಹಿ ಪಾಕ್ ಪ್ರೇಮಿ ಅರ್ನಬ್ ಗೋಸ್ವಾಮಿಯನ್ನು ಬಂಧಿಸಿ’ ಎಂಬ ಘೋಷ ವಾಕ್ಯದೊಂದಿಗೆ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಅರ್ನಬ್ ಗೋಸ್ವಾಮಿಯನ್ನು ಕೂಡಲೇ ಜೈಲಿಗಟ್ಟಬೇಕು. ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರಕಾರಕ್ಕೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕ್ಷೇತ್ರ ಅಧ್ಯಕ್ಷ ಸುಹೈಲ್ಖಾನ್ ಮತ್ತು ಎಸ್ಡಿಟಿಯು ಕಾರ್ಯದರ್ಶಿ ಶರೀಫ್ ಪಾಂಡೇಶ್ವರ ಉಪಸ್ಥಿತಿರಿದ್ದರು.
ಕಾರ್ಯಕ್ರಮವನ್ನು ಕಾರ್ಯದರ್ಶಿ ಅಕ್ಬರ್ ರಾಝ ನಿರೂಪಿಸಿ, ವಂದಿಸಿದರು.
Next Story