Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಿಜ್ಞಾನ ಪರೀಕ್ಷೆಯ ತನ್ನ ಪಠ್ಯದಿಂದ...

ಗೋವಿಜ್ಞಾನ ಪರೀಕ್ಷೆಯ ತನ್ನ ಪಠ್ಯದಿಂದ ವಿವಾದಾತ್ಮಕ ಅಧ್ಯಾಯಗಳನ್ನು ಕೈಬಿಟ್ಟ ರಾ.ಕಾಮಧೇನು ಆಯೋಗ

ವಾರ್ತಾಭಾರತಿವಾರ್ತಾಭಾರತಿ21 Jan 2021 10:21 PM IST
share
ಗೋವಿಜ್ಞಾನ ಪರೀಕ್ಷೆಯ ತನ್ನ ಪಠ್ಯದಿಂದ ವಿವಾದಾತ್ಮಕ ಅಧ್ಯಾಯಗಳನ್ನು ಕೈಬಿಟ್ಟ ರಾ.ಕಾಮಧೇನು ಆಯೋಗ

ಹೊಸದಿಲ್ಲಿ,ಜ.21: ಮೋದಿ ಸರಕಾರದ ರಾಷ್ಟ್ರೀಯ ಕಾಮಧೇನು ಆಯೋಗವು ಫೆ.25ರಂದು ತಾನು ನಡೆಸಲಿರುವ ಗೋ ವಿಜ್ಞಾನ ಪರೀಕ್ಷೆಗಾಗಿ ಸಿದ್ಧಪಡಿಸಿರುವ ಆಕರ ವಿಷಯಗಳಿಂದ 10 ಅಧ್ಯಾಯಗಳನ್ನು ಕೈಬಿಟ್ಟಿದೆ. ಈ ಅಧ್ಯಾಯಗಳಲ್ಲಿನ ಹೇಳಿಕೆಗಳು ಅವೈಜ್ಞಾನಿಕವಾಗಿವೆ ಎಂದು ಹಲವರು ಟೀಕಿಸಿದ್ದರು.

54 ಪುಟಗಳ ವಿವಾದಾತ್ಮಕ ಪಠ್ಯವು ಗೋಹತ್ಯೆ ಮತ್ತು ಭೂಕಂಪಗಳಿಗೆ ನಂಟು ಕಲ್ಪಿಸಿತ್ತು ಮತ್ತು ಜರ್ಸಿ ಹಸುಗಳು ಸೋಮಾರಿಗಳಾಗಿವೆ ಹಾಗೂ ಸುಲಭವಾಗಿ ರೋಗಗಳಿಗೆ ತುತ್ತಾಗುತ್ತವೆ ಎಂದು ಬಣ್ಣಿಸಿತ್ತು.

ಜ.6ರಂದು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದ ಪಠ್ಯದಲ್ಲಿ ಆಯೋಗವು ಆಕಳ ಹಾಲು ಮತ್ತು ಮೂತ್ರ ಚರ್ಮದ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತದೆ ಎಂದೂ ಹೇಳಿಕೊಂಡಿತ್ತು.

ಎರಡು ದಿನಗಳ ಬಳಿಕ ಈ ವಿಷಯವನ್ನು ಪಠ್ಯದಿಂದ ತೆಗೆದುಹಾಕಲಾಗಿತ್ತು.

ಹೊಸ ಆವೃತ್ತಿಯನ್ನು ಸೋಮವಾರ ಅಪ್‌ಲೋಡ್ ಮಾಡಲಾಗಿದ್ದು,ಮೂಲ ಆವೃತ್ತಿಯ ಕೇವಲ ಮೂರನೇ ಒಂದು ಭಾಗದಷ್ಟಿದೆ ಮತ್ತು ಎರಡು ಅಧ್ಯಾಯಗಳನ್ನು ಮಾತ್ರ ಒಳಗೊಂಡಿದೆ.

ಈ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಆಯೋಗದ ಮಾಧ್ಯಮ ಪ್ರತಿನಿಧಿಯೋರ್ವರು,ಕೆಲವು ತಾಂತ್ರಿಕ ದೋಷಗಳಿಂದಾಗಿ ವಿಷಯಗಳನ್ನು ತೆಗೆಯಲಾಗಿದ್ದು,ಹೆಚ್ಚು ಲೇಖಕರು ಮತ್ತು ಪ್ರಕಾಶಕರ ಲಿಂಕ್‌ಗಳೊಂದಿಗೆ ಒಂದೊಂದಾಗಿ ಅವುಗಳನ್ನು ಅಪ್‌ಲೋಡ್ ಮಾಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಪಶು ಸಂಗೋಪನೆ ಇಲಾಖೆಯಡಿ 2019ರಲ್ಲಿ ಸ್ಥಾಪನೆಗೊಂಡಿರುವ ಆಯೋಗಕ್ಕೆ ಗೋತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿಯನ್ನು ವಹಿಸಲಾಗಿದೆ.

ಆಯೋಗವು ತನ್ನ ಉಪಕ್ರಮಗಳ ಬಗ್ಗೆ ತಮ್ಮೊಂದಿಗೆ ಚರ್ಚಿಸಿರಲಿಲ್ಲ. ಈ ವಿದ್ಯಮಾನವು ತಮ್ಮನ್ನು ಅವಮಾನಕ್ಕೆ ಗುರಿಯಾಗಿಸಿದೆ ಎಂದು ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳಿಬ್ಬರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X