Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರತ್ಯೇಕ ಪ್ರಕರಣಗಳಲ್ಲಿ 44 ಕೆಜಿ ಗಾಂಜಾ...

ಪ್ರತ್ಯೇಕ ಪ್ರಕರಣಗಳಲ್ಲಿ 44 ಕೆಜಿ ಗಾಂಜಾ ವಶ, 7 ಆರೋಪಿಗಳ ಸೆರೆ

ಮಂಗಳೂರು ಪೊಲೀಸರಿಂದ ಭಾರೀ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ22 Jan 2021 3:14 PM IST
share
ಪ್ರತ್ಯೇಕ ಪ್ರಕರಣಗಳಲ್ಲಿ 44 ಕೆಜಿ ಗಾಂಜಾ ವಶ, 7 ಆರೋಪಿಗಳ ಸೆರೆ

ಮಂಗಳೂರು, ಜ.22: ಕೊಣಾಜೆ ಹಾಗೂ ಉಳ್ಳಾಲದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಗರಕ್ಕೆ ಬೀದರ್ ಹಾಗೂ ತೆಲಂಗಾಣದಿಂದ ಸಾಗಾಟ ಮಾಡಲಾಗುತ್ತಿದ್ದ 44.630 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು, ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. 

ತನ್ನ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ವಶಪಡಿಸಿಕೊಳ್ಳಲಾದ ಗಾಂಜಾ ವೌಲ್ಯದ 9.75 ಲಕ್ಷ ರೂ.ಗಳಾಗಿದೆ. ಇದರೊಂದಿಗೆ 2 ಕಾರು, ದ್ವಿಚಕ್ರ ವಾಹನ ಮೊಬೈಲ್ ಫೋನ್‌ಗಳು ಸೇರಿ ಒಟ್ಟು  23.25 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಬಂಟ್ವಾಳದ ಅಬ್ದುಲ್ ಅಝೀಝ್ ಯಾನೆ ಫೋಕರ್ ಅಝೀಝ್(40), ಮೊಯ್ದಿನ್ ಹಫೀಝ್ ಯಾನೆ ಅಬಿ (34), ತೆಲಂಗಾಣದ ವಿಠಲ್ ಚೌಹಾಣ್ (35), ಬೀದರ್‌ನ ಸಂಜುಕುಮಾರ್ ಯಾನೆ ಸಂಜು (34), ಕಲ್ಲಪ್ಪ (40), ಬಂಟ್ವಾಳದ ಮುಹಮ್ಮದ್ ಹಫೀಝ್ ಯಾನೆ ಅಪ್ಪಿ (23) ಮತ್ತು ಸಂದೀಪ್ (34) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರ ಪೈಕಿ ಅಬ್ದುಲ್ ಅಝೀಝ್ ವಿರುದ್ಧ ಕೊಣಾಜೆ ಠಾಣೆಯಲ್ಲಿ 3 ಗಾಂಜಾ ಪ್ರಕರಣಗಳು, ಕಾವೂರು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ತಲಾ ಒಂದರಂತೆ ಪ್ರಕರಣಗಳು ದಾಖಲಾಗಿವೆ. ಮೊಯ್ದಿನ್ ಹಫೀಝ್ ವಿರುದ್ಧ ಈ ಹಿಂದೆ ಕೊಣಾಜೆಯಲ್ಲಿ ಮೂರು, ಸುರತ್ಕಲ್, ಉಳ್ಳಾಲ, ಕಂಕನಾಡಿಯಲ್ಲಿ ತಲಾ ಒಂದರಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ. ಈತನಿಗೆ ಈ ಹಿಂದೆ ಕೊಣಾಜೆ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ಕೂಡಾ ವಿಧಿಸಿರುತ್ತದೆ. ಆರೋಪಿ ಸಂಜೀವ್ ಕುಮಾರ್ ಹಾಗೂ ಕಲ್ಲಪ್ಪ ವಿರುದ್ಧ ಆಂಧ್ರ ಪ್ರದೇಶದಲ್ಲಿ ಗಾಂಜಾ ಪ್ರಕರಣ ದಾಖಲಾಗಿರುತ್ತದೆ. ವಿಠಲ್ ಚೌಹಾಣ್ ವಿರುದ್ಧ ಆಂಧ್ರ ಪ್ರದೇಶದ ಮನೂರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ವಿವರಿಸಿದರು.

ಶಾಲಾ ಕಾಲೇಜು ಸಮೀಪದ ಅಂಗಡಿಗಳಿಗೆ ಗಾಂಜಾ ಬಿಡಿಯಾಗಿ ಪೂರೈಕೆ
ಬಂಧಿತ ಆರೋಪಿಗಳೆಲ್ಲರೂ ಕ್ರಿಮಿನಲ್ ಹಿನ್ನೆಲೆ ಉಳ್ಳವರಾಗಿದ್ದು, ಭಾರೀ ಪ್ರಮಾಣದಲ್ಲಿ ತಂದ ಗಾಂಜಾವನ್ನು ನಗರದ ಶೈಕ್ಷಣಿಕ ಕೇಂದ್ರಗಳು, ನಗರಸಭೆ, ಪುರಸಭೆ ವ್ಯಾಪ್ತಿಯ ಅಂಗಡಿಗಳಿಗೆ ಬಿಡಿಯಾಗಿ (ಗ್ರಾಂ ಲೆಕ್ಕದಲ್ಲಿ) ನೀಡುವ ಯೋಜನೆ ಹೊಂದಿದ್ದರು. ಇವರಿಂದ ಗಾಂಜಾ ಪಡೆದು ಪೂರೈಕೆ ಮಾಡುತ್ತಿದ್ದವರನ್ನು, ಸೇವಿಸುವವರನ್ನು ತನಿಖೆ ನಡೆಸಿ, ವೈದ್ಯಕೀಯ ತಪಾಸಣೆಗೊಳಪಡಿಸಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X