ವಿಜ್ಞಾನ ಸಾಹಿತ್ಯ ಕಮ್ಮಟ : ಅರ್ಜಿ ಆಹ್ವಾನ
ಉಡುಪಿ, ಜ.22: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮಂಗಳೂರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗ ದೊಂದಿಗೆ ಮಂಗಳೂರು ಪಿಲಿಕುಳದಲ್ಲಿ ಫೆ.19ರಿಂದ 21ರವರೆಗೆ ನಡೆಸಲು ಉದ್ದೇಶಿಸಿರುವ ವಿಜ್ಞಾನ ಸಾಹಿತ್ಯ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನಿಸ ಲಾಗಿದೆ.
ಆಸಕ್ತ 20 ರಿಂದ 45 ವರ್ಷ ಒಳಗಿನ ರಾಜ್ಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ http://karnatakasahithyaacademy.org ಅನ್ನು ಸಂಪರ್ಕಿಸುವಂತೆ ಅಕಾ ಡೆಮಿ ರಿಜಿಸ್ಟ್ರಾರ್ ಕರಿಯಪ್ಪಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story