ಡಿಜಿಟಲ್ ವಹಿವಾಟು ಕುರಿತು ತರಬೇತಿ ಕಾರ್ಯಕ್ರಮ
ಉಡುಪಿ, ಜ. 22: ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಯೋಜನೆಯಡಿ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಡಿಜಿಟಲ್ ವಹಿವಾಟು ಬಗ್ಗೆ ತರಬೇತಿ ಕಾರ್ಯಕ್ರಮವು ಗುರುವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ನಲ್ಲಿ ನಡೆಯಿತು.
ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಎಸ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಲೀಡ್ ಬ್ಯಾಂಕ್ ಮ್ಯಾನೇಜರ್ ರುದ್ರೇಶ್ ಕಾರ್ಯಕ್ರಮ ಉದ್ಘಾಟಿಸಿ, ಆತ್ಮ ನಿರ್ಭರ್ ನಿಧಿಯ ಯೋಜನೆಯಡಿ ಬ್ಯಾಂಕ್ ಮೂಲಕ ಸಾಲ ಸೌಲ್ಯ ಪಡೆದ ಪಲಾನುವಿಗಳಿಗೆ ಡಿಜಿಟಲ್ ವಹಿ ವಾಟು ಕುರಿತು ತರಬೇತಿ ನೀಡಿದರು. ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಅನುಸೂಯ ಆನಂದರಾಮ ಹೇರ್ಳೆ, ಮುಖ್ಯಾಧಿಕಾರಿ ಬಿ.ಅರುಣ್ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯ ಅಭಿಯಾನ ವ್ಯವಸ್ಥಾಪಕ ರಾಮಕೃಷ್ಣ ಉಪಸ್ಥಿತರಿದ್ದರು.
Next Story