Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಯಕ್ರಮಕ್ಕೆ ಆಹ್ವಾನಿಸಿ...

ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವಮಾನಿಸಬೇಡಿ: ಪ್ರಧಾನಿಯಿದ್ದ ವೇದಿಕೆಯಲ್ಲಿಯೇ ಮಮತಾ ಗುಡುಗು

ಜೈ ಶ್ರೀರಾಮ್, ಮೋದಿ ಪರ ಘೋಷಣೆ ಕೂಗಿದ್ದ ಸಭಿಕರು

ವಾರ್ತಾಭಾರತಿವಾರ್ತಾಭಾರತಿ23 Jan 2021 5:46 PM IST
share
ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವಮಾನಿಸಬೇಡಿ: ಪ್ರಧಾನಿಯಿದ್ದ ವೇದಿಕೆಯಲ್ಲಿಯೇ ಮಮತಾ ಗುಡುಗು

ಕೋಲ್ಕತಾ,ಜ.23: ಇಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿದ್ದ ನೇತಾಜಿ ಸುಭಾಷ್ ಚಂದ್ರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಘೋಷಣೆಗಳು ಕೇಳಿಬಂದ ನಂತರ ತಾಳ್ಮೆಯನ್ನು ಕಳೆದುಕೊಂಡ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತನ್ನ ಭಾಷಣವನ್ನು ಮುಂದುವರಿಸಲು ನಿರಾಕರಿಸಿದರು.

ವಿಕ್ಟೋರಿಯಾ ಮೆಮೋರಿಯಲ್‌ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ.ಬಂಗಾಳದ ರಾಜ್ಯಪಾಲ ಜಗದೀಪ ಧಂಕರ್ ಅವರೂ ಉಪಸ್ಥಿತರಿದ್ದರು.

ತನ್ನ ಸರದಿ ಬರುತ್ತಿದ್ದಂತೆ ಬ್ಯಾನರ್ಜಿ ಭಾಷಣವನ್ನು ಆರಂಭಿಸಿದಾಗ ಸಭಿಕರಲ್ಲಿ ಕೆಲವರು ಜೈ ಶ್ರೀರಾಮ ಘೋಷಣೆಗಳನ್ನು ಕೂಗತೊಡಗಿದ್ದರು. ಘೋಷಣೆಗಳನ್ನು ಕೂಗದಂತೆ ಮತ್ತು ಬ್ಯಾನರ್ಜಿಯವರಿಗೆ ಭಾಷಣ ಮಾಡಲು ಅವಕಾಶ ನೀಡುವಂತೆ ಸಂಘಟಕರು ಜನರನ್ನು ಕೋರಿಕೊಂಡಿದ್ದರು. ಆದರೆ ಘಟನೆಯಿಂದ ತೀವ್ರವಾಗಿ ಕೆರಳಿದ್ದ ಬ್ಯಾನರ್ಜಿ ಇದನ್ನು ತೀವ್ರವಾಗಿ ಆಕ್ಷೇಪಿಸಿ,ಸರಕಾರಿ ಕಾರ್ಯಕ್ರಮಕ್ಕೆ ಯಾರನ್ನಾದರೂ ಆಹ್ವಾನಿಸಿದರೆ ಅವರನ್ನು ಅವಮಾನಿಸಬಾರದು ಎಂದು ಹೇಳಿದರು.

‘ಸರಕಾರದ ಕಾರ್ಯಕ್ರಮಗಳು ಘನತೆಯಿಂದ ಕೂಡಿರಬೇಕು ಎಂದು ನಾನು ಭಾವಿಸಿದ್ದೇನೆ. ಇದು ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ. ಇದು ಸರಕಾರಿ ಕಾರ್ಯಕ್ರಮವಾಗಿದ್ದು,ಎಲ್ಲ ಪಕ್ಷಗಳು ಮತ್ತು ಜನರು ಭಾಗಿಯಾಗಿದ್ದಾರೆ. ಯಾರನ್ನಾದರೂ ಆಹ್ವಾನಿಸಿದ ಬಳಿಕ ಅವರನ್ನು ಅವಮಾನಿಸುವುದು ನಿಮಗೆ ಶೋಭೆ ತರುವುದಿಲ್ಲ. ಪ್ರತಿಭಟನೆಯ ದ್ಯೋತಕವಾಗಿ ನಾನು ಮುಂದೆ ಮಾತನಾಡುವುದಿಲ್ಲ. ಜೈ ಹಿಂದ್,ಜೈ ಬಾಂಗ್ಲಾ ’ಎಂದು ಹೇಳುವ ಮೂಲಕ ಬ್ಯಾನರ್ಜಿ ತನ್ನ ಭಾಷಣವನ್ನು ಮೊಟಕುಗೊಳಿಸಿದರು.

Responding to some members raising slogans of Jai Shri Ram in the audience, CM Mamata Banerjee says its not a political programme, and noone should be insulted after being invited pic.twitter.com/lQ6EU2W1Vl

— Vasudha Venugopal (@vasudha_ET) January 23, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X