Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜರದಲ್ಲಿಟ್ಟರೂ ಹಕ್ಕಿಯು ಹಾಡುತ್ತದೆ:...

ಪಂಜರದಲ್ಲಿಟ್ಟರೂ ಹಕ್ಕಿಯು ಹಾಡುತ್ತದೆ: ಒಡನಾಡಿಗಳಿಗೆ ಬರೆದ ಪತ್ರದಲ್ಲಿ ಸ್ಟ್ಯಾನ್ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ24 Jan 2021 8:05 PM IST
share
ಪಂಜರದಲ್ಲಿಟ್ಟರೂ ಹಕ್ಕಿಯು ಹಾಡುತ್ತದೆ: ಒಡನಾಡಿಗಳಿಗೆ ಬರೆದ ಪತ್ರದಲ್ಲಿ ಸ್ಟ್ಯಾನ್ ಸ್ವಾಮಿ

ಹೊಸದಿಲ್ಲಿ,ಜ.24: ತನ್ನ ಬಂಧನದ ನೂರನೆಯ ದಿನದ ಸಂದರ್ಭದಲ್ಲಿ ಜನರು ಪ್ರದರ್ಶಿಸಿದ ಒಗ್ಗಟ್ಟಿಗಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿ ತನ್ನ ಒಡನಾಡಿಗಳಿಗೆ ಮುಂಬೈ ಸಮೀಪದ ತಲೋಜಾ ಸೆಂಟ್ರಲ್ ಜೈಲಿನಿಂದ ಪತ್ರವೊಂದನ್ನು ಬರೆದಿರುವ ಮಾನವ ಹಕ್ಕುಗಳ ಹೋರಾಟಗಾರ ಫಾ. ಸ್ಟ್ಯಾನ್ ಸ್ವಾಮಿ ಅವರು,ಕೆಲವೊಮ್ಮೆ,ವಿಶೇಷವಾಗಿ ಜೈಲಿನಲ್ಲಿ ಅನಿರ್ದಿಷ್ಟತೆಯೇ ಏಕೈಕ ನಿರ್ದಿಷ್ಟ ವಿಷಯವಾಗಿರುವಾಗ ಇಂತಹ ಒಗ್ಗಟ್ಟಿನ ಸುದ್ದಿಗಳು ತನಗೆ ಅಸೀಮ ಬಲ ಮತ್ತು ಧೈರ್ಯವನ್ನು ನೀಡುತ್ತವೆ. ಜೈಲಿನಲ್ಲಿ ದೈನಂದಿನ ಆಧಾರದಲ್ಲಿ ಬದುಕು ಸಾಗುತ್ತಿದೆ ಎಂದು ಹೇಳಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಅ.8ರಂದು ಬಂಧಿಸಲ್ಪಟ್ಟಿರುವ 83ರ ಹರೆಯದ ಸ್ವಾಮಿ ಜ.22ರಂದು ಈ ಪತ್ರವನ್ನು ತನ್ನ ಸ್ನೇಹಿತರು,ಬೆಂಬಲಿಗರು ಮತ್ತು ಎನ್‌ಜಿಒ ನ್ಯಾಷನಲ್ ಕಾನ್ಫಿಡರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್ಸ್‌ಗೆ ಕಳುಹಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಪರಿಸರ ವಿಜ್ಞಾನ ಸಚಿವಾಲಯದ ಟ್ವಿಟರ್ ಹ್ಯಾಂಡಲ್‌ನಲ್ಲಿ ಪತ್ರದಲ್ಲಿಯ ವಿಷಯವನ್ನು ಶೇರ್ ಮಾಡಿಕೊಳ್ಳಲಾಗಿದೆ.

ಪ್ರಕರಣದಲ್ಲಿಯ 16 ಆರೋಪಿಗಳು ಒಂದೇ ಜೈಲಿನಲ್ಲಿದ್ದೇವೆಯಾದರೂ ಪರಸ್ಪರ ಭೇಟಿಯಾಗಲು ಅವಕಾಶವನ್ನು ನೀಡುತ್ತಿಲ್ಲ ಎಂದಿರುವ ಸ್ವಾಮಿ,ಆದರೆ ನಾವೀಗಲೂ ವೃಂದ ಗೀತೆಯನ್ನು ಹಾಡುತ್ತೇವೆ. ಹಕ್ಕಿಯನ್ನು ಪಂಜರದಲ್ಲಿಟ್ಟರೂ ಅದು ಹಾಡುತ್ತದೆ ಎಂದು ಹೇಳಿದ್ದಾರೆ.

ಕಳೆದ ನವಂಬರ್‌ನಲ್ಲಿಯೂ ಸ್ವಾಮಿ ಜೈಲಿನಲ್ಲಿಯ ಜೀವನವನ್ನು ಬಣ್ಣಿಸಿ ಪತ್ರವೊಂದನ್ನು ಬರೆದಿದ್ದು,ಬಂಧನದಲ್ಲಿರುವ ಇತರ ಕಾರ್ಯಕರ್ತರಾದ ವರವರ ರಾವ್,ವೆರ್ನನ್ ಗೊನ್ಸಾಲ್ವಿಸ್ ಮತ್ತು ಅರುಣ ಫೆರೇರಾ ಅವರನ್ನು ಭೇಟಿಯಾಗಲು ತನಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದರು.

ನಿಷೇಧಿತ ಸಿಪಿಐ (ಮಾವೋವಾದಿ) ಸದಸ್ಯರಾಗಿದ್ದಾರೆ ಮತ್ತು 2018ರಲ್ಲಿ ಪುಣೆ ಸಮೀಪದ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ಜಾತಿ ಹಿಂಸಾಚಾರವನ್ನು ಪ್ರಚೋದಿಸಿದ್ದ ಒಳಸಂಚಿನಲ್ಲಿ ಭಾಗಿಯಾಗಿದ್ದರು ಎಂಬ ಆರೋಪದಲ್ಲಿ ಎನ್‌ಐಎ ಸ್ವಾಮಿಯವರನ್ನು ಬಂಧಿಸಿದ್ದು, ಅ.9ರಿಂದಲೂ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X