Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1100 ಕೋಟಿ ವೆಚ್ಚದಲ್ಲಿ 3 ವರ್ಷದಲ್ಲಿ...

1100 ಕೋಟಿ ವೆಚ್ಚದಲ್ಲಿ 3 ವರ್ಷದಲ್ಲಿ ರಾಮಮಂದಿರ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ24 Jan 2021 10:22 PM IST
share
1100 ಕೋಟಿ ವೆಚ್ಚದಲ್ಲಿ 3 ವರ್ಷದಲ್ಲಿ ರಾಮಮಂದಿರ ನಿರ್ಮಾಣ

ಮುಂಬೈ, ಜ.24: ಅಯೋಧ್ಯೆಯಲ್ಲಿ ಸುಮಾರು 3 ವರ್ಷದಲ್ಲಿ ರಾಮಮಂದಿರ ನಿರ್ಮಾಣವಾಗಲಿದ್ದು ಈ ಯೋಜನೆಗೆ 1,100 ಕೋಟಿ ರೂ. ವೆಚ್ಚವಾಗಲಿದೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದದೇವ್ ಗಿರಿ ಮಹಾರಾಜ್ ಹೇಳಿದ್ದಾರೆ.

    ಪ್ರಧಾನ ಮಂದಿರ ಮೂರೂವರೆ ವರ್ಷದಲ್ಲಿ 300ರಿಂದ 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ. ಸಂಪೂರ್ಣ 70 ಎಕರೆ ಪ್ರದೇಶದ ಜಮೀನಿನಲ್ಲಿ ನಡೆಸಲಾಗುವ ಅಭಿವೃದ್ಧಿ ಕಾರ್ಯದ ಖರ್ಚು ಸೇರಿದಂತೆ ಒಟ್ಟು ವೆಚ್ಚ 1,100 ಕೋಟಿ ರೂ. ಆಗಲಿದೆ. ರಾಮಮಂದಿರ ನಿರ್ಮಾಣ ಯೋಜನೆಯಲ್ಲಿ ಒಳಗೊಂಡಿರುವ ತಜ್ಞರೊಂದಿಗೆ ಸಮಾಲೋಚಿಸಿದ ಬಳಿಕ ಯೋಜನೆಯ ವೆಚ್ಚವನ್ನು ನಿಗದಿಗೊಳಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ ಎಂದವರು ಹೇಳಿದ್ದಾರೆ. ಖಾಸಗಿ ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದರು.

   ಕೆಲವು ಕೈಗಾರಿಕೋದ್ಯಮಿಗಳಿಂದ ಈ ಹಣವನ್ನು ದೇಣಿಗೆ ಪಡೆಯಲು ಸಾಧ್ಯವಿದೆ. ನಿರ್ಮಾಣ ಯೋಜನೆಯನ್ನು ತಮಗೆ ವಹಿಸಿಕೊಟ್ಟರೆ ಯೋಜನೆಯನ್ನು ತಾವೇ ಪೂರ್ಣಗೊಳಿಸುವುದಾಗಿ ಕೆಲವು ಉದ್ಯಮಪತಿಗಳು ಮುಂದೆ ಬಂದಿದ್ದಾರೆ. ಆದರೆ ಈ ಪ್ರಸ್ತಾವವನ್ನು ನಯವಾಗಿ ನಿರಾಕರಿಸಲಾಗಿದೆ ಎಂದವರು ಹೇಳಿದ್ದಾರೆ. 2024ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಪಕ್ಷಕ್ಕೆ ದೇಣಿಗೆ ಸಂಗ್ರಹಿಸಲು ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹ ಯೋಜನೆಯನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂಬ ಟೀಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ ನೀವು ಯಾವ ಬಣ್ಣದ ಕನ್ನಡಕ ಧರಿಸಿದ್ದೀರೋ ಆ ಬಣ್ಣದಂತೆ ನಿಮಗೆ ಪರಿಸರ ಕಾಣುತ್ತದೆ. ನಾವು ಯಾವ ಕನ್ನಡಕವನ್ನೂ ಧರಿಸಿಲ್ಲ ಮತ್ತು ನಮ್ಮ ಕಣ್ಣು ಭಕ್ತಿಯ ಮಾರ್ಗದತ್ತ ಕೇಂದ್ರಿತವಾಗಿದೆ. 6.5 ಲಕ್ಷ ಗ್ರಾಮಗಳು ಹಾಗೂ 15 ಕೋಟಿ ಮನೆಗಳನ್ನು ತಲುಪುವ (ದೇಣಿಗೆ ಸಂಗ್ರಹಿಸಲು) ಗುರಿ ಹೊಂದಿದ್ದೇವೆ’ ಎಂದರು.

 ದೇಣಿಗೆ ಸಂಗ್ರಹಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸಕ್ಕೆ ಹೋಗುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ದೇಣಿಗೆ ನೀಡಲು ಸಿದ್ಧರಿದ್ದರೆ ನಾವು ಖಂಡಿತಾ ಹೋಗುತ್ತೇವೆ . ಶಿವಸೇನೆ ಮುಖಂಡೆ, ಮಹಾರಾಷ್ಟ್ರ ವಿಧಾನಪರಿಷತ್ ಉಪಾಧ್ಯಕ್ಷೆ ನೀಲಂ ಗೋರೆ ಒಂದು ಕಿ.ಗ್ರಾಂ ಬೆಳ್ಳಿಯ ಇಟ್ಟಿಗೆ ನೀಡಿದ್ದಾರೆ ಎಂದರು.

ದೇಣಿಗೆ ಸಂಗ್ರಹಕ್ಕೆ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಿವಾಸಕ್ಕೆ ಹೋಗಲು ಸಿದ್ಧರಿದ್ದೀರಾ ಎಂಬ ಪ್ರಶ್ನೆಗೆ ‘ ನನಗೆ ಅಲ್ಲಿ ಅಗೌರವ ತೋರುವುದಿಲ್ಲ ಎಂದು ಯಾರಾದರೂ ಖಾತರಿ ನೀಡಿದರೆ ಖಂಡಿತಾ ಹೋಗುತ್ತೇನೆ’ ಎಂದುತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X