Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಣಿಗಾರಿಕೆ ಅನಾಹುತಗಳಿಗೆ ಸಿಎಂ...

ಗಣಿಗಾರಿಕೆ ಅನಾಹುತಗಳಿಗೆ ಸಿಎಂ ಬೆಂಬಲವಿದೆಯೇ: ಕುಮಾರಸ್ವಾಮಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ24 Jan 2021 11:07 PM IST
share
ಗಣಿಗಾರಿಕೆ ಅನಾಹುತಗಳಿಗೆ ಸಿಎಂ ಬೆಂಬಲವಿದೆಯೇ: ಕುಮಾರಸ್ವಾಮಿ ಪ್ರಶ್ನೆ

ಮಂಡ್ಯ, ಜ.24: ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸುವುದಾಗಿ ಹೇಳುವ ಮೂಲಕ ಅದರಿಂದಾಗುತ್ತಿರುವ ಅನಾಹುತಗಳಿಗೆಲ್ಲಾ ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲವಾಗಿ ನಿಂತಿದ್ದಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರವಿವಾರ ಮದ್ದೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಜಿ ಹಾಕಿದರೆ ಅಕ್ರಮ ಕಲ್ಲುಗಣಿಗಾರಿಕೆ ಸಕ್ರಮಗೊಳಿಸುವುದಾಗಿ ಹೇಳಿರುವುದಕ್ಕೆ ಈ ರೀತಿ ಪ್ರತಿಕ್ರಿಯಿಸಿದರು. ಅಕ್ರಮ ಗಣಿಗಾರಿಕೆ ಸಕ್ರಮಗೊಳಿಸುವುದು ಬೇರೆ. ಆದರೆ, ಸಕ್ರಮದಿಂದ ಆಗುತ್ತಿರುವ ಅನಾಹುತ ತಡೆದು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಮುಖ್ಯಮಂತ್ರಿಗಳ ಆದ್ಯತೆ ಆಗಬೇಕು ಎಂದು ಅವರು ಹೇಳಿದರು.

ಗಣಿಗಾರಿಕೆಯನ್ನು ಸಕ್ರಮಗೊಳಿಸುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವುದು ಅನಾಹುತಗಳನ್ನು ನಿಯಂತ್ರಿಸುವುದಕ್ಕಾಗಿಯೋ ಅಥವಾ ಮತ್ತೆ ಮತ್ತೆ ಮರುಕಳಿಸಲೆಂದೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ತಾಕೀತು ಮಾಡಿದರು.

ಮಂಡ್ಯ ಜಿಲ್ಲೆಯ ಸೇರಿದಂತೆ ರಾಜ್ಯದ ಹಲವೆಡೆ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದನ್ನು ಸರಕಾರ ಪತ್ತೆಹಚ್ಚಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

ಎಫ್‍ಡಿಐ ನೇಮಕಾತಿ ಪ್ರಶ್ನೆ ಪ್ರತಿಕೆ ಮಾತ್ರವಲ್ಲ, ಹೀಗೆಯೇ ಹಲವಾರು ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆ ಆಗುತ್ತಿರುವುದು ರಾಜ್ಯದಲ್ಲಿ ಸಾಮಾನ್ಯವಾಗಿದೆ. ಹಾಗಾಗಿ ಇದು ಸರಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಅವರು ಟೀಕಿಸಿದರು.

ಶ್ರೀರಂಗಪಟ್ಟಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಸರಕಾರದಿಂದ ಬಿಡುಗಡೆಯಾಗಿದೆ. ಆದರೆ, ಯೋಜನೆ ಅನುಷ್ಠಾನಕ್ಕೆ ತರದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿ ವಿರುದ್ಧ ಜೆಡಿಎಸ್ ಶಾಸಕರು ನಾಳೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಶಾಸಕ ಡಿ.ಸಿ.ತಮ್ಮಣ್ಣ, ವಿಧಾನಪರಿಷತ್ ಸದಸ್ಯ ಎನ್.ಅಪ್ಪಾಜೀಗೌಡ, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು, ಪುರಸಭೆ ಸದಸ್ಯೆ ಬಿ.ಸಿ.ಸರ್ವಮಂಗಳಾ, ಕಾರ್ತಿಕ್ ಸಿದ್ದರಾಜು, ರಮೇಶ್, ನಿತೀನ್, ಇತರೆ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X