ಗ್ರಾ.ಪಂ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಂದ ಆಣೆ ಪ್ರಮಾಣ !
ಹನೂರು, ಜ.24: ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಂದ ಆಣೆ ಪ್ರಮಾಣ ಇದೀಗ ಹೆಚ್ಚಾಗುತ್ತಿದ್ದು, ಇದಕ್ಕೆ ಸಾಕ್ಷಿಯಾಗಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಆಣೆ ಪ್ರಮಾಣದ ವಿಡಿಯೋ ವೈರಲ್ ಆಗಿದೆ.
ಹನೂರು ತಾಲೂಕಿನ ಕಣ್ಣೂರು ಗ್ರಾಮ ಪಂಚಾಯತ್ ಸದಸ್ಯರು ಗ್ರಾಮದ ಮುಖಂಡರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಮಾಡಿ ಅಲ್ಲಿ ಕರ್ಪೂರ ಹಚ್ಚಿ ಆಣೆ ಪ್ರಮಾಣ ಮಾಡಿಸಿದ ಘಟನೆ ನಡೆದಿದೆ.
ಕಣ್ಣೂರು ಗ್ರಾಮ ಪಂಚಾಯತ್ ಸದಸ್ಯರು, ಮುಖಂಡ ಬಸವರಾಜಪ್ಪರವರ ಸಮ್ಮುಖದಲ್ಲಿ ಕರ್ಪೂರ ಹಚ್ಚಿ ಧರ್ಮಸ್ಥಳ ಮಂಜುನಾಥ ಸಾಕ್ಷಿಯಾಗಿ ಅಧಿಕಾರ ಹಂಚಿಕೊಳ್ಳುವ ಆಣೆ ಪ್ರಮಾಣ ಮಾಡಿದ್ದಾರೆ. ಈ ವೇಳೆ ಮೊಬೈಲ್ ನಲ್ಲಿ ಚಿತ್ರೀಕರಣ ಸಹ ಮಾಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Next Story