Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಮಹಾನಗರ ಪಾಲಿಕೆ...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗೋಹತ್ಯೆ ನಿಷೇಧ ಜಾರಿ: ಮೇಯರ್ ಘೋಷಣೆ

ಆಡಳಿತ- ವಿಪಕ್ಷ ಸದಸ್ಯರ ನಡುವೆ ವಾಗ್ವಾದ

ವಾರ್ತಾಭಾರತಿವಾರ್ತಾಭಾರತಿ25 Jan 2021 8:17 PM IST
share
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗೋಹತ್ಯೆ ನಿಷೇಧ ಜಾರಿ: ಮೇಯರ್ ಘೋಷಣೆ

ಶಿವಮೊಗ್ಗ,ಜ.25: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರುವ ವಿಚಾರವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಸದಸ್ಯರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.

ಸೋಮವಾರ ಮಹಾನಗರಪಾಲಿಕೆ ಮೇಯರ್ ಸುವರ್ಣ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವುದಾಗಿ ಮೇಯರ್ ಸುವರ್ಣ ಶಂಕರ್ ಘೋಷಿಸಿದರು.

ಇದಕ್ಕೆ ವಿಪಕ್ಷ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರದಲ್ಲೇ ಅತಿ ಹೆಚ್ಚು ಗೋಮಾಂಸವನ್ನು ವಿದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಮೊದಲು ಅದನ್ನು ನಿಲ್ಲಿಸಿ ಎಂದು ಆಗ್ರಹಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಸದಸ್ಯರ ನಡುವೆ ಈ ಬಗ್ಗೆ ಕೆಲ ಕಾಲ ವಾಗ್ವಾದ ನಡೆಯಿತು. ಈ ನಡುವೆ ಆರೆಸ್ಸೆಸ್ ಪದ ಬಳಸಿದ್ದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಸಭೆಯಲ್ಲಿ ಏನೇ ವಾಗ್ವಾದ ನಡೆದರೂ ಮೇಯರ್, ಸರ್ಕಾರ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿ ಮಾಡುವುದಾಗಿ ಘೋಷಿಸಿದರು.

ನಗರ ವ್ಯಾಪ್ತಿಯಲ್ಲಿ ಗೋಹತ್ಯೆ ಮಾಡುವವರ ವಿರುದ್ಧ ಕಾಯ್ದೆಯಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ದೇಶದಲ್ಲೇ ಮೊದಲ ಬಾರಿಗೆ ಗೋ ಸಂರಕ್ಷಣೆಗಾಗಿ ಶಿವಮೊಗ್ಗ ಪಾಲಿಕೆ 50 ಲಕ್ಷ ಅನುದಾನ ತೆಗೆದಿರಿಸಿದೆ. ಜಿಲ್ಲಾಡಳಿತ ಕೂಡ ಚೆಟ್ನಳ್ಳಿಯಲ್ಲಿ ಸರ್ವೇ ನಂ.76ರಲ್ಲಿ 5 ಎಕರೆ ಜಾಗವನ್ನು ಗೋ ಸಂರಕ್ಷಣೆಗಾಗಿ ಮೀಸಲಿಟ್ಟಿದ್ದು, ಪಾಲಿಕೆಯಿಂದ ಅಲ್ಲಿ ಗೋ ಸಂರಕ್ಷಣೆಯ ಬಗ್ಗೆ ಕ್ರಮಕೈಗೊಳ್ಳುತ್ತೇವೆ. ಇನ್ನು ಮುಂದೆ ಪಾಲಿಕೆಯ ವ್ಯಾಪ್ತಿಯಲ್ಲಿ ಒಂದೇ ಒಂದು ಗೋಹತ್ಯೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು.

ಸಭೆಯ ಆರಂಭದಲ್ಲಿ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ ವಿರೋಧ ಪಕ್ಷದ ಸದಸ್ಯ ರಮೇಶ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು. ಕೆಲವೆಡೆ ಇನ್ನೂ ಯುಜಿಡಿ ಮತ್ತು ಯುಜಿ ಕೇಬಲ್ ಟೆಂಡರ್ ಆಗಿಲ್ಲ ಎಂಬ ಮಾಹಿತಿ ಬಂದಿದೆ. ಯಾವುದೇ ಕಾಮಗಾರಿ ನಡೆಸುವಾಗಲೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಸ್ಥಳೀಯ ಸದಸ್ಯರ ಗಮನಕ್ಕೆ ತರುತ್ತಿಲ್ಲ. ಸಾರ್ವಜನಿಕರ ಎದುರಿಗೆ ವಾರ್ಡ್ ಸದಸ್ಯರು ತಲೆ ತಗ್ಗಿಸುವಂತಾಗಿದೆ. ನಗರವೆಲ್ಲ ಧೂಳು ಮಯವಾಗಿದ್ದು, ಅವೈಜ್ಞಾನಿಕ ಕಾಮಗಾರಿಯಿಂದ ಕೊರೋನ ಇಲ್ಲದಿದ್ದರೂ ಧೂಳಿನಿಂದ ಬರುವ ಕಾಯಿಲೆಯ ಭಯದಿಂದ ಮಾಸ್ಕ್ ಹಾಕುವ ಅನಿವಾರ್ಯತೆಯಿದೆ. ನಗರ ನೀರು ಸರಬರಾಜು ಮಂಡಳಿ, ಮೆಸ್ಕಾಂ, ಯುಜಿ ಕೇಬಲ್, ದೂರ ವಾಣಿ ಕೇಬಲ್ ಹಾಕಲು ಕಾಂಕ್ರೀಟ್ ರಸ್ತೆಗಳನ್ನು ಅಗೆಯಲಾಗುತ್ತಿದೆ. ಯಾವುದೇ ಅಧಿಕಾರಿಗಳಿಗೆ ಪರಸ್ಪರ ಸಂಪರ್ಕ ಇಲ್ಲದ್ದರಿಂದ ಬೇಕಾಬಿಟ್ಟಿಯಾಗಿ ಕೆಲಸ ಮಾಡುತ್ತಿದ್ದಾರೆ. ಫೆಬ್ರವರಿಯೊಳಗೆ ಕಾಮಗಾರಿ ಮುಗಿಸದಿದ್ದರೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ದಂಡ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಆಗುತ್ತಿದೆ. ನಗರ ಧೂಳಿನ ನಗರವಾಗಿ ಪರಿವರ್ತನೆಯಾಗಿದೆ. ಸ್ಮಾರ್ಟ್ ಸಿಟಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುತ್ತಿಲ್ಲ. ಕಾಮಗಾರಿ ಕಳಪೆ ಗುಣಮಟ್ಟದಾಗಿದೆ. ಸ್ಮಾರ್ಟ್ ಸಿಟಿ 500 ಕೋಟಿ ವಾಪಾಸು ಹೋಗಿದ್ದು, ನಿಗದಿತ ಅವಧಿಯೊಳಗೆ ಕೆಲಸ ಮಾಡುವಂತೆ ಕ್ರಮಕೈಗೊಳ್ಳಿ ಎಂದರು.

ಸದಸ್ಯ ನಾಗರಾಜ್ ಕಂಕಾರಿ ಅವರು ಮಾತನಾಡಿ, ಸ್ಮಾರ್ಟ್‌ಸಿಟಿ  ಕಾಮಗಾರಿಗಳು ನಮ್ಮ ವಾರ್ಡ್ ಗಳಲ್ಲಿ ನಡೆದರೂ ಮಾಹಿತಿಯೇ ಇಲ್ಲ. ಅವರಿಗೆ ಬೇಕಾದ ರೀತಿಯಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಆರೋಪಿಸಿದರು. ಆಡಳಿತ ಪಕ್ಷದ ನಾಯಕ ಚೆನ್ನಬಸಪ್ಪ ಮಾತನಾಡಿ, ನಾವು ಅನೇಕ ಸಂಕಷ್ಟಗಳ ನಡುವೆಯೂ ಸಾಕಷ್ಟು ಅನುದಾನ ತಂದು ಪಾಲಿಕೆ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ಜನ ಸಂದಣಿ ಇರುವ ಜಾಗದಲ್ಲಿ ಕಾಮಗಾರಿ ಮಾಡುವಾಗ ಕೆಲವೊಂದು ವ್ಯತ್ಯಾಸವಾಗುತ್ತದೆ. ನಾವೇನು ಮಾಯಾದಂಡವನ್ನು ಹೊಂದಿಲ್ಲ ಎಂದರು.

ಸಭೆ ಮಧ್ಯಾಹ್ನದ ನಂತರವೂ ಮುಂದುವರಿಯಿತು. ಉಪಮೇಯರ್ ಸುರೇಖಾ ಮುರಳಿಧರ್, ಆಯುಕ್ತ ಚಿದಾನಂದ ವಠಾರೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X