Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಬಜೆಟ್ ಮಂಡನೆ ದಿನದಂದು...

ಕೇಂದ್ರ ಬಜೆಟ್ ಮಂಡನೆ ದಿನದಂದು ಸಂಸತ್ತಿನತ್ತ ಮೆರವಣಿಗೆ ನಡೆಸಲು ರೈತರ ಯೋಜನೆ

ವಾರ್ತಾಭಾರತಿವಾರ್ತಾಭಾರತಿ25 Jan 2021 8:38 PM IST
share
ಕೇಂದ್ರ ಬಜೆಟ್ ಮಂಡನೆ ದಿನದಂದು ಸಂಸತ್ತಿನತ್ತ ಮೆರವಣಿಗೆ ನಡೆಸಲು ರೈತರ ಯೋಜನೆ

ಹೊಸದಿಲ್ಲಿ,ಜ.25: ಕೇಂದ್ರ ಮುಂಗಡಪತ್ರ ಮಂಡನೆಯ ದಿನವಾಗಿರುವ ಫೆ.1ರಂದು ವಿವಿಧೆಡೆಗಳಿಂದ ಸಂಸತ್ತಿಗೆ ಜಾಥಾ ನಡೆಸಲಾಗುವುದು ಎಂದು ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯನ್ನು ನಡೆಸುತ್ತಿರುವ ರೈತ ಸಂಘಟನೆಗಳು ಸೋಮವಾರ ಪ್ರಕಟಿಸಿವೆ. ಪ್ರತಿಭಟನಾ ನಿರತ ರೈತರು ಈಗಾಗಲೇ ಹಮ್ಮಿಕೊಂಡಿರುವ ಟ್ರಾಕ್ಟರ್ ರ್ಯಾಲಿಯು ನಿಗದಿಯಂತೆ ಜ.26ರಂದು ನಡೆಯಲಿದೆ.

ನೂತನ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂಬ ತಮ್ಮ ನಿಲುವಿಗೆ ರೈತರು ಅಂಟಿಕೊಂಡಿದ್ದಾರೆ ಮತ್ತು ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆಯನ್ನು ಮುಂದುವರಿಸಲಿದ್ದಾರೆ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಕ್ರಾಂತಿಕಾರಿ ಕಿಸಾನ ಯೂನಿಯನ್‌ನ ನಾಯಕ ದರ್ಶನ ಪಾಲ್ ಅವರು,‘ಫೆ.1ರಂದು ನಾವು ಸಂಸತ್ತಿಗೆ ಕಾಲ್ನಡಿಗೆ ಜಾಥಾವನ್ನು ನಡೆಸಲಿದ್ದೇವೆ. ನಾಳೆಯ ಟ್ರಾಕ್ಟರ್ ರ್ಯಾಲಿಯು ಸರಕಾರಕ್ಕೆ ನಮ್ಮ ಬಲವನ್ನು ಮನದಟ್ಟು ಮಾಡಲಿದೆ ಮತ್ತು ಪ್ರತಿಭಟನೆ ಪಂಜಾಬ್ ಮತ್ತು ಹರ್ಯಾಣಕ್ಕೆ ಮಾತ್ರ ಸೀಮಿತವಾಗಿಲ್ಲ,ಅದು ಇಡೀ ರಾಷ್ಟ್ರದ ಆಂದೋಲನವಾಗಿದೆ ಎನ್ನುವುದು ಅವರಿಗೆ (ಸರಕಾರ) ತಿಳಿಯಲಿದೆ ’ಎಂದರು.

  ಅಂದೋಲನವು ಈವರೆಗೆ ಶಾಂತಿಯುತವಾಗಿ ನಡೆದಿರುವಂತೆ ಪ್ರತಿಯೊಂದು ಜಾಥಾ ಮತ್ತು ಪ್ರತಿಭಟನೆ ಶಾಂತವಾಗಿಯೇ ನಡೆಯಲಿವೆ. ಟ್ರಾಕ್ಟರ್ ಪರೇಡ್‌ಗಾಗಿ ಇಲ್ಲಿಗೆ ಆಗಮಿಸಿರುವ ರೈತರು ವಾಪಸ್ ಹೋಗುವುದಿಲ್ಲ ಮತ್ತು ಪ್ರತಿಭಟನೆಯಲ್ಲಿ ಜೊತೆಗೂಡಲಿದ್ದಾರೆ ಎಂದರು.

ಮಂಗಳವಾರದ ಗಣತಂತ್ರ ದಿನಾಚರಣೆ ಮತ್ತು ರೈತರ ಟ್ರಾಕ್ಟರ್ ರ‍್ಯಾಲಿ ಹಿನ್ನೆಲೆಯಲ್ಲಿ ರಾಜಪಥ ಮತ್ತು ದಿಲ್ಲಿಯ ಹಲವಾರು ಗಡಿಕೇಂದ್ರಗಳಲ್ಲಿ ಸಾವಿರಾರು ಸಶಸ್ತ್ರ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು,ರಾಷ್ಟ್ರ ರಾಜಧಾನಿಗೆ ಹಲವು ಸ್ತರಗಳ ಭದ್ರತೆಯನ್ನೊದಗಿಸಲಾಗಿದೆ.

ರೈತರ ಟ್ರಾಕ್ಟರ್ ರ‍್ಯಾಲಿ ಮಧ್ಯ ದಿಲ್ಲಿಯನ್ನು ಪ್ರವೇಶಿಸುವುದಿಲ್ಲ ಮತ್ತು ಗಣತಂತ್ರ ದಿನದ ಪರೇಡ್ ಮುಗಿದ ಬಳಿಕವೇ ಆರಂಭಗೊಳ್ಳುತ್ತದೆ. ಸಿಂಘು,ಟಿಕ್ರಿ ಮತ್ತು ಘಾಜಿಪುರ ಗಡಿ ಕೇಂದ್ರಗಳಿಂದ ದಿಲ್ಲಿಯನ್ನು ಪ್ರವೇಶಿಸಲಿರುವ ರ್ಯಾಲಿಯಲ್ಲಿ ಸುಮಾರು ಎರಡು ಲಕ್ಷ ಟ್ರಾಕ್ಟರ್‌ಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X