Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಅತ್ಯುತ್ತಮ ಸಮುದಾಯ ನಾಯಕ’ ಪ್ರಶಸ್ತಿಗೆ...

‘ಅತ್ಯುತ್ತಮ ಸಮುದಾಯ ನಾಯಕ’ ಪ್ರಶಸ್ತಿಗೆ ಫಾ.ಪ್ರವೀಣ್ ಮಾರ್ಟಿಸ್ ಆಯ್ಕೆ

ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಬ್ಲಿಕ್ ಪಾಲಿಸಿ 2020-21

ವಾರ್ತಾಭಾರತಿವಾರ್ತಾಭಾರತಿ25 Jan 2021 10:28 PM IST
share
‘ಅತ್ಯುತ್ತಮ ಸಮುದಾಯ ನಾಯಕ’ ಪ್ರಶಸ್ತಿಗೆ ಫಾ.ಪ್ರವೀಣ್ ಮಾರ್ಟಿಸ್ ಆಯ್ಕೆ

ಮಂಗಳೂರು, ಜ.25: ಮಂಗಳೂರು ಮೂಲದ ಅಂತರಾಷ್ಟ್ರೀಯ ಸಂಸ್ಥೆಯಾದ ‘ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಬ್ಲಿಕ್ ಪಾಲಿಸಿಯ (ಐಐಪಿಪಿ) 2020-21ರ ಸಾಲಿನ ‘ಮಂಗಳೂರಿನ ಅತ್ಯುತ್ತಮ ಸಮುದಾಯ ನಾಯಕರು’ ಪ್ರಶಸ್ತಿಗೆ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ಫಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಆಯ್ಕೆಯಾಗಿದ್ದಾರೆ.

ಮಾನವೀಯ, ಶೈಕ್ಷಣಿಕ, ಆಡಳಿತ ಹಾಗೂ ಸಾರ್ವಜನಿಕ ಒಳಿತಿಗಾಗಿ ನೀಡಿದ ಸೇವೆಗಾಗಿ ಫಾ.ಪ್ರವೀಣ್ ಮಾರ್ಟಿಸ್ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಗಣರಾಜ್ಯೋತ್ಸವದ ದಿನದ ಮುನ್ನ ದಿನದಂದು ಇಂಟರ್ ನ್ಯಾಷನಲ್ ಓರಿಯಂಟೇಶನ್ ಸೆಂಟರ್ ಮತ್ತು ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಬ್ಲಿಕ್ ಪಾಲಿಸಿ ಸಂಸ್ಥಾಪಕ ಅಮೆರಿಕದ ಟೆಕ್ಸಾಸ್ ಹೂಸ್ಟನ್, ಡಲ್ಲಾಸ್‌ನ ಮ್ಯಾಕ್ಸ್ ರಸ್ಕೀನ್ಹಾ ಮತ್ತು ಜೆಸ್ಸಿ ರಸ್ಕಿನ್ಹಾ ಈ ಪ್ರಶಸ್ತಿಯನ್ನು ಪ್ರಕಟಿಸಿದ್ದಾರೆ.

‘ಸಂಪೂರ್ಣ ಕುಟುಂಬ ಪ್ರಾಯೋಜಿತ ಘಟಕವಾದ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಬ್ಲಿಕ್ ಪಾಲಿಸಿಯು ಫಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಅವರನ್ನು 2020-2021ರ ‘ಅತ್ಯುತ್ತಮ ಸಮುದಾಯ ನಾಯಕ’ ಪ್ರಶಸ್ತಿಗೆ ಆಯ್ಕೆ ಮಾಡಲು ಹೆಮ್ಮೆಯಾಗುತ್ತಿದೆ’ ಎಂದು ಸಂಸ್ಥಾಪಕ ಮ್ಯಾಕ್ಸ್ ರಸ್ಕೀನ್ಹಾ ಅಭಿಪ್ರಾಯಪಟ್ಟಿದ್ದಾರೆ.

ಫಾ. ಪ್ರವೀಣ್ ಮಾರ್ಟಿಸ್ ಪರಿಚಯ: ಉಡುಪಿ ಜಿಲ್ಲೆಯ ಶಂಕರ್‌ಪುರದ ಮಧ್ಯಮ ಕುಟುಂಬದಲ್ಲಿ ಜನಿಸಿದ ಫಾ.ಪ್ರವೀಣ್, ಸೊಸೈಟಿ ಆಫ್ ಜೀಸಸ್ ಎಂದು ಕರೆಯಲ್ಪಡುವ ಜೆಸ್ಯೂಟ್ಸ್ ಸೊಸೈಟಿಯ ಅಡಿಯಲ್ಲಿ ಯಾಜಕರಾಗಿ ಸೇರುವ ಮೊದಲು ಉತ್ತಮ ಶೈಕ್ಷಣಿಕ ವೃತ್ತಿಜೀವನ ಹೊಂದಿದ್ದರು. ಅದನ್ನು ತ್ಯಾಗಮಾಡಿ ಯೇಸುಸಭೆಗೆ ಯಾಜಕರಾಗಿ ಸೇರಿ, ಹಲವಾರು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾಗಿ ತಮ್ಮ ನಿಸ್ವಾರ್ಥ ಸೇವೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಬೆಲ್ಜಿಯಂನ ನಮೂರ್ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಮತ್ತು ಎಲೆಕ್ಟ್ರೋಕೆಮಿಸ್ಟ್ರಿ ವಿಭಾಗದಿಂದ ರಸಾಯನಶಾಸ್ತ್ರದಲ್ಲಿ ‘ಮಲ್ಟಿವಾಲ್ಡ್ ಕಾರ್ಬನ್ ನ್ಯಾನೊಟ್ಯೂಟಬ್‌ಗಳು: ಲೋಹದ ನ್ಯಾನೊಕ್ರಿಸ್ಟಲ್‌ಗಳಿಂದ ಅಲಂಕರಿಸಲ್ಪಟ್ಟಿದೆ ಮತ್ತು ಲೋಹದ ಮ್ಯಾಟ್ರಿಕ್‌ಗಳಲ್ಲಿ ಸಂಯೋಜಿಸಲ್ಪಟ್ಟಿದೆ’ ಎಂಬ ಶೀರ್ಷಿಕೆಯ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.

ಶಂಕರ್‌ಪುರದ ಸೈಂಟ್ ಜಾನ್ಸ್ ಪ್ರೌಢಶಾಲೆ ಮತ್ತು ಉಡುಪಿಯ ಶಿರ್ವಾದ ಸೈಂಟ್ ಮೇರಿಸ್ ಕಾಲೇಜಿನಲ್ಲಿ ಅವರ ಪ್ರಾಥಮಿಕ ಶೈಕ್ಷಣಿಕ ಜೀವನದ ಅಡಿಪಾಯ ಹಾಕಲಾಗಿದೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಿಂದ ಬಿ.ಎಸ್ಸಿ ಪದವಿ ಪಡೆದು, ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜಿನ ವಿಶ್ಲೇಷಣಾತ್ಮಕ ರಸಾಯನ ಶಾಸ್ತ್ರದಲ್ಲಿ ಎಂ.ಎಸ್ಸಿ ಮುಗಿಸಿ, ದೆಹಲಿಯ ವಿದ್ಯಾಜ್ಯೋತಿ ಸಂಸ್ಥೆಯಿಂದ ಥಿಯೊಲೊಜಿ, ಪುಣೆಯ ಜ್ಞಾನದೀಪ ವಿದ್ಯಾಪೀಠ ಸಂಸ್ಥೆಯಿಂದ ಫಿಲೋಸಾಫಿ ಹಾಗೂ ಬೆಂಗಳೂರಿನ ಮೌಂಟ್ ಸೈಂಟ್ ಜೋಸೆಫ್ ಯೇಸುಸಭೆಯಿಂದ ನೊವಿಶಿಯೇಟ್ ಪಡೆದಿದ್ದಾರೆ.

ಫಾ.ಮಾರ್ಟಿಸ್ ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ. ಸೈಂಟ್ ಅಲೋಶಿಯಸ್ ಸಂಧ್ಯಾ ಕಾಲೇಜಿನ ನಿರ್ದೇಶಕರಾಗಿ, ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ರಿಸರ್ಚ್ ಸೂಪರ್‌ವೈಸರ್ ಆಗಿ, ನ್ಯಾಕ್ ಮೌಲ್ಯಮಾಪಕರಾಗಿ ತಮ್ಮ ಸೇವೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X