ಕೋಡಿ ಬ್ಯಾರೀಸ್ನಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆ
ಕುಂದಾಪುರ, ಜ. 26: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 72ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಉಮೇಶ ನಾಯಕ್ ಮಾತನಾಡಿ, ವಿದ್ಯಾರ್ಥಿಗಳು ಭಾರತದ ಸಂವಿಧಾನವನ್ನು ಗೌರವಿಸುವುದರೊಂದಿಗೆ ದೇಶಕ್ಕಾಗಿ ದುಡಿಯಬೇಕು ಎಂದು ಹೇಳಿದರು. ಕುಂದಾಪುರ ಪುರಸಭಾ ಸದಸ್ಯೆ ಲಕ್ಷ್ಮೀಬಾಯಿ ಶುಭಹಾರೈಸಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್ ಅಧ್ಯಕ್ಷತೆ ವಹಿಸಿದ್ದರು.
ಆಡಳಿತ ನಿರ್ದೇಶಕ ದೋಮ ಚಂದ್ರಶೇಖರ್, ಶಾಲಾಭಿವೃದ್ಧಿ ಸದಸ್ಯರಾದ ಶಂಕರ್ ಪೂಜಾರಿ, ಹಾಜಿ ಅಬುಶೇಕ್, ತಿಮ್ಮಪ್ಪ ಖಾರ್ವಿ, ರಫೀಕ್ ಹಾಗೂ ಬ್ಯಾರೀಸ್ ಕನ್ನಡ ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಯಂತಿ, ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಶಮೀರ್, ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ಸಂದೀಪ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕ ಜಯಶೀಲ ಶೆಟ್ಟಿ ವಂದಿಸಿದರು.