Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಧ್ವಜ ಅರಳಿಸಿ, ಗಿಡ ನೆಡುವ ಮೂಲಕ...

ರಾಷ್ಟ್ರಧ್ವಜ ಅರಳಿಸಿ, ಗಿಡ ನೆಡುವ ಮೂಲಕ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಕಾರ್ಯ ಆರಂಭ

ಗಣರಾಜ್ಯೋತ್ಸವ ದಿನದಂದೇ ಚಾಲನೆ

ವಾರ್ತಾಭಾರತಿವಾರ್ತಾಭಾರತಿ26 Jan 2021 3:46 PM IST
share
ರಾಷ್ಟ್ರಧ್ವಜ ಅರಳಿಸಿ, ಗಿಡ ನೆಡುವ ಮೂಲಕ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಕಾರ್ಯ ಆರಂಭ

ಲಕ್ನೋ,ಜ.26:  ಭಾರತದ 72ನೇ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜವನ್ನು ಅರಳಿಸಿ ಹಾಗೂ ಗಿಡ ನೆಡುವ ಕಾರ್ಯಕ್ರಮದ ಮೂಲಕ  ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಇಂದು ಅಧಿಕೃತವಾಗಿ ಚಾಲನೆ ದೊರೆಯಿತು.  ಸುಪ್ರೀಂ ಕೋರ್ಟ್ 2019ರಲ್ಲಿ ನೀಡಿದ ತೀರ್ಪಿನನ್ವಯ  ಮಸೀದಿ ನಿರ್ಮಾಣ  ಆರಂಭಗೊಂಡಿದೆ.

ಅಯ್ಯೋಧ್ಯೆಯ ಧನ್ನಿಪುರ್ ಗ್ರಾಮದ ಐದು ಎಕರೆ ಜಮೀನಿನಲ್ಲಿ ಮಸೀದಿ ನಿರ್ಮಿಸುವ ಕಾರ್ಯವನ್ನು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಕೈಗೆತ್ತಿಕೊಳ್ಳಲಿದೆ.  ರಾಮ ಮಂದಿರ ನಿರ್ಮಾಣಗೊಳ್ಳುತ್ತಿರುವ ರಾಮ ಜನ್ಮಭೂಮಿಯಿಂದ ಈ ಗ್ರಾಮ 25 ಕಿಮೀ ದೂರದಲ್ಲಿದೆ. ರಾಷ್ಟ್ರಧ್ವಜವನ್ನು ಸರಿಯಾಗಿ 8.45ಕ್ಕೆ ಟ್ರಸ್ಟ್ ಮುಖ್ಯಸ್ಥರಾದ ಝಫರ್ ಅಹ್ಮದ್ ಫಾರೂಖಿ ಅರಳಿಸಿದರು. ನಂತರ ಟ್ರಸ್ಟ್ ನ ಎಲ್ಲಾ 12 ಮಂದಿ ಸದಸ್ಯರು  ಸ್ಥಳದಲ್ಲಿ ಸಸಿಯನ್ನು ನೆಟ್ಟರು.

"ಮಸೀದಿ ನಿರ್ಮಾಣವಾಗಲಿರುವ ಜಮೀನಿನ ಮಣ್ಣು ಪರೀಕ್ಷೆ ಕೆಲಸ ಆರಂಭಗೊಂಡಿದೆ. ಆದುದರಿಂದ ಮಸೀದಿ ನಿರ್ಮಾಣಕ್ಕೆ ಸಂಬಂಧಿಸಿದ ತಾಂತ್ರಿಕ ಕೆಲಸ ಆರಂಭವಾಗಿದೆ ಎಂದು ಹೇಳಬಹುದು. ಮಣ್ಣು ಪರೀಕ್ಷೆಯ ವರದಿ ಬಂದ ನಂತರ ಹಾಗೂ ಮಸೀದಿಯ ನಕ್ಷೆಗೆ ಅನುಮೋದನೆ ದೊರೆತ  ನಂತರ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಮಸೀದಿಗಾಗಿ ದೇಣಿಗೆಗಳಿಗೆ ಅಪೀಲು ಮಾಡಿದ್ದೇವೆ. ಈಗಾಗಲೇ ಜನರು ದೇಣಿಗೆ ನೀಡುತ್ತಿದ್ದಾರೆ," ಎಂದು ಫಾರೂಖಿ ಹೇಳಿದ್ದಾರೆ.

ಮಸೀದಿಯ ಪ್ರಸ್ತಾವಿತ ವಿನ್ಯಾಸವನ್ನು ಕಳೆದ ವಾರ ಫೌಂಡೇಶನ್ ಅನಾವರಣಗೊಳಿಸಿತ್ತು. ಸುಂದರ ಉದ್ಯಾನವನ ಹಾಗೂ ಬೃಹತ್ ಗಾಜಿನ ಗೋಪುರವನ್ನು ಈ ಮಸೀದಿ ಒಳಗೊಳ್ಳಲಿದೆ. ಅದರ ಹಿಂಬದಿಯಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಲಿದೆ. ಮಸೀದಿಯ ಹೆಸರನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ, ಮೊದಲ ಹಂತದಲ್ಲಿ ಮಸೀದಿ ಹಾಗೂ  ಆಸ್ಪತ್ರೆ ನಿರ್ಮಾಣಗೊಳ್ಳಲಿದ್ದು ಎರಡನೇ ಹಂತದಲ್ಲಿ ಆಸ್ಪತ್ರೆಯ ವಿಸ್ತರಣೆ ನಡೆಯಲಿದೆ.

ಆಸ್ಪತ್ರೆ ಸಂಕೀರ್ಣದಲ್ಲಿ  ಸಮುದಾಯ ಭೋಜನಶಾಲೆಯಿರಲಿದ್ದು ಇಲ್ಲಿ ಪ್ರತಿನಿತ್ಯ ಕನಿಷ್ಠ 1,000 ಮಂದಿಗೆ ಪೌಷ್ಠಿಕಾಂಶಯುಕ್ತ ಊಟ ದೊರೆಯಲಿದೆ. ಈ ಸ್ಥಳದ ಸುತ್ತಮುತ್ತಲಿನ ಜನರ ವೈದ್ಯಕೀಯ ಅಗತ್ಯತೆಗಳ ಕುರಿತು ಟ್ರಸ್ಟ್ ಅಧ್ಯಯನ ನಡೆಸಿದ್ದು, ಅಪೌಷ್ಠಿಕಾಂಶತೆ ಪ್ರಮುಖ ಸಮಸ್ಯೆಯಾಗಿದೆ ಎಂಬುದನ್ನು ಮನಗಂಡು ಅದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಟ್ರಸ್ಟ್ ಕಾರ್ಯದರ್ಶಿ ಅಥರ್ ಹುಸೈನ್ ಹೇಳಿದ್ದಾರೆ.

#UttarPradesh #Ayodhya

Groundbreaking ceremony of Ayodhya Mosque-hospital performed today by planting trees & hoisting tricolour, 25 km away from Ram Temple.@IndoIslamicCF trustees Zufar Farooqui, @athardesi and others were present on this occasion. @The_Dialogue_ pic.twitter.com/1XhiTBTf9T

— Kanchan Srivastava (@Ms_Aflatoon) January 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X