Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಅಶೋಕ್ ಆಪ್ತ ಸಹಾಯಕನಿಂದ ಲಂಚಕ್ಕೆ...

ಸಚಿವ ಅಶೋಕ್ ಆಪ್ತ ಸಹಾಯಕನಿಂದ ಲಂಚಕ್ಕೆ ಬೇಡಿಕೆ: ಆರೋಪ

ಪೊಲೀಸರಿಗೆ ದೂರು ನೀಡಿದ ಶೃಂಗೇರಿ ಸಬ್ ರಿಜಿಸ್ಟ್ರಾರ್

ವಾರ್ತಾಭಾರತಿವಾರ್ತಾಭಾರತಿ26 Jan 2021 10:19 PM IST
share
ಸಚಿವ ಅಶೋಕ್ ಆಪ್ತ ಸಹಾಯಕನಿಂದ ಲಂಚಕ್ಕೆ ಬೇಡಿಕೆ: ಆರೋಪ

ಚಿಕ್ಕಮಗಳೂರು, ಜ.26: ಕಂದಾಯ ಸಚಿವ ಆರ್.ಅಶೋಕ್ ಅವರ ಆಪ್ತ ಸಹಾಯಕನೋರ್ವ ಜಿಲ್ಲೆಯ ಶೃಂಗೇರಿ ತಾಲೂಕಿನ ಸಬ್ ರಿಜಿಸ್ಟ್ರಾರ್ ಬಳಿ ಲಂಚ ಕೇಳಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿ ಪೊಲೀಸರಿಗೆ ದೂರು ನೀಡಿರುವ ಘಟನೆ ವರದಿಯಾಗಿದೆ.

ಕಳೆದ ಜ.24ರಂದು ಕಂದಾಯ ಸಚಿವ ಆರ್.ಅಶೋಕ್ ಚಿಕ್ಕಮಗಳೂರು ಜಿಲ್ಲೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದರು. ಈ ವೇಳೆ ಅವರು ಶೃಂಗೇರಿಗೂ ಭೇಟಿ ನೀಡಿದ್ದರು. ಸಚಿವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಆಪ್ತ ಸಹಾಯಕ ಗಂಗಾಧರ್ ಎಂಬವರು ಶೃಂಗೇರಿ ತಾಲೂಕು ಕಚೇರಿಯ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರಿಗೆ ಕರೆ ಮಾಡಿ, ಸಚಿವರು ಭೇಟಿಯಾಗಲು ಹೇಳಿದ್ದು, ಸಂಜೆ ತಮ್ಮನ್ನು ಭೇಟಿಯಾಗುವಂತೆ ತಿಳಿಸಿದ್ದರೆಂದು ಹೇಳಲಾಗುತ್ತಿದೆ.

ಅದರಂತೆ ಅಂದು ಸಂಜೆ 7:30ಕ್ಕೆ ಶೃಂಗೇರಿ ಪಟ್ಟಣದ ಆದಿಚುಂಚನಗಿರಿ ಸಭಾ ಭವನಕ್ಕೆ ಸಚಿವ ಆರ್.ಅಶೋಕ್ ಆಗಮಿಸಿದ್ದು, ಈ ವೇಳೆ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಸಚಿವರ ಆಪ್ತ ಕಾರ್ಯದರ್ಶಿ ಗಂಗಾಧರ್ ಅವರನ್ನು ಸಭಾ ಭವನದ ಕೊಠಡಿಯೊಂದರಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಸಚಿವರ ಆಪ್ತ ಸಹಾಯಕ ಲಂಚ ಕೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಚೆಲುವರಾಜ್ ನಾನು ಕೊಡೋದೂ ಇಲ್ಲ, ತೆಗೆದುಕೊಳ್ಳುವುದೂ ಇಲ್ಲ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಅದೇ ದಿನ ರಾತ್ರಿ ಆಪ್ತ ಕಾರ್ಯದರ್ಶಿ ಗಂಗಾಧರ್ ಮತ್ತೆ ಚೆಲುವರಾಜ್ ಗೆ ವಾಟ್ಸ್ಆ್ಯಪ್ ಕರೆ ಮಾಡಿದ್ದು, ಈ ವೇಳೆ 'ನೀವು ಲಂಚ ಕೇಳಿದ್ದೀರಿ, ನಾನು ಕೊಡಲಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇನೆ. ಡ್ರಾಫ್ಟ್ ರೆಡಿ ಮಾಡುತ್ತಿದ್ದೇನೆ' ಎಂದು ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಹೇಳಿದ್ದಾರೆಂದು ತಿಳಿದು ಬಂದಿದೆ.

ಸಚಿವರ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳನ್ನು ಸುಲಿಗೆ ಮಾಡುವ ಕೆಲಸ ನಡೆಯುತ್ತಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಸಬ್ ರಿಜಿಸ್ಟ್ರಾರ್ ಚೆಲುವರಾಜ್ ರವಿವಾರ ಸುದ್ದಿಗಾರರಿಗೆ ತಿಳಿಸಿದ್ದು, ಅದರಂತೆ ಅವರು ಶೃಂಗೇರಿ ಪೊಲೀಸರಿಗೆ ಕಂದಾಯ ಸಚಿವರ ಆಪ್ತ ಸಹಾಯಕ ಗಂಗಾಧರ್ ವಿರುದ್ಧ ಸೋಮವಾರ ಸಂಜೆ ದೂರು ನೀಡಿದ್ದಾರೆಂದು ತಿಳಿದು ಬಂದಿದೆ.

ಈ ಬಗ್ಗೆ ಚೆಲುವರಾಜ್ ಪ್ರತಿಕ್ರಿಯಿಸಿದ್ದು, ''ಜ.20ರಂದು ಕಂದಾಯ ಸಚಿವ ಜಿಲ್ಲೆಗೆ ಆಗಮಿಸುವ ವೇಳಾ ಪಟ್ಟಿ ವಾಟ್ಸ್ಆ್ಯಪ್ ಮೂಲಕ ನನ್ನ ಮೊಬೈಲ್ ಗೆ  ಬಂದಿತ್ತು. ಜ.24ರಂದು ಸಚಿವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಿಯೊಬ್ಬರು, ಶೃಂಗೇರಿಗೆ ಸಚಿವರು ಬರುತ್ತಾರೆ. ನಿಮ್ಮ ಬಳಿ ಮಾತನಾಡುವುದಿದೆ ಸಿಗಬೇಕು ಎಂದಿದ್ದರು. ಅದರಂತೆ ಜ.24ರಂದು ರವಿವಾರ ಸಂಜೆ ಶೃಂಗೇರಿ ಪಟ್ಟಣದ ಆದಿಚುಂಚನಗಿರಿ ಸಭಾಭವನಕ್ಕೆ ಸಚಿವರು ಆಗಮಿಸಿದ್ದರು. ನಾನು ಸಚಿವರ ಆಪ್ತ ಸಹಾಯಕನನ್ನು ಕಾಣಲು ಅಲ್ಲಿಗೆ ಹೋಗಿದ್ದೆ. ಅವರು ಯಾರೆಂದು ನನಗೆ ಗೊತ್ತಿರಲಿಲ್ಲ. ನಾನು ಅವರ ಬಳಿ ಹೋದಾಗ, ಲಂಚ ಕೇಳಿದ್ದಾರೆ. ನಾನು ಲಂಚ ಕೊಡೋದಿಲ್ಲ ಎಂದು ಹೇಳಿ ಹಿಂದಿರುಗಿದ್ದೆ. ರಾತ್ರಿ ಮತ್ತೆ ಕರೆ ಮಾಡಿದ್ದ ಗಂಗಾಧರ್, ಫೈಲ್ ಕೊಡಲಿಲ್ಲ ಎಂದಿದ್ದಾರೆ. ನನ್ನ ಬಳಿ ಯಾವುದೇ ಫೈಲ್ ಇಲ್ಲ. ನೀವು ಲಂಚ ಕೇಳಿದ್ದೀರಿ, ಈ ಬಗ್ಗೆ ಪೊಲೀಸರಿಗೆ ದೂರು ಕೊಡುತ್ತೇನೆಂದು ಹೇಳಿದ್ದೆ. ಅದರಂತೆ ಸೋಮವಾರ ಪೊಲೀಸರಿಗೆ ದೂರು ನೀಡಿದ್ದೇನೆ. ಸಚಿವರ ಹೆಸರಿನಲ್ಲಿ ಲಂಚ ಕೇಳುವ ಕೆಲಸ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಟಿ.ರವಿ, ಶೃಂಗೇರಿ ತಾಲೂಕಿನ ಸಬ್ ರಿಜಿಸ್ಟ್ರಾರ್ ಬಳಿ ಕಂದಾಯ ಸಚಿವ ಆರ್.ಅಶೋಕ್ ಅವರ ಖಾಸಗಿ ಆಪ್ತ ಕಾರ್ಯದರ್ಶಿ ಗಂಗಾಧರ್ ಲಂಚ ಕೇಳಿದ್ದಾರೆಂಬ ಆರೋಪ ಕೇಳಿ ಬಂದಿದೆ. ಆರ್.ಅಶೋಕ್ ಅವರು ಸರಕಾರಿ ಅಧಿಕಾರಿಗಳನ್ನು ಹಣಕ್ಕಾಗಿ ಸುಲಿಗೆ ಮಾಡುವ ವ್ಯಕ್ತಿಯಲ್ಲ. ಅಂತಹ ದರ್ದು ಅವರಿಗೆ ಇಲ್ಲವೇ ಇಲ್ಲ. ಅಧಿಕಾರಿ ಬಳಿ ಲಂಚ ಕೇಳಿರುವ ಆರೋಪ ಸಚಿವರ ಗಮನಕ್ಕೂ ಬಂದಿದೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಆರ್.ಅಶೋಕ್ ತಮ್ಮ ಆಪ್ತ ಕಾರ್ಯದರ್ಶಿಗೆ ಈಗಾಗಲೇ ಗೇಟ್‍ಪಾಸ್ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X