Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಕೆರೆ ಮರೀನಾ ಯೋಜನೆ ಕೈಬಿಡಲು ಸ್ಥಳೀಯರ...

ಪಡುಕೆರೆ ಮರೀನಾ ಯೋಜನೆ ಕೈಬಿಡಲು ಸ್ಥಳೀಯರ ಪಟ್ಟು: ಉಡುಪಿ ಶಾಸಕ ಕೆ.ರಘುಪತಿ ಭಟ್‌ಗೆ ನಿರ್ಣಯದ ಪ್ರತಿ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ27 Jan 2021 7:16 PM IST
share
ಪಡುಕೆರೆ ಮರೀನಾ ಯೋಜನೆ ಕೈಬಿಡಲು ಸ್ಥಳೀಯರ ಪಟ್ಟು: ಉಡುಪಿ ಶಾಸಕ ಕೆ.ರಘುಪತಿ ಭಟ್‌ಗೆ ನಿರ್ಣಯದ ಪ್ರತಿ ಸಲ್ಲಿಕೆ

ಮಲ್ಪೆ, ಜ.27: ಪಡುಕೆರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮರೀನಾ ಯೋಜನೆ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಮಲ್ಪೆ ಪಡುಕೆರೆ ಗ್ರಾಮಸ್ಥರು ಮಂಗಳವಾರ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರನ್ನು ಒತ್ತಾಯಿಸಿದ್ದಾರೆ.

ಪಡುಕೆರೆಯಲ್ಲಿ ಶಾಸಕರೊಂದಿಗೆ ನಡೆದ ಮುಖಾಮುಖಿ ಚರ್ಚೆಯಲ್ಲಿ ಮರೀನಾ ಯೋಜನೆ ವಿರೋಧಿಸಿ ಸ್ಥಳೀಯರು ಕೈಗೊಂಡ ನಿರ್ಣಯ ಪ್ರತಿ ಯನ್ನು ಶಾಸಕರಿಗೆ ನೀಡಲಾಯಿತು. ಬಳಿಕ ನಡೆದ ಚರ್ಚೆಯಲ್ಲಿ ಗ್ರಾಮಸ್ಥರನ್ನು ಮನವೊಲಿಸುವ ಶಾಸಕರ ಪ್ರಯತ್ನ ವಿಫಲವಾಯಿತು. ಯಾವುದೇ ಕಾರಣಕ್ಕೂ ಮರೀನಾ ಇಲ್ಲಿಗೆ ತರಬಾರದು ಎಂದು ಸ್ಥಳೀಯರು ಶಾಸಕರ ಮುಂದೆ ಪಟ್ಟು ಹಿಡಿದರು.

ಹಿರಿಯ ಮೀನುಗಾರ ರಾಮ ಕಾಂಚನ್ ಮಾತನಾಡಿ, ಮರೀನಾದಿಂದ ಅಳಿವೆ ಭಾಗದಲ್ಲೂ ಸಮಸ್ಯೆ ಉಂಟಾಗಿ, ಮೀನುಗಾರಿಕೆ ಬಂದರಿಗೂ ಹೊಡೆತ ಬೀಳುವ ಸಾಧ್ಯತೆ ಇದೆ. ಇಲ್ಲಿಗೆ ಮರೀನಾ ತಂದು ಮೀನುಗಾರ ಬುಡಕ್ಕೆ ಕೊಡಲಿ ಏಟು ನೀಡಿ, ಬದುಕನ್ನು ಕಸಿುುವುದು ಬೇಡ ಎಂದು ಹೇಳಿದರು.

ಶಾಸಕ ರಘುಪತಿ ಭಟ್ ಮಾತನಾಡಿ, ಮರೀನಾ ಯೋಜನೆ ಮಂಜೂ ರಾಗಿಲ್ಲ. ಇಲ್ಲಿ ಮರೀನಾ ನಿರ್ಮಾಣವಾದರೂ ಯಾವುದೇ ಐಷರಾಮಿ ಹೋಟೆಲ್, ಕ್ಲಬ್, ಪಬ್, ಬಾರ್‌ಗಳು ಬರುವುದಿಲ್ಲ. ಆದಕ್ಕೆ ಬೇಕಾಗದ ಸಿಆರ್‌ಝಡ್ ಅನುಮತಿಯೂ ಸಿಗುವುದಿಲ್ಲ. ಆ ಬಗ್ಗೆ ಯೋಚಿಸುವುದು ಬೇಡ. ಮೀನುಗಾರಿಕೆಗೆ ಸಮಸ್ಯೆಯಾಗದ ರೀತಿಯಲ್ಲಿ ವರದಿ ಇದ್ದರೇ ಮರೀನಾ ನಿರ್ಮಾಣದಿಂದ ಜಿಲ್ಲೆ ಮತ್ತು ರಾಜ್ಯದ ಆರ್ಥಿಕೆಗೆ ಅನುಕೂಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ತಾಪಂ ಸದಸ್ಯ ರಾಜೇಂದ್ರ ಪಂದುಬೆಟ್ಟು, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ, ಹಿರಿಯರಾದ ಶಿವರಾಮ ಪುತ್ರನ್ ಮೊದಲಾದವರು ಹಾಜರಿದ್ದರು. ಪ್ರಕಾಶ್ ಮಲ್ಪೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಮ್ಮ ಹಿರಿಯರೇ ನಮಗೆ ತಜ್ಞರು

ಯಾವುದೇ ತಜ್ಞರು ಬಂದು ಇಲ್ಲಿನ ಪರಿಶೀಲನೆ ನಡೆಸಿ ವರದಿ ನೀಡುವುದು ಬೇಡ. ಹಲವಾರು ದಶಕದಿಂದ ಸಮುದ್ರದ ಮೀನು ಗಾರಿಕೆಯಲ್ಲಿ ಸಾಕಷ್ಟು ಅನುಭವವನ್ನು ಪಡೆದ ನಮಗೆ ನಮ್ಮ ಹಿರಿಯರೇ ತಜ್ಞರು. ತತ್‌ಕ್ಷಣ ಈ ಯೋಜನೆಯನ್ನು ನಿಲ್ಲಿಸಬೇಕು ಎಂದು ಸ್ಥಳೀಯರಾದ  ಭುವನ್ ಕೋಟ್ಯಾನ್ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ರಘುಪತಿ ಭಟ್, ಈ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಪ್ರವಾಸೋಧ್ಯಮ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಾವು ಸಮಿತಿ ಸದಸ್ಯರಾಗಿದ್ದೇವೆ. ಈ ಬಗ್ಗೆ ಸಭೆ ನಡೆಸಿ ಸ್ಥಳೀಯರು ಕೈಗೊಂಡ ನಿರ್ಣಯದ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X