Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಐಎ ಕರಡನ್ನು 22 ಭಾಷೆಗಳಿಗೆ ಅನುವಾದಿಸಲು...

ಇಐಎ ಕರಡನ್ನು 22 ಭಾಷೆಗಳಿಗೆ ಅನುವಾದಿಸಲು ಹಿಂದೇಟು: ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ದಿಲ್ಲಿ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ27 Jan 2021 8:22 PM IST
share
ಇಐಎ ಕರಡನ್ನು 22 ಭಾಷೆಗಳಿಗೆ ಅನುವಾದಿಸಲು ಹಿಂದೇಟು: ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ, ಜ.27: ಕೇಂದ್ರದ ವಿರುದ್ಧ ಬುಧವಾರ ಅಸಮಾಧಾನ ವ್ಯಕ್ತಪಡಿಸಿದ ದಿಲ್ಲಿ ಉಚ್ಚ ನ್ಯಾಯಾಲಯವು,ಕರಡು ಪರಿಸರ ಪರಿಣಾಮ ಮೌಲ್ಯಮಾಪನ (ಇಐಎ) 2020 ಅನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಲು ಮತ್ತು ತಮ್ಮ ಪ್ರತಿಕ್ರಿಯೆಗಳನ್ನು ತಿಳಿಸಲು ಸಾಧ್ಯವಾಗುವಂತೆ ಅದನ್ನು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿಯ ಎಲ್ಲ 22 ಭಾಷೆಗಳಿಗೆ ಅನುವಾದಿಸುವಂತೆ ತನ್ನ ಆದೇಶವನ್ನು ಸರಕಾರವೇಕೆ ಬಲವಾಗಿ ವಿರೋಧಿಸುತ್ತಿದೆ ಎನ್ನುವುದು ತನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿತು.

ಕರಡು ಇಐಎಗೆ ಸ್ಥಳೀಯ ಭಾಷೆಗಳಲ್ಲಿ ಎತ್ತಲಾಗುವ ಆಕ್ಷೇಪಗಳನ್ನು ಸರಕಾರವು ತಿಳಿದುಕೊಳ್ಳುವ ಅಗತ್ಯವಿದೆ. ಹೀಗಾಗಿ ಇಐಎ ಅನ್ನು ಎಲ್ಲ 22 ಭಾಷೆಗಳಿಗೆ ಅನುವಾದಿಸುವುದರಿಂದ ಏನು ಹಾನಿಯಿದೆ ಎಂದು ಮುಖ್ಯ ನ್ಯಾಯಾಧೀಶ ಡಿ.ಎನ್.ಪಟೇಲ್ ನೇತೃತ್ವದ ಪೀಠವು ಪ್ರಶ್ನಿಸಿತು.

ಸರಕಾರವು ಈಗಾಗಲೇ ಕರಡು ಇಐಎಗೆ 20 ಲಕ್ಷಕ್ಕೂ ಅಧಿಕ ಉತ್ತರಗಳನ್ನು ಸ್ವೀಕರಿಸಿದೆ, ಹೀಗಾಗಿ ಅದನ್ನು ಇನ್ನಷ್ಟು ಹೆಚ್ಚು ಭಾಷೆಗಳಿಗೆ ಅನುವಾದಿಸುವ ಅಗತ್ಯವಿಲ್ಲ ಎಂದು ತಿಳಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು,ಅಧಿಸೂಚನೆಯು ಎಲ್ಲ ಭಾಷೆಗಳಿಗೆ ಅನುವಾದಗೊಳ್ಳಬೇಕು ಎಂದು ಸಂವಿಧಾನದಲ್ಲಿಯೂ ಹೇಳಲಾಗಿಲ್ಲ ಎಂದು ವಾದಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಅಂತಿಮ ಅಧಿಸೂಚನೆ ಎಲ್ಲ ಭಾಷೆಗಳಿಗೆ ಅನುವಾದಗೊಳ್ಳದಿರಬಹುದು,ಆದರೆ ಅದು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಕ್ಕಾಗಿ ಇರುವ ಕರಡು ಪ್ರತಿಯನ್ನು ಉಲ್ಲೇಖಿಸಿಲ್ಲ ಎಂದು ಹೇಳಿತು.

ಕರಡು ನೀತಿಯನ್ನು ಎಲ್ಲ ಭಾಷೆಗಳಿಗೆ ಅನುವಾದಿಸುವುದು ಆಡಳಿತಾತ್ಮಕ ಸಮಸ್ಯೆಗಳನ್ನುಂಟು ಮಾಡುತ್ತದೆ ಎಂಬ ಶರ್ಮಾರ ಸಮಜಾಯಿಷಿಯನ್ನು ತಿರಸ್ಕರಿಸಿದ ನ್ಯಾಯಾಲಯವು,ಈ ಆಧುನಿಕ ಯುಗದಲ್ಲಿ ಅದು ಅಸಾಧ್ಯ ಕೆಲಸವೇನಲ್ಲ ಎಂದು ಹೇಳಿತು. ಅನುವಾದಕ್ಕೆ ಏನು ತೊಂದರೆಗಳಿವೆ ಎನ್ನುವುದನ್ನು ಮುಂದಿನ ವಿಚಾರಣಾ ದಿನಾಂಕವಾದ ಫೆ.25ರೊಳಗೆ ತಿಳಿಸುವಂತೆ ನ್ಯಾಯಾಲಯವು ಕೇಂದ್ರಕ್ಕೆ ನಿರ್ದೇಶ ನೀಡಿತು.

ಕರಡು ಇಐಎ ಯೋಜನೆಗಳ ಘಟನೋತ್ತರ ಮಂಜೂರಾತಿಗೆ ಅವಕಾಶವನ್ನು ಒದಗಿಸುತ್ತದೆ ಮತ್ತು ಕೆಲವು ಪ್ರಕರಣಗಳಲ್ಲಿ ಸಾರ್ವಜನಿಕ ಸಮಾಲೋಚನೆಯ ಅಗತ್ಯವನ್ನು ನಿವಾರಿಸುತ್ತದೆ ಎಂದು ಆಕ್ಷೇಪಿಸಿ ಪರಿಸರ ಹೋರಾಟಗಾರ ವಿಕ್ರಾಂತ್ ತೋಂಗದ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ದಿಲ್ಲಿ ಉಚ್ಚ ನ್ಯಾಯಾಲಯವು ಅದನ್ನು ಎಲ್ಲ 22 ಭಾಷೆಗಳಿಗೆ ಅನುವಾದಿಸುವಂತೆ ಕಳೆದ ವರ್ಷದ ಜೂನ್ 30ರಂದು ಆದೇಶಿಸಿತ್ತು. ಆದೇಶದ ಪುನರ್‌ಪರಿಶೀಲನೆಯನ್ನು ಕೋರಿ ಕೇಂದ್ರವು ಕಳೆದ ಸೆಪ್ಟಂಬರ್‌ನಲ್ಲಿ ಅರ್ಜಿಯನ್ನು ಸಲ್ಲಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X