Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದುವರೆಗೆ ಕೋವಿಡ್‌ ಲಸಿಕೆ ಪಡೆದ ಬಳಿಕ...

ಇದುವರೆಗೆ ಕೋವಿಡ್‌ ಲಸಿಕೆ ಪಡೆದ ಬಳಿಕ ಮೃತಪಟ್ಟಿರುವ 9 ಆರೋಗ್ಯ ಕಾರ್ಯಕರ್ತರು

ಬಹಿರಂಗಗೊಳ್ಳಬೇಕಿದೆ ಸಾವಿನ ಕಾರಣ ಮತ್ತು ತನಿಖೆಯ ವಿವರ

ವಾರ್ತಾಭಾರತಿವಾರ್ತಾಭಾರತಿ28 Jan 2021 1:29 PM IST
share
ಇದುವರೆಗೆ ಕೋವಿಡ್‌ ಲಸಿಕೆ ಪಡೆದ ಬಳಿಕ ಮೃತಪಟ್ಟಿರುವ 9 ಆರೋಗ್ಯ ಕಾರ್ಯಕರ್ತರು

ಹೊಸದಿಲ್ಲಿ,ಜ.28: ಜನವರಿ 16ರಂದು  ಭಾರತದಲ್ಲಿ ಕೋವಿಡ್-19 ಲಸಿಕೆ ವಿತರಣಾ ಕಾರ್ಯಕ್ರಮ ಆರಂಭಗೊಂಡಿದ್ದರೆ ಕಳೆದ 12 ದಿನಗಳ ಅವಧಿಯಲ್ಲಿ ಇಲ್ಲಿಯ ತನಕ ಲಸಿಕೆ ಹಾಕಿಕೊಂಡವರ ಪೈಕಿ 9 ಮಂದಿ ಆರೋಗ್ಯ ಕಾರ್ಯಕರ್ತರು ಮೃತಪಟ್ಟಿರುವ ವಿಚಾರ ಆತಂಕಕ್ಕೆ ಕಾರಣವಾಗಿದೆ.  ಈ ಎಇಎಫ್‍ಐ ಅಥವಾ ಲಸಿಕೆ ನೀಡಿಕೆ ಬಳಿಕ ಉಂಟಾದ ಪ್ರತಿಕೂಲ ಪರಿಣಾಮಗಳ ಕುರಿತಾದ ತನಿಖೆಯ ಎಲ್ಲಾ ಮಾಹಿತಿಗಳನ್ನು ಸರಕಾರ ತಕ್ಷಣ ಬಹಿರಂಗಗೊಳಿಸುವುದು ಅಗತ್ಯವಾಗಿದೆ ಎಂದು scroll.in ವರದಿ ತಿಳಿಸಿದೆ.

ಈ ಒಂಬತ್ತು ಮಂದಿ 27ರಿಂದ 56 ವರ್ಷದವರಾಗಿದ್ದು ಆರು ಮಂದಿ ಪುರುಷರು ಹಾಗೂ ಮೂವರು ಮಹಿಳೆಯರು ಇಲ್ಲಿಯ ತನಕ ಮೃತಪಟ್ಟಿದ್ದಾರೆ. ಈ ಪ್ರಕರಣಗಳು ಉತ್ತರ ಪ್ರದೇಶ, ಕರ್ನಾಟಕ, ಆಂಧ್ರ ಪ್ರದೇಶ, ರಾಜಸ್ಥಾನ, ತೆಲಂಗಾಣ, ಗುರುಗ್ರಾಮ ಮತ್ತು ಒಡಿಶಾದಿಂದ ವರದಿಯಾಗಿವೆ. ಈ ಸಾವುಗಳು ಲಸಿಕೆ ಹಾಕಿಸಿಕೊಂಡ 24 ಗಂಟೆಗಳು ಹಾಗೂ ಐದು ದಿನಗಳ ನಡುವೆ ನಡೆದಿದೆ ಹಾಗೂ ಎಲ್ಲಾ ಸಾವುಗಳಿಗೆ ಕಾರ್ಡಿಯೋ ವ್ಯಾಸ್ಕುಲರ್ ಸಮಸ್ಯೆ ಅಥವಾ ʼಬ್ರೈನ್ ಸ್ಟ್ರೋಕ್ʼ  ಕಾರಣ ನೀಡಲಾಗಿದೆ. ಮೃತಪಟ್ಟ ಎಲ್ಲಾ ಒಂಬತ್ತು ಮಂದಿ ಕೋವಿಶೀಲ್ಡ್ ಲಸಿಕೆ ಪಡೆದಿದ್ದರು.

1.ಪ್ರತಿಯೊಂದು ಪ್ರಕರಣದಲ್ಲಿಯೂ ಸರಕಾರ ಇದು ಲಸಿಕೆಯಿಂದುಂಟಾದ ಸಾವಲ್ಲ ಎಂದು  ಹೇಳಿದೆಯಾದರೂ ಈ ತೀರ್ಮಾನಕ್ಕೆ ಯಾರು ಬಂದಿದ್ದಾರೆ ಎಂದು ತಿಳಿಸಿಲ್ಲ ಹಾಗೂ ತನಿಖೆಯ ವಿವರಗಳನ್ನು ಬಹಿರಂಗಗೊಳಿಸಿಲ್ಲ. ಇವುಗಳನ್ನು ತಕ್ಷಣ ಬಹಿರಂಗಪಡಿಸಬೇಕಿದೆ.

2.ಎಇಎಫ್‍ಐ ತನಿಖಾ ಸಮಿತಿ ಸದಸ್ಯರ ಹೆಸರುಗಳು  ಹಾಗೂ ಅರ್ಹತೆಗಳೂ ಬಹಿರಂಗಗೊಳ್ಳಬೇಕು.

3. ಈ ಸಾವುಗಳಿಗೂ ಲಸಿಕೆಗೂ ಸಂಬಂಧವಿಲ್ಲವೆಂದು ಹೇಗೆ ನಿರ್ಧರಿಸಲಾಗಿದೆ?

4. ಕೋ-ವಿನ್ ಆ್ಯಪ್‍ನಲ್ಲಿನ ಕೆಲವೊಂದು ಲೋಪದಿಂದ ತನಿಖೆಗೂ ಸಮಸ್ಯೆಯಾಗಿದೆಯೇ?

5. ಈ ಒಂಬತ್ತು ಪ್ರಕರಣಗಳ ತನಿಖೆ ಮುಗಿಯುವ ತನಕ ಲಸಿಕೆ ನೀಡಿಕೆಯನ್ನೇಕೆ ತಡೆ ಹಿಡಿಯಲಾಗಿಲ್ಲ? ಗಂಭೀರ ಪರಿಣಾಮಗಳುಂಟಾದಾಗ ಕೊವಿಡ್ ಲಸಿಕೆಗಳ ಕ್ಲಿನಿಕಲ್ ಟ್ರಯಲ್‍ಗಳನ್ನು ಕನಿಷ್ಠ ಮೂರು ಬಾರಿ ನಿಲ್ಲಿಸಲಾಗಿತ್ತು ಹಾಗೂ  ವ್ಯತಿರಿಕ್ತ ಪರಿಣಾಮಗಳಿಗೂ ಲಸಿಕೆಗೂ ಸಂಬಂಧವಿಲ್ಲವೆಂದು ತಿಳಿದ ನಂತರ ಮುಂದುವರಿಸಲಾಗಿತ್ತು.

6. ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ದೊರೆಯಲಿದೆಯೇ?

7. ಲಸಿಕೆ ಅಭಿಯಾನದಲ್ಲಿ ಇನ್ನು ಯಾರಾದರೂ ಮೃತಪಟ್ಟಿದ್ದಾರೆಯೇ? ಲಸಿಕೆ ಪಡೆದವರಲ್ಲಿ ಉಂಟಾದ ಗಂಭೀರ ಅಡ್ಡ ಪರಿಣಾಮಗಳ ಸಂಖ್ಯೆ, ಲಸಿಕೆ ಹಾಕಿಸಿಕೊಂಡ ದಿನಾಂಕ ಇತ್ಯಾದಿ  ಮಾಹಿತಿಯನ್ನೂ ಸರಕಾರ ಬಹಿರಂಗ ಪಡಿಸಬೇಕಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X