Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಮತ್ತು ನರೇಂದ್ರ ಮೋದಿ ನಡುವಿನ...

ತನ್ನ ಮತ್ತು ನರೇಂದ್ರ ಮೋದಿ ನಡುವಿನ ಮಾತುಕತೆಗಳನ್ನು ತಮ್ಮ ಆತ್ಮಕಥೆಯಲ್ಲಿ ಉಲ್ಲೇಖಿಸಿದ ಹಾಮಿದ್‌ ಅನ್ಸಾರಿ

ವಾರ್ತಾಭಾರತಿವಾರ್ತಾಭಾರತಿ28 Jan 2021 2:51 PM IST
share
ತನ್ನ ಮತ್ತು ನರೇಂದ್ರ ಮೋದಿ ನಡುವಿನ ಮಾತುಕತೆಗಳನ್ನು ತಮ್ಮ ಆತ್ಮಕಥೆಯಲ್ಲಿ ಉಲ್ಲೇಖಿಸಿದ ಹಾಮಿದ್‌ ಅನ್ಸಾರಿ

ಹೊಸದಿಲ್ಲಿ,ಜ.28: ಹಿಂದಿನ ಉಪರಾಷ್ಟ್ರಪತಿ ಹಾಮಿದ್ ಅನ್ಸಾರಿ ತಮ್ಮ ಅಧಿಕಾರಾವಧಿ ವೇಳೆ ರಾಜ್ಯಸಭಾ ಸಭಾಪತಿಯೂ ಆಗಿದ್ದ ಸಂದರ್ಭ ಒಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಗೆ  ಭೇಟಿ ನೀಡಿದ್ದ ಸಂದರ್ಭ ನಡೆದ ಮಾತುಕತೆಗಳ ವೇಳೆ ಮಸೂದೆಗಳನ್ನು  ಗದ್ದಲದ ಸಂದರ್ಭ ಏಕೆ ಅಂಗೀಕಾರಗೊಳಿಸಲಾಗುತ್ತಿಲ್ಲ ಎಂದು ಪ್ರಶ್ನಿಸಿದ್ದರು ಎಂದು ಅನ್ಸಾರಿ ಅವರ ಇತ್ತೀಚೆಗೆ ಬಿಡುಗಡೆಯಾದ ಆತ್ಮಕಥನ ʼಬೈ ಮೆನಿ ಎ ಹ್ಯಾಪಿ ಆ್ಯಕ್ಸಿಡೆಂಟ್'ನಲ್ಲಿ ಅವರು ಬರೆದಿದ್ದಾರೆ.

ಗದ್ದಲದ ಸಂದರ್ಭ ಮಸೂದೆಗಳನ್ನು ಅಂಗೀಕರಿಸಲು ಅನುಮತಿಸದೇ ಇರುವ ತಮ್ಮ ನಿರ್ಧಾರದ ಕುರಿತು ಬರೆದಿರುವ ಅನ್ಸಾರಿ,  ಯುಪಿಎ ಹಾಗೂ ಎನ್‍ಡಿಎಗೆ ಅಸಮಾಧಾನ ಇದ್ದರೂ ಬಿಜೆಪಿ ಮಿತ್ರ ಕೂಟ ಮಾತ್ರ ಲೋಕಸಭೆಯಲ್ಲಿ ಅದಕ್ಕಿರುವ  ಬಹುಮತದಿಂದಾಗಿ ರಾಜ್ಯಸಭೆಯಲ್ಲಿರುವ ಕೆಲವೊಂದು ಪ್ರಕ್ರಿಯೆಗಳನ್ನು ಬದಿಗಿರಿಸುವ ನೈತಿಕ ಹಕ್ಕು ಇದೆ ಎಂದು ಅಂದುಕೊಂಡಿತ್ತು. "ಒಮ್ಮೆ ಮಾಹಿತಿ ನೀಡದೆಯೇ ಪ್ರಧಾನಿ ಮೋದಿ ನನ್ನ ರಾಜ್ಯಸಭಾ ಕಚೇರಿಗೆ ಆಗಮಿಸಿದ ಸಂದರ್ಭ ಇದೇ ಅಭಿಪ್ರಾಯವನ್ನು ನನಗೆ ಅಧಿಕಾರಾತ್ಮಕವಾಗಿ ಹಾಗೂ ಸ್ವಲ್ಪ ಮಟ್ಟಿಗೆ ಅಸಹಜತೆಯಿಂದಲೇ  ತಿಳಿಸಲಾಗಿತ್ತು," ಎಂದು ಅನ್ಸಾರಿ ಬರೆದಿದ್ದಾರೆ.

 "ಅಚ್ಚರಿಯಿಂದ ಹೊರ ಬಂದ ನಂತರ ನಾನು ಅವರ ಜತೆ ಕುಶಲೋಪರಿ ವಿಚಾರಿಸಿದೆ. ಆಗ ಅವರು ʼನಿಮ್ಮಿಂದ  ಹೆಚ್ಚಿನ ಜವಾಬ್ದಾರಿಯ ನಿರೀಕ್ಷೆಗಳಿವೆ ಆದರೆ ನೀವು ನನಗೆ ಸಹಾಯ ಮಾಡುತ್ತಿಲ್ಲ' ಎಂದರು  ರಾಜ್ಯಸಭೆ ಮತ್ತು ಹೊರಗಡೆ ನನ್ನ ಕೆಲಸ ಎಲ್ಲರಿಗೂ ತಿಳಿದಿದೆ ಎಂದು ನಾನು ಹೇಳಿದೆ ಆಗ ಅವರು "ಗದ್ದಲಗಲ ಸಂದರ್ಭದಲ್ಲಿ ಮಸೂದೆಗಳನ್ನು ಏಕೆ ಅಂಗೀಕರಿಸಲಾಗುತ್ತಿಲ್ಲ?" ಎಂದು ಪ್ರಶ್ನಿಸಿದ್ದರು ಎಂದು ಅನ್ಸಾರಿ ಬರೆದಿದ್ದಾರೆ.

2017ರಲ್ಲಿ ನರೇಂದ್ರ ಮೋದಿಯೊಂದಿಗೆ ಭೇಟಿಯಾದ ಕುರಿತು ಉಲ್ಲೇಖಿಸಿದ ಅವರು, ನಾನು ಎನ್.ಎಮ್.ಸಿ ಚೇರ್‌ ಮ್ಯಾನ್‌ ಆಗಿದ್ದ ಸಂದರ್ಭ ನರೇಂದ್ರ ಮೋದಿಯೊಂದಿಗೆ "ಗುಜರಾತ್‌ ಹತ್ಯಾಂಕಾಡ ನಡೆಯಲು ಕಾರಣವೇನು? ನೀವು ಅದಕ್ಕೆ ಅನುವು ಮಾಡಿಕೊಡಲು ಕಾರಣವೇನು? ಎಂದು ಕೇಳಿದೆ. ಆಗ ಉತ್ತರಿಸಿದ ಮೋದಿ, "ಜನರು ಒಂದು ಘಟನೆಯನ್ನು ಹಲವು ಆಯಾಮಗಳಲ್ಲಿ ನೋಡುತ್ತಾರೆ. ನಾವು ಮಾಡಿರುವ ಒಳ್ಳೆಯ ಕೆಲಸಗಳನ್ನು ಅವರು ನೋಡುವುದಿಲ್ಲ. ಮುಸ್ಲಿಂ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಾವು ಕೈಗೊಂಡಿರುವ ಕಾರ್ಯಗಳ ಕುರಿತು ಮಾತನಾಡುವುದಿಲ್ಲ. ಎಂದು ಹೇಳಿಕೆ ನೀಡಿದ್ದರು ಎಂದು ಹಾಮಿದ್ ಅನ್ಸಾರಿ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X