Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಆರೋಪಿಯು ಅಪ್ರಾಪ್ತೆಯ ಕೈ ಹಿಡಿಯುವುದು...

ʼಆರೋಪಿಯು ಅಪ್ರಾಪ್ತೆಯ ಕೈ ಹಿಡಿಯುವುದು ಹಾಗೂ ತನ್ನ ಪ್ಯಾಂಟ್ ಝಿಪ್ ತೆರೆಯುವುದು ಪೋಕ್ಸೋ ಅಡಿ ಲೈಂಗಿಕ ದೌರ್ಜನ್ಯವಲ್ಲ'

ಬಾಂಬೆ ಹೈಕೋರ್ಟ್‍ನ ನಾಗ್ಪುರ್ ಪೀಠ

ವಾರ್ತಾಭಾರತಿವಾರ್ತಾಭಾರತಿ28 Jan 2021 4:21 PM IST
share
ʼಆರೋಪಿಯು ಅಪ್ರಾಪ್ತೆಯ ಕೈ ಹಿಡಿಯುವುದು ಹಾಗೂ ತನ್ನ ಪ್ಯಾಂಟ್ ಝಿಪ್ ತೆರೆಯುವುದು ಪೋಕ್ಸೋ ಅಡಿ ಲೈಂಗಿಕ ದೌರ್ಜನ್ಯವಲ್ಲ

ಮುಂಬೈ,ಜ.28: ಅಪ್ರಾಪ್ತ ವಯಸ್ಕರ ಕೈ ಹಿಡಿದುಕೊಂಡು ಅವರೆದುರು ಪ್ಯಾಂಟ್ ಝಿಪ್ ಬಿಚ್ಚಿದರೆ ಅದು ಪೊಕ್ಸೊ ಕಾಯ್ದೆಯಡಿ ಲೈಂಗಿಕ ಹಲ್ಲೆಯ ವ್ಯಾಖ್ಯೆಯಲ್ಲಿ ಬರುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಇಂತಹ ಕೃತ್ಯಗಳು ಭಾರತೀಯ ದಂಡ ಸಂಹಿತೆ (ಐಪಿಸಿ)ಯ ಕಲಂ 354-ಎ(1)(i) ಅಡಿ ಲೈಂಗಿಕ ಕಿರುಕುಳವಾಗುತ್ತವೆ ಎಂದು ಅದು ಸ್ಪಷ್ಟಪಡಿಸಿದೆ.

ಐದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳವನ್ನು ನೀಡಿದ ಆರೋಪದಲ್ಲಿ ತನ್ನ ದೋಷನಿರ್ಣಯ ಮತ್ತು ಶಿಕ್ಷೆಯನ್ನು ಪ್ರಶ್ನಿಸಿ 50ರ ಹರೆಯದ ವ್ಯಕ್ತಿಯೋರ್ವ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆಯನ್ನು ನಡೆಸಿದ ನ್ಯಾ.ಪುಷ್ಪಾ ಗನೇಡಿವಾಲಾ ಅವರ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಇದೊಂದು ಗಂಭೀರ ಲೈಂಗಿಕ ಹಲ್ಲೆ ಪ್ರಕರಣವಾಗಿದೆ ಎಂದು ತೀರ್ಪು ನೀಡಿದ್ದ ಸೆಷನ್ಸ್ ನ್ಯಾಯಾಲಯವು ಅರ್ಜಿದಾರನಿಗೆ ಐದು ವರ್ಷಗಳ ಶಿಕ್ಷೆ ಮತ್ತು 25,000 ರೂ.ದಂಡವನ್ನು ವಿಧಿಸಿತ್ತ್ತು. ದಂಡ ಪಾವತಿಸಲು ವಿಫಲಗೊಂಡರೆ ಆರು ತಿಂಗಳ ಸಾದಾಶಿಕ್ಷೆಯನ್ನು ಅನುಭವಿಸುವಂತೆಯೂ ಅದು ಆದೇಶಿಸಿತ್ತು.

ಮಗುವಿನ ತಾಯಿ ಈ ಬಗ್ಗೆ ದೂರು ಸಲ್ಲಿಸಿದ್ದು,ಆರೋಪಿಯು ತನ್ನ ಮಗಳ ಕೈಗಳನ್ನು ಹಿಡಿದುಕೊಂಡು ತನ್ನ ಪ್ಯಾಂಟ್ ಝಿಪ್ ಬಿಚ್ಚಿದ್ದನ್ನು ತಾನು ನೋಡಿದ್ದೆ ಎಂದು ತಿಳಿಸಿದ್ದರು. ವ್ಯಕ್ತಿಯು ಗುಪ್ತಾಂಗವನ್ನು ಪ್ರದರ್ಶಿಸಿದ್ದ ಮತ್ತು ತನ್ನನ್ನು ಹಾಸಿಗೆಗೆ ಕರೆದಿದ್ದ ಎಂದು ಮಗಳು ತನಗೆ ತಿಳಿಸಿದ್ದಾಗಿಯೂ ಆಕೆ ದೂರಿನಲ್ಲಿ ಹೇಳಿದ್ದರು.

ಜ.19ರಂದು ಇಂತಹುದೇ ತೀರ್ಪನ್ನು ನೀಡಿದ್ದ ನ್ಯಾ.ಗನೇಡಿವಾಲಾ ಅವರು ‘ಚರ್ಮಕ್ಕೆ ಚರ್ಮದ ಸಂಪರ್ಕವಿಲ್ಲದೆ ’ ಮೈಯನ್ನು ತಡಕಾಡಿದರೆ ಅದು ಲೈಂಗಿಕ ಹಲ್ಲೆಯಾಗುವುದಿಲ್ಲ ಎಂದು ತಿಳಿಸಿ,ಪೊಕ್ಸೊ ಕಾಯ್ದೆಯಡಿ ಲೈಂಗಿಕ ಹಲ್ಲೆಯ ದೋಷನಿರ್ಣಯಗೊಂಡಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದರು. ಆರೋಪಿಯು 12ರ ಹರೆಯದ ಬಾಲಕಿಯನ್ನು ಪೇರಳೆ ಹಣ್ಣನ್ನು ನೀಡುವ ನೆಪದಲ್ಲಿ ತನ್ನ ಮನೆಗೆ ಕರೆದೊಯ್ದು,ಆಕೆಯ ಎದೆಯನ್ನು ಸ್ಪರ್ಶಿಸಿ ಬೆತ್ತಲೆಗೊಳಿಸಲು ಪ್ರಯತ್ನಿಸಿದ್ದ ಎಂದು ದೋಷಾರೋಪಣ ಪಟ್ಟಿಯಲ್ಲಿ ಆರೋಪಿಸಲಾಗಿತ್ತು.

ತನ್ನ ಹಿಂದಿನ ಆದೇಶದಲ್ಲಿದ್ದಂತೆ ನ್ಯಾ.ಗನೇಡಿವಾಲಾ ಅವರು ಲೈಂಗಿಕ ಹಲ್ಲೆಯನ್ನು ವ್ಯಾಖ್ಯಾನಿಸಿರುವ ಪೊಕ್ಸೊ ಕಾಯ್ದೆಯ ಕಲಂ 7ನ್ನು ಮತ್ತೊಮ್ಮೆ ಉಲ್ಲೇಖಿಸಿದ್ದಾರೆ. ಪ್ರತ್ಯಕ್ಷದರ್ಶಿ ಸಾಕ್ಷಿಯು (ಬಾಲಕಿಯ ತಾಯಿ) ನೋಡಿದ್ದಾರೆನ್ನಲಾಗಿರುವ ಆರೋಪಿಯು ಬಾಲಕಿಯ ಕೈಗಳನ್ನು ಹಿಡಿದುಕೊಂಡು ತನ್ನ ಪ್ಯಾಂಟ್ ಝಿಪ್‌ನ್ನು ಬಿಚ್ಚಿದ ಕೃತ್ಯವು ಈ ಕಲಮ್‌ನಡಿ ಲೈಂಗಿಕ ಹಲ್ಲೆಯ ವ್ಯಾಖ್ಯೆಗೊಳಪಡುವುದಿಲ್ಲ ಎಂದು ಹೇಳಿದ್ದಾರೆ.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ ಅವರು ಬುಧವಾರ ಬಾಂಬೆ ಉಚ್ಚ ನ್ಯಾಯಾಲಯದ ಜ.19ರ ತೀರ್ಪನ್ನು ವಿಶೇಷವಾಗಿ ಉಲ್ಲೇಖಿಸಿ ಉಚ್ಚ ನ್ಯಾಯಾಲಯದ ತೀರ್ಪುಲೈಂಗಿಕ ಅಪರಾಧಿಗಳನ್ನು ದಂಡನೆಗೊಳಪಡಿಸುವಲ್ಲಿ ಅತ್ಯಂತ ಅಪಾಯಕಾರಿ ಪೂರ್ವ ನಿದರ್ಶನಕ್ಕೆ ನಾಂದಿ ಹಾಡುತ್ತದೆ ಎಂದು ಹೇಳಿದ ಬಳಿಕ ಸರ್ವೋಚ್ಚ ನ್ಯಾಯಾಲಯವು ಸದ್ರಿ ತೀರ್ಪನ್ನು ತಡೆಹಿಡಿದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X