Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ ‘ಪೋಸ್ಟ್ ಕೋವಿಡ್...

ದ.ಕ. ಜಿಲ್ಲೆಯಲ್ಲಿ ‘ಪೋಸ್ಟ್ ಕೋವಿಡ್ ಸೆಂಟರ್’ಗಳ ಸಂಖ್ಯೆಯಲ್ಲಿ ಹೆಚ್ಚಳ

ಹೋಮಿಯೋಪಥಿ ಹಾಗೂ ಆರ್ಯುವೇದ ವೈದ್ಯ ಪದ್ಧತಿಯತ್ತ ಒಲವು

ವಾರ್ತಾಭಾರತಿವಾರ್ತಾಭಾರತಿ28 Jan 2021 9:17 PM IST
share

ಮಂಗಳೂರು, ಜ.28: ದೇಶಾದ್ಯಂತ ಕೋವಿಡ್ ಅಬ್ಬರ ಕಡಿಮೆಯಾಗುತ್ತಿದ್ದರೂ ಕೂಡ ರೋಗಿಗಳಲ್ಲಿ ಕಾಣಿಸಿಕೊಳ್ಳುವ ಇತರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ‘ಆಯುಷ್’ನಡಿ ಹೋಮಿಯೋಪಥಿ ಹಾಗೂ ಆರ್ಯುವೇದ ವೈದ್ಯ ಪದ್ಧತಿಯು ಪರಿಣಾಮ ಕಾರಿಯಾಗಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ದ.ಕ ಜಿಲ್ಲೆಯಲ್ಲಿ ಪೋಸ್ಟ್ ಕೋವಿಡ್ ಚಿಕಿತ್ಸಾ ಕೇಂದ್ರಗಳು ಹೆಚ್ಚಾಗಿರುವುದು ಸಾಕ್ಷಿಯಾಗಿದೆ.

ಕೊರೋನ ಬಂದ ಬಳಿಕ ಜನಸಾಮಾನ್ಯರಲ್ಲಿ ಅದರಲ್ಲೂ ಹಿರಿಯರಲ್ಲಿ ಗಂಟು ನೋವು, ಬೆನ್ನು ನೋವು, ಉಸಿರಾಟದ ಸಮಸ್ಯೆ, ಮಲಬದ್ದತೆ ಸಹಿತ ಹಲವು ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಆಯುಷ್ ಇಲಾಖೆಯಡಿಯಲ್ಲಿರುವ ಹೋಮಿಯೋಪಥಿ ಮತ್ತು ಆರ್ಯುವೇದ ವೈದ್ಯಕೀಯ ಪದ್ಧತಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಅದಕ್ಕೆ ಪೂರಕವಾಗಿ ಜಿಲ್ಲೆಯ ಫಾದರ್ ಮುಲ್ಲರ್, ಯೆನೆಪೋಯ, ಆಳ್ವಾಸ್ ಸಹಿತ ಕೆಲವು ಹೋಮಿಯೋಪಥಿ ಹಾಗೂ ಆರ್ಯುವೇದ ಕಾಲೇಜಿನಲ್ಲಿ ಪೋಸ್ಟ್ ಕೋವಿಡ್ ಚಿಕಿತ್ಸಾ ಕೇಂದ್ರಗಳು ಆರಂಭಗೊಂಡಿವೆ.

ನಗರ ಹೊರವಲಯದ ದೇರಳಕಟ್ಟೆಯ ಫಾದರ್ ಮುಲ್ಲರ್ಸ್‌ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಆ್ಯಂಡ್ ಹಾಸ್ಪಿಟಲ್‌ನಲ್ಲಿ ಹೋಮಿಯೋಪಥಿ ಪೋಸ್ಟ್ ಕೋವಿಡ್ ಸೆಂಟರ್ ತೆರೆಯಲಾಗಿದೆ. ಕಳೆದ ಎರಡು ತಿಂಗಳಿನಿಂದ ಈ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ.

ಕೋವಿಡ್‌ನಿಂದ ಚೇತರಿಕೆ ಕಂಡ ರೋಗಿಗಳಲ್ಲಿ ಕೆಲವೊಂದು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಆ ಪೈಕಿ ಅನೇಕ ಮಂದಿ ಹೋಮಿಯೋಪಥಿಯಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತಾರೆ. ನಮ್ಮಲ್ಲಿ ಹೋಮಿಯೋಪಥಿ, ಯೋಗ, ನ್ಯಾಚುರೋಪಥಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಫಾದರ್ ಮುಲ್ಲರ್ ಕಾಲೇಜಿನ ನಿರ್ದೇಶಕ ಫಾ.ರೋಶನ್ ಕ್ರಾಸ್ತಾ ಹೇಳುತ್ತಾರೆ.

ಈಗಾಗಲೇ ನಮ್ಮಲ್ಲಿ ಆರ್ಯುವೇದ ಸಹಿತ ಹೋಮಿಯೋಥಿ, ನ್ಯಾಚುರೋಪಥಿಯಲ್ಲಿ ಪೋಸ್ಟ್ ಕೋವಿಡ್ ಸೆಂಟರ್‌ಗಳನ್ನು ತೆರೆಯಲಾಗಿದೆ. ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಾಣಿಸಿಕೊಳ್ಳುತ್ತಿದೆ. ರೋಗಿಗಳು ಕೂಡ ಈ ಚಿಕಿತ್ಸೆಗೆ ಒಗ್ಗಿಕೊಳ್ಳುತ್ತಿದ್ದಾರೆ ಎಂದು ಆಳ್ವಾಸ್ ಹೋಮಿಯೋಪಥಿಕ್ ಕಾಲೇಜಿನ ಪ್ರಾಂಶುಪಾಲ ಡಾ.ರೋಶನ್ ಪಿಂಟೋ ಅಭಿಪ್ರಾಯಪಡುತ್ತಾರೆ.

ಕೊರೋನ ಸೋಂಕು ಕಾಣಿಸಿಕೊಂಡ ಆರಂಭದ ದಿನಗಳಲ್ಲಿ ಆಯುಷ್ ಇಲಾಖೆಯಡಿ ವೈದ್ಯ ಪದ್ದತಿಯಲ್ಲಿ ಚಿಕಿತ್ಸೆ ನೀಡುವ ಕೆಲಸ ಮಾಡಿದ್ದೆವು. ಆದರೆ ಈಗ ಪೋಸ್ಟ್ ಕೋವಿಡ್ ಸೆಂಟರ್‌ಗಳನ್ನು ತೆರೆಯುವ ಮೂಲಕ ರೋಗಿಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ಮಾಡಲಾಗುತ್ತಿದೆ. ಉಳಿದ ವೈದ್ಯಕೀಯ ಪದ್ದತಿಗಿಂತ ಹೆಚ್ಚಾಗಿ ಆಯುಷ್ ವೈದ್ಯ ಪದ್ದತಿಯ ಕಡೆಗೆ ಒಲವು ವ್ಯಕ್ತವಾಗುತ್ತಿದೆ ಎಂದು ದ.ಕ. ಆಯುಷ್ ಇಲಾಖೆಯ ಅಧಿಕಾರಿ ಮುಹಮ್ಮದ್ ಇಕ್ಬಾಲ್ ಅಭಿಪ್ರಾಯಪಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X