Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಡಿಕೆಗೆ ಡ್ರಗ್ಸ್ ಪಟ್ಟ ನೀಡಿದ ಸರಕಾರದ...

ಅಡಿಕೆಗೆ ಡ್ರಗ್ಸ್ ಪಟ್ಟ ನೀಡಿದ ಸರಕಾರದ ವೆಬ್‌ಸೈಟ್

► ‘ಕರ್ನಾಟಕ ರಾಜ್ಯ ಕೃಷಿ-ಮಾರಾಟ ಮಂಡಳಿ’ಯ ವೆಬ್‌ಸೈಟ್ ಪ್ರಮಾದ ► ಅಡಿಕೆ ಬೆಳೆಗಾರರ ಸಂಘದ ತೀವ್ರ ಆಕ್ರೋಶ

ಶರತ್ ಪುರದಾಳುಶರತ್ ಪುರದಾಳು29 Jan 2021 11:13 AM IST
share
ಅಡಿಕೆಗೆ ಡ್ರಗ್ಸ್ ಪಟ್ಟ ನೀಡಿದ ಸರಕಾರದ ವೆಬ್‌ಸೈಟ್

ಶಿವಮೊಗ್ಗ, ಜ.28: ಅಡಿಕೆ ಆರೋಗ್ಯಕ್ಕೆ ಹಾನಿಕಾರಕ. ಅಡಿಕೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಅಫಿದವಿತ್ ಸಲ್ಲಿಸಿ ವಿವಾದ ಮೈಮೇಲೆ ಎಳೆದುಕೊಂಡ ಬೆನ್ನಲ್ಲೇ ರಾಜ್ಯ ಸರಕಾರ ತನ್ನ ವೆಬ್‌ಸೈಟ್‌ನಲ್ಲಿ ಅಡಿಕೆಗೆ ಡ್ರಗ್ಸ್ ಪಟ್ಟ ನೀಡಿದೆ. ಇದರಿಂದ ಅಡಿಕೆ ಬೆಳೆಗಾರರು ಆತಂಕ ಮತ್ತಷ್ಟು ಹೆಚ್ಚಳವಾಗಿದೆ. ಇದರ ಜೊತೆಗೆ ಸರಕಾರದ ವಿರುದ್ಧ ಹೋರಾಟಕ್ಕೆ ಅಣಿಯಾಗಿದ್ದಾರೆ.

‘ಕರ್ನಾಟಕ ರಾಜ್ಯ ಕೃಷಿ ಮತ್ತು ಮಾರಾಟ ಮಂಡಳಿ’ಯ ವೆ್ಸೈಟ್‌ನಲ್ಲಿ ಅಡಿಕೆಗೆ ಡ್ರಗ್ಸ್ ಪಟ್ಟ ನೀಡಲಾಗಿದೆ. ಕೃಷಿ ಉತ್ಪನ್ನಗಳ ಮಾರುಕಟ್ಟೆ ಧಾರಣೆ, ಕೃಷಿ ಸಂಬಂಧಿತ ನಿಯಮಗಳು ಸೇರಿದಂತೆ ಕೃಷಿ ಕುರಿತು ಹಲವು ಮಾಹಿತಿ ಈ ವೆಬ್‌ಸೈಟ್‌ನಲ್ಲಿ ಪ್ರಕಟವಾಗುತ್ತದೆ. ಇದೆ ವೆಬ್‌ಸೈಟ್‌ನ ‘ಔಷದ ಮತ್ತು ಮಾದಕ ಉತ್ತೇಜಕ’ ಕಾಲಂನಲ್ಲಿ ಅಡಿಕೆಯನ್ನು ಸೇರಿಸಿ ಗೊಂದಲ ಸೃಷ್ಟಿಸಿದೆ.

ಭಾರತೀಯ ಸಂಸ್ಕೃತಿಯಲ್ಲಿ ಅಡಿಕೆಗೆ ಪವಿತ್ರ ಸ್ಥಾನವಿದೆ. ಯಾವುದೇ ಶುಭ ಕಾರ್ಯವಿದ್ದರೂ ಅಡಿಕೆ, ವೀಳ್ಯದ ಎಲೆ ನೀಡುವುದು ಭಾರತೀಯ ಸಂಪ್ರದಾಯ. ಆದರೆ ಇದೀಗ ಅಡಿಕೆಯ ಮಾನ ಕಳೆಯುವಂತಹ ವಿದ್ಯಾಮಾನಗಳು ಆಗಾಗ ನಡೆಯುತ್ತಲೇ ಇವೆ. 2017 ಮತ್ತು 2019ರಲ್ಲಿ ಸಂಸತ್ ಅಧಿವೇಶನದಲ್ಲಿ ಆರೋಗ್ಯ ಸಚಿವರು ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಹಾನಿಕರ ಹಾಗೂ ಕ್ಯಾನ್ಸರ್ ಬರುತ್ತದೆ ಎಂದು ಹೇಳಿಕೆ ನೀಡಿ ಅಡಿಕೆ ಮಾನವನ್ನು ಹರಾಜು ಹಾಕಿದ್ದರು. ಇದುವರೆಗೆ ಅಡಿಕೆ ಕ್ಯಾನ್ಸರ್ ಕಾರಕ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರಕಾರ ಅಫಿದವಿತ್ ಸಲ್ಲಿಸಲಾಗಿತ್ತು. ಆದರೆ, ಇದೀಗ ರಾಜ್ಯ ಸರಕಾರ ವೆಬ್‌ಸೈಟ್‌ನಲ್ಲಿಯೇ ಅಡಿಕೆಯನ್ನು ಮಾದಕ ವಸ್ತುಗಳ ಪಟ್ಟಿಗೆ ಸೇರಿಸುವ ಮೂಲಕ ಅಡಿಕೆಯ ಮಾನ ಕಳೆಯುವ ಕೆಲಸ ಮಾಡಲಾಗಿದೆ ಎಂದು ಅಡಿಕೆ ಬೆಳೆಗಾರರು ದೂರಿದ್ದಾರೆ.

ರಾಜ್ಯ ಸರಕಾರ ಅಡಿಕೆ ಬೆಳೆಗಾರರ ಹಿತಕಾಪಾಡಲು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಅಡಿಕೆ ಕಾರ್ಯಪಡೆ ರಚನೆ ಮಾಡಿದೆ. ಅಡಿಕೆ ಕುರಿತು ಸಂಶೋಧನೆ ನಡೆಸಲು ಅನುದಾನವನ್ನು ನೀಡಿದೆ. ಆದರೆ, ಈ ನಡುವೆ ರಾಜ್ಯ ಸರಕಾರದ ವೆಬ್‌ಸೈಟ್‌ನಲ್ಲೇ ಅಡಿಕೆ ಮಾನ ಕಳೆದಿರುವುದು ಅಡಿಕೆ ಬೆಳೆಗಾರರ ಆಕ್ರೋಶಕ್ಕೆ ಕಾರಣವಾಗಿದೆ.

ಅಡಿಕೆಗೆ ‘ಕೆ’ ಕೆಟಗರಿ: ಅಡಿಕೆ ಆರೋಗ್ಯಕ್ಕೆ ಹಾನಿಕಾರಕ,ಅಡಿಕೆಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ವಿವಾದದ ನಡುವೆ ಅಡಿಕೆಗೆ ಉತ್ತಮ ಧಾರಣೆ ಸಿಗುತ್ತಿದೆ. ಈ ಹೊತ್ತಿನಲ್ಲಿ ಅಡಿಕೆಯನ್ನು ಔಷಧ ಮತ್ತು ಮಾದಕ ಉತ್ತೇಜಕ ‘ಕೆ’ ಕೆಟಗರಿ ಅಡಿ ಸೇರಿಸಿದೆ. ವಿಪರ್ಯಾಸವೆಂದರೆ ವೀಳ್ಯೆದೆಲೆಯನ್ನು ಈ ಕೆಟಗಿರಿಯಲ್ಲಿ ಸೇರಿಸಲಾಗಿದೆ.

ಅಡಿಕೆ ಬೆಳೆಗಾರರ ಆಕ್ರೋಶ: ಔಷಧ ಮತ್ತು ಮಾದಕ ವಸ್ತುಗಳ ಕೆಟಗಿರಿಯಲ್ಲಿ ಅಡಿಕೆ, ವೀಳ್ಯೆದೆಲೆ ಮತ್ತು ತಂಬಾಕು ಇದೆ. ಈ ಪೈಕಿ ವೀಳ್ಯೆದೆಲೆ ಮತ್ತು ಅಡಿಕೆಗೆ ಔಷಧೀಯ ಗುಣಲಕ್ಷಣವಿದೆ. ನಾಟಿ ಮತ್ತು ಆರ್ಯುವೇದ ಪದ್ಧತಿಯಲ್ಲಿ ಇವೆರೆಡನ್ನು ಬಳಸಲಾಗುತ್ತದೆ. ಆದರೆ, ಇವೆರಡನ್ನು ಮಾದಕ ವಸ್ತು ಕೆಟಗಿರಿಯಲ್ಲಿ ಸೇರ್ಪಡೆ ಮಾಡಿರುವುದು ಅಡಿಕೆ ಬೆಳೆಗಾರರ ಆಕ್ರೋಶಕ್ಕೆ ಕಾರಣವಾಗಿದೆ.

ತಂಬಾಕು ಲಾಭಿಯಿಂದಾಗಿ ಅಡಿಕೆ ಬೆಲೆ ನಿರಂತರವಾಗಿ ಕುಸಿಯಲಾರಂಭಿಸಿತ್ತು. ಈ ವೇಳೆ ಅಡಿಕೆ ಕ್ಯಾನ್ಸರ್ ಕಾರಕ ಎಂದಾಕ್ಷಣ 80 ಸಾವಿರಕ್ಕೇರಿದ ಅಡಿಕೆ ಧಾರಣೆ ಇದೀಗ 40 ಸಾವಿರಕ್ಕಿಳಿದಿದೆ. ಇದೀಗ ಅಡಿಕೆಯನ್ನು ಮಾದಕ ವಸ್ತುಗಳ ಪಟ್ಟಿಗೆ ಸೇರಿಸಲಾಗಿದೆ. ಅಡಿಕೆ ನಿಷೇಧಿಸಲು ಹಂತಹಂತವಾಗಿ ಅಡಿಕೆಯ ಮೌಲ್ಯವನ್ನೇ ಕಳೆಯಲಾಗುತ್ತಿದೆಯೇ ಎಂಬ ಅನುಮಾನ ಇದೀಗ ಅಡಿಕೆ ಬೆಳೆಗಾರರನ್ನು ಕಾಡಲಾರಂಭಿಸಿದೆ.

ಯಾವ ಆಧಾರದ ಮೇಲೆ ಮಾದಕ ವಸ್ತು ಪಟ್ಟಿಗೆ ಸೇರಿಸಿದ್ದೀರಿ?

ಅಡಿಕೆಯನ್ನು ಮಾದಕ ವಸ್ತುಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಒಂದು ಜವಾಬ್ದಾರಿಯುತ ಇಲಾಖೆ ತನ್ನ ವೆಬ್‌ಸೈಟ್ ರೂಪಿಸುವಾಗ ಪ್ರತಿಯೊಂದು ಚಿಕ್ಕಚಿಕ್ಕ ಅಂಶಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಇದು ಎಲ್ಲ ಬೆಳೆಗಳ ಧಾರಣೆಯನ್ನು ಕೊಡುತ್ತದೆ. ರಾಜ್ಯಾದ್ಯಂತ ರೈತರು ಈ ವೆಬ್‌ಸೈಟ್ ಮೇಲೆ ಅವಲಂಬಿತರಾಗಿದ್ದಾರೆ. ಇತಂಹ ಸಂದರ್ಭದಲ್ಲಿ ಅಡಿಕೆಯನ್ನು ಯಾವ ಆಧಾರದ ಮೇಲೆ ಮಾದಕ ವಸ್ತು ಪಟ್ಟಿಗೆ ಸೇರಿಸಿದ್ದಾರೆ?. ಯಾಕೆ ಕೆಟಗರಿ ಸೃಷ್ಟಿ ಮಾಡಿದ್ದಾರೆ ಎಂದು ಇಲಾಖೆ ಉತ್ತರಿಸಬೇಕು.

ಗೋಪಾಲ್ ಯಡಗೆರೆ, ಅಡಿಕೆ ಬೆಳೆಗಾರ

ಅಡಿಕೆ ನಿಷೇಧ ಮಾಡುವ ಮುನ್ನುಡಿ

ಅಡಿಕೆಯನ್ನು ಮಾದಕ ವಸ್ತುಗಳ ಪಟ್ಟಿಗೆ ಸೇರಿಸಿರುವುದನ್ನು ಜಿಲ್ಲಾ ಅಡಿಕೆ ಬೆಳೆಗಾರರ ಸಂಘ ಖಂಡಿಸುತ್ತದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಕ್ಕೆ ಅಡಿಕೆ ಕೇವಲ ಚುನಾವಣಾ ವಸ್ತುವಾಗಿದೆ.ಲಕ್ಷಾಂತರ ಜನರ ಬದುಕಿನ ಬೆಳೆಯಾಗಿದೆ ಎಂಬುವುದನ್ನು ತಿಳಿಯುವಲ್ಲಿ ವಿಫಲರಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಅಡಿಕೆಯ ಗೌರವ ಕಾಪಾಡುವುದಾಗಿ ಹೇಳಿದ್ದರು. 2020 ಬಜೆಟ್‌ನಲ್ಲಿ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಅಡಿಕೆ ಬೆಳೆಯನ್ನು ಬಿಟ್ಟಿದ್ದಾರೆ.

ಬಿ.ಎ ರಮೇಶ್ ಹೆಗಡೆ, ಅಧ್ಯಕ್ಷ, ಜಿಲ್ಲಾ ಅಡಿಕೆ ಬೆಳೆಗಾರರ ಸಂಘ

share
ಶರತ್ ಪುರದಾಳು
ಶರತ್ ಪುರದಾಳು
Next Story
X