Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಜಿಐ ಟ್ಯಾಗ್' ಹೊಂದಿದ ಉತ್ಪನ್ನಗಳ...

‘ಜಿಐ ಟ್ಯಾಗ್' ಹೊಂದಿದ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ: ಸಚಿವ ಜಗದೀಶ್ ಶೆಟ್ಟರ್

ವಾರ್ತಾಭಾರತಿವಾರ್ತಾಭಾರತಿ29 Jan 2021 10:32 PM IST
share
‘ಜಿಐ ಟ್ಯಾಗ್ ಹೊಂದಿದ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ: ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು, ಜ. 29: ‘ಜಿಯೋಗ್ರಾಫಿಕಲ್ ಇಂಡಿಕೇಷನ್ ಟ್ಯಾಗ್'(ಜಿಐ ಟ್ಯಾಗ್) ಹೊಂದಿದ ಚನ್ನಪಟ್ಟಣದ ಬೊಂಬೆಗಳು, ಕೊಲ್ಲಾಪುರ ಚಪ್ಪಲಿ, ಉಡುಪಿಯ ಮಲ್ಲಿಗೆ, ಮಟ್ಟುಗುಳ್ಳ ಬದನೆಕಾಯಿ, ಸೀರೆಗಳು, ಸಂಡೂರು ಲಂಬಾಣಿ ಎಂಬ್ರಾಯಿಡರಿ ಸೇರಿದಂತೆ ರಾಜ್ಯದ ಉತ್ಪನ್ನಗಳ ಮಾರಾಟವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದಲ್ಲಿ ಪ್ರದರ್ಶನ ಮಳಿಗೆ ಪ್ರಾರಂಭಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಬ್ಬಯ್ಯ ಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಜಿಐ ಟ್ಯಾಗ್ ಹೊಂದಿರುವ ರಾಜ್ಯದ ಎಲ್ಲ 42 ಉತ್ಪನ್ನಗಳನ್ನು ಮಾರಾಟಕ್ಕೆ ಉತ್ತೇಜಿಸಲು ಬಸ್ ಮತ್ತು ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶನ ಮತ್ತು ಮಾರಾಟ ಮಳಿಗೆ ಆರಂಭಿಸಲಾಗುವುದು ಎಂದರು.

ಹೀಗೆ ಮಳಿಗೆಗಳನ್ನು ತೆರೆಯುವುದರಿಂದ ನಮ್ಮ ರಾಜ್ಯದ ಉತ್ಪನ್ನಗಳನ್ನು ಅಂತರ್‍ರಾಷ್ಟ್ರೀಯ ಹಾಗೂ ರಾಷ್ಟ್ರೀಯ ಪ್ರಯಾಣಿಕರಿಗೆ ಪರಿಚಯಿಸಲು ಅನುಕೂಲವಾಗುತ್ತದೆ. ಇದರಿಂದ ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಬರಲಿದೆ ಎಂದ ಅವರು, ಬೀದರಿನ ಉತ್ಪನ್ನಗಳು, ಕಮಲಾಪುರ್ ಕೆಂಪು ಬಾಳೆಹಣ್ಣು, ಮೈಸೂರು ಅಗರಬತ್ತಿ, ಮೈಸೂರು ಸ್ಯಾಂಡಲ್, ಮೈಸೂರು ರೋಸ್‍ವುಡ್, ಮೈಸೂರಿನ ಸಂಪ್ರದಾಯಿಕ ಪೇಂಟಿಂಗ್ ಸೇರಿದಂತೆ ಮತ್ತಿತರ ಉತ್ಪನ್ನಗಳನ್ನು ಮಾರುಕಟ್ಟೆ ಕಲ್ಪಿಸಲು ಸರಕಾರ ಕ್ರಮ ವಹಿಸಲಿದೆ ಎಂದರು.

ಜವಳಿ ಇಲಾಖೆ ಮೂಲಕ ಇಳಕಲ್ ಸೀರೆ, ಗುಳೇದಗುಡ್ಡ ಕಣ, ಮೊಳಕಾಲ್ಮೂರು ಸೀರೆ ಸೇರಿದಂತೆ ಮತ್ತಿತರ ಉತ್ಪನ್ನಗಳಿಗೆ ಜಿಐ ಟ್ಯಾಗ್ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಅಧ್ಯಯನ ಕೈಗೊಳ್ಳಲಾಗಿದೆ. ಇ-ಕಾಮರ್ಸ್ ಮೂಲಕ ಮಾರುಕಟ್ಟೆ ಒದಗಿಸಲು ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಸಹಯೋಗದೊಂದಿಗೆ ಉತ್ತೇಜನ ನೀಡಲಾಗುತ್ತದೆ. ಕೇಂದ್ರ ಸರಕಾರ 1993ರ ಕಾನೂನಿನ ಪ್ರಕಾರ 370 ಉತ್ಪನ್ನಗಳನ್ನು ಜಿಐ ಟ್ಯಾಕ್ ಎಂದು ಗುರುತಿಸಿದೆ. ವಿಶೇಷವೆಂದರೆ ದೇಶದಲ್ಲೇ ಅತಿಹೆಚ್ಚು ರಾಜ್ಯದ 42 ಉತ್ಪನ್ನಗಳಿಗೆ ಜಿಐ ಟ್ಯಾಗ್ ಸಿಕ್ಕಿದೆ ಎಂದು ಹೇಳಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಅಬ್ಬಯ್ಯ ಪ್ರಸಾದ್, ಜಿಐ ಟ್ಯಾಗ್ ದೊರೆತಿರುವ ಮೇಲ್ಕಂಡ ಪ್ರತಿಷ್ಠಿತ ಉತ್ಪನ್ನಗಳಿಗೆ ರಫ್ತು ಮಾಡುವ ವಿಫುಲ ಅವಕಾಶಗಳಿವೆ. ಆ ನಿಟ್ಟಿನಲ್ಲಿ ರಾಜ್ಯ ಸರಕಾರ ಅಗತ್ಯ ಪ್ರಚಾರ ಮತ್ತು ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ ಉತ್ಪಾದಕರಿಗೆ ನೆರವು ನೀಡಬೇಕು ಎಂದು ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X