Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸಲು...

ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸಲು ದಕ್ಷಿಣ ಆಫ್ರಿಕ ಸೇನೆ ಅನುಮತಿ

ಪ್ರಕರಣ ಸಂಬಂಧ ನ್ಯಾಯಾಲಯದ ಮೆಟ್ಟಿಲೇರಿದ್ದ ಮೇಜರ್ ಪಾತಿಮಾ ಇಸಾಕ್ಸ್

ವಾರ್ತಾಭಾರತಿವಾರ್ತಾಭಾರತಿ29 Jan 2021 10:49 PM IST
share
ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸಲು ದಕ್ಷಿಣ ಆಫ್ರಿಕ ಸೇನೆ ಅನುಮತಿ

ಜೊಹಾನ್ಸ್‌ಬರ್ಗ್ (ದಕ್ಷಿಣ ಆಫ್ರಿಕ), ಜ. 29: ಸಮವಸ್ತ್ರದ ಭಾಗವಾಗಿ ಶಿರವಸ್ತ್ರ (ಹಿಜಾಬ್)ಗಳನ್ನು ಧರಿಸಲು ಮುಸ್ಲಿಮ್ ಮಹಿಳೆಯರಿಗೆ ಸಾಧ್ಯವಾಗುವಂತೆ, ದಕ್ಷಿಣ ಆಫ್ರಿಕದ ಸೇನೆಯು ತನ್ನ ವಸ್ತ್ರ ನೀತಿಗೆ ತಿದ್ದುಪಡಿ ಮಾಡಿದೆ ಎಂದು ಸೇನೆಯ ವಕ್ತಾರ ಮಫಿ ಮಗೊಬೊಝಿ ಗುರುವಾರ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

 2018ರ ಜೂನ್‌ನಲ್ಲಿ, ತನ್ನ ಸೇನಾ ಟೊಪ್ಪಿಯ ಕೆಳಗೆ ಹಿಜಾಬ್ ಧರಿಸಿರುವುದಕ್ಕಾಗಿ ಮೇಜರ್ ಫಾತಿಮಾ ಇಸಾಕ್ಸ್ ವಿರುದ್ಧ ಸೇನೆಯು ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು. ಸಮವಸ್ತ್ರದಲ್ಲಿರುವಾಗ ಹಿಜಾಬ್ ತೆಗೆಯುವಂತೆ ಮೇಲಧಿಕಾರಿ ನೀಡಿದ್ದ ಆದೇಶವನ್ನು ಪಾಲಿಸಲು ಅವರು ನಿರಾಕರಿಸಿದ್ದರು. ಅದಕ್ಕಾಗಿ, ಮೇಲಧಿಕಾರಿಯ ಕಾನೂನುಬದ್ಧ ಸೂಚನೆಗಳನ್ನು ಪಾಲಿಸಲು ನಿರಾಕರಿಸುವ ಮೂಲಕ ಉದ್ದೇಶಪೂರ್ವಕ ಅವಿಧೇಯತೆ ತೋರಿಸಿದ್ದಾರೆ ಎಂಬ ಆರೋಪವನ್ನು ಫಾತಿಮಾ ವಿರುದ್ಧ ಹೊರಿಸಲಾಗಿತ್ತು.

ಆದರೆ, ಕಳೆದ ವರ್ಷದ ಜನವರಿಯಲ್ಲಿ ಸೇನಾ ನ್ಯಾಯಾಲಯವೊಂದು ಅವರ ವಿರುದ್ಧದ ಆರೋಪಗಳನ್ನು ಕೈಬಿಟ್ಟಿತ್ತು. ಅದೂ ಅಲ್ಲದೆ, ಕರ್ತವ್ಯದಲ್ಲಿರುವಾಗ ಬಿಗಿಯಾದ ಕಪ್ಪು ತಲೆವಸ್ತ್ರವನ್ನು ಧರಿಸಲೂ ನ್ಯಾಯಾಲಯ ಫಾತಿಮಾಗೆ ಅನುಮತಿ ನೀಡಿತ್ತು.

ಆದರೆ, ಸೇನೆಯು ತನ್ನ ವಸ್ತ್ರ ನೀತಿಗೆ ತಿದ್ದುಪಡಿ ತರಲಿಲ್ಲ. ಧಾರ್ಮಿಕ ಉಡುಗೆಗಳನ್ನು ನಿರ್ಬಂಧಿಸುವ ನಿಯಮಗಳನ್ನು ಪ್ರಶ್ನಿಸಿ ಫಾತಿಮಾ, ದಕ್ಷಿಣ ಆಫ್ರಿಕದ ಸಮಾನತೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದರು.

ಈಗ ದಕ್ಷಿಣ ಆಫ್ರಿಕ ರಕ್ಷಣಾ ಪಡೆ (ಎಸ್‌ಎಎನ್‌ಡಿಎಫ್) ತನ್ನ ವಸ್ತ್ರ ನೀತಿಗೆ ತಿದ್ದುಪಡಿ ತಂದಿದೆ ಹಾಗೂ ಮುಸ್ಲಿಮ್ ಮಹಿಳೆಯರು ಕರ್ತವ್ಯದಲ್ಲಿರುವಾಗ ತಮ್ಮ ತಲೆಗಳನ್ನು ಮುಚ್ಚಿಕೊಳ್ಳಲು ಅನುಮತಿ ನೀಡಿದೆ ಎಂದು ವಕ್ತಾರ ಮಫಿ ಮಗೊಬೊಝಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X