Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ ಹೈಕೋರ್ಟ್ ನ್ಯಾಯಾಧೀಶೆಯ ‘ಪೋಕ್ಸೊ’...

ಮುಂಬೈ ಹೈಕೋರ್ಟ್ ನ್ಯಾಯಾಧೀಶೆಯ ‘ಪೋಕ್ಸೊ’ ತೀರ್ಪುಗಳ ವಿರುದ್ಧ ವ್ಯಾಪಕ ವಿವಾದ

ವಾರ್ತಾಭಾರತಿವಾರ್ತಾಭಾರತಿ29 Jan 2021 11:05 PM IST
share
ಮುಂಬೈ ಹೈಕೋರ್ಟ್ ನ್ಯಾಯಾಧೀಶೆಯ ‘ಪೋಕ್ಸೊ’ ತೀರ್ಪುಗಳ ವಿರುದ್ಧ ವ್ಯಾಪಕ ವಿವಾದ

ಮುಂಬೈ,ಜ.29: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ)ಯಡಿ ಲೈಂಗಿಕ ಆಕ್ರಮಣದ ಕುರಿತಾಗಿ ನೀಡಿದ ವ್ಯಾಖ್ಯಾನಕ್ಕಾಗಿ ವ್ಯಾಪಕ ಟೀಕೆಗೆ ಒಳಗಾಗಿರುವ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆ ಪುಷ್ಪಾ ಗಾನೆಡಿವಾಲಾ ಅವರು ತೀರಾ ಇತ್ತೀಚೆಗೆ, ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ನಡೆದ ಅತ್ಯಾಚಾರದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದರು. ಈ ಎರಡೂ ಪ್ರಕರಣಗಳಲ್ಲಿ ಸಂತ್ರಸ್ತೆಯರು ನೀಡಿದ ಸಾಕ್ಷಿಯು, ಆರೋಪಿಗಳ ದೋಷಿತ್ವವನ್ನು ದೃಢಪಡಿಸುವಷ್ಟು ಭರವಸೆಯನ್ನು ಮೂಡಿಸಿಲ್ಲವೆಂದು ಅವರು ತೀರ್ಪಿನಲ್ಲಿ ತಿಳಿಸಿದ್ದರು.

  ನ್ಯಾಯಮೂರ್ತಿ ಪುಷ್ಪಾ ಗಾನೆಡಿವಾಲಾ ಅವರು ಇತ್ತೀಚೆಗೆ 12 ವರ್ಷದ ಬಾಲಕಿಯ ಎದೆಯನ್ನು ಸ್ಪರ್ಶಿಸಿದ ಪ್ರಕರಣದ ಆರೋಪಿಯನ್ನು ದೋಷಮುಕ್ತಗೊಳಿಸಿದ್ದರು. ಆರೋಪಿಯು ಬಾಲಕಿಯ ಬರಿಮೈಯ ಸಂಪರ್ಕ ಹೊಂದದೆ ಇರುವುದರಿಂದ ಅದನ್ನು ಲೈಂಗಿಕ ಹಲ್ಲೆಯೆಂದು ಪರಿಗಣಿಸಲು ಸಾಧ್ಯವಿಲ್ಲವೆಂದು ಆಕೆ ತೀರ್ಪಿನಲ್ಲಿ ಹೇಳಿದ್ದರು.

ಈ ತೀರ್ಪಿಗೆ ಕೆಲವೇ ದಿನಗಳ ಮೊದಲು ನ್ಯಾಯಮೂರ್ತಿ ಪುಷ್ಪಾ ಅವರು, ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿ ನೀಡಿದ ತೀರ್ಪಿನಲ್ಲಿ ಐದು ವರ್ಷದ ಬಾಲಕಿಯ ಕೈಗಳನ್ನು ಹಿಡಿದುಕೊಳ್ಳುವುದು ಹಾಗೂ ಪ್ಯಾಂಟ್‌ನ ಝಿಪ್ ಜಾರಿಸುವುದನ್ನು ಪೋಕ್ಸೊ ಕಾಯ್ದೆಯಡಿ ಲೈಂಗಿಕ ಆಕ್ರಮಣವೆಂದು ಪರಿಗಣಿಸಲು ಸಾಧ್ಯವಿಲ್ಲವೆಂದು ಅಭಿಪ್ರಾಯಿಸಿದ್ದರು. ಅವರ ತೀರ್ಪು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಇನ್ನೆರಡು ತೀರ್ಪುಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಅತ್ಯಾಚಾರಗೈದ ಇಬ್ಬರು ಆರೋಪಿಗಳನ್ನು ವಿಶ್ವಾಸಾರ್ಹ ಪುರಾವೆಯ ಕೊರತೆಯ ಹಿನ್ನೆಲೆಯಲ್ಲಿ ದೋಷಮುಕ್ತಗೊಳಿಸಿದ್ದರು.

 ‘‘ ಆರೋಪಿಗಳ ದೋಷಿತ್ವವನ್ನು ದೃಢಪಡಿಸಲು ಸಂತ್ರಸ್ತೆ ನೀಡುವ ಸಾಕ್ಷ್ಯವು ಸಾಕಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದಾಗ್ಯೂ, ಆ ಸಾಕ್ಷ್ಯವು ನ್ಯಾಯಾಲಯಕ್ಕೆ ಆತ್ಮವಿಶ್ವಾಸವನ್ನು ಮೂಡಿಸುವಷ್ಟು ಸ್ಫೂರ್ತಿದಾಯಕವಾಗಿರಬೇಕು ಈ ಪ್ರಕರಣದಲ್ಲಿ ಹಾಗಾಗಿಲ್ಲ’’ ಎಂದು ಅವರು ತೀರ್ಪೊಂದರಲ್ಲಿ ತಿಳಿಸಿದ್ದರು.

ಎರಡನೆ ತೀರ್ಪಿನಲ್ಲಿ ಅವರು ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬಳೇ ನೀಡುವ ಸಾಕ್ಷ್ಯದಿಂದಲೇ ಆರೋಪಿಯ ಮೇಲೆ ಕ್ರಿಮಿನಲ್ ಅಪರಾಧದ ಹೊಣೆಗಾರಿಕೆಯನ್ನು ಹೊರಿಬಹುದಾಗಿದೆ. ಆದರೆ ಹಾಲಿ ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಸಾಕ್ಷಿ ನೀಡಿರುವ ಕಳಪೆ ಗುಣಮಟ್ಟದ ಸಾಕ್ಷಿಯನ್ನು ಪರಿಗಣನೆಗೆ ತೆಗೆದುಕೊಂಡು, ಅಪೀಲುದಾರನನ್ನು 10 ವರ್ಷಗಳ ಕಾಲ ಜೈಲಿಗೆ ಕಳುಹಿಸುವುದು ಘೋರ ಅನ್ಯಾಯವಾಗುತ್ತದೆ ಎಂದು ಅವರು ಹೇಳಿದ್ದರು.

ಜನವರಿ 15ರಂದು ಪ್ರಕರಣವೊಂದಕ್ಕೆ ಸಂಬಂಧಿಸಿ ನೀಡಿ ತೀರ್ಪಿನಲ್ಲಿ ಪುಷ್ಪಾ ಅವರು ಒಬ್ಬನೇ ವ್ಯಕ್ತಿಯು ಸಂತ್ರಸ್ತೆಯನ್ನು ಯಾವುದೇ ಪ್ರತಿರೋಧವಿಲ್ಲದೆ ವಿವಸ್ತ್ರಳನ್ನಾಗಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದರು.

15 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರವೆಸಗಿದ ಆರೋಪದಲ್ಲಿ ಕೆಳ ನ್ಯಾಯಾಲಯವು ತನಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಸೂರತ್ ಕಾಸರ್‌ಕರ್ ಎಂಬಾತ ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ನಡೆಸಿದ ಬಳಿಕ ಪುಷ್ಪಾ ಅವರು ಈ ತೀರ್ಪು ನೀಡಿದ್ದರು.

 ಜನವರಿ 14ರಂದು ನ್ಯಾಯಮೂರ್ತಿ ಪುಷ್ಪಾ ಅವರು, 27 ವರ್ಷದ ಜೋಗೇಶ್ವರ್ ಕಾವಳೆ ಎಂಬಾತ 17 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರವೆಸಗಿದ ಅಪರಾಧಕ್ಕಾಗಿ ತನಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದರು. ಆರೋಪಿಯು ಬಾಲಕಿಯನ್ನು ತನ್ನ ಸಹೋದರಿಯ ಮನೆಗೆ ಕೊಂಡೊಯ್ದು ಎರಡು ತಿಂಗಳುಗಳ ಕಾಲ ಲೈಂಗಿಕ ಸಂಪರ್ಕ ಬೆಳೆಸಿದ್ದನೆಂದು ಪ್ರಾಸಿಕ್ಯೂಶನ್ ಆಪಾದಿಸಿತ್ತು.

  ಪ್ರಕರಣದ ವಿಚಾರಣೆ ನಡೆಸಿದ ಗಾನೆಡಿವಾಲಾ ಅವರು ಅವಿವಾಹಿತ ಯುವಕ ಹಾಗೂ ಬಾಲಕಿಯನ್ನು ಕುಟುಂಬದ ಇತರ ಸದಸ್ಯರು ಜೊತೆಯಾಗಿ ಉಳಿದುಕೊಳ್ಳಲು ಯಾಕೆ ಅವಕಾಶ ನೀಡಿದರು ಎಂದು ಅಚ್ಚರಿ ವ್ಯಕ್ತಪಡಿಸಿದರು ಹಾಗೂ ಇಂತಹ ವಾತಾವರಣದಲ್ಲಿ ಖಾಸಗಿಯಾಗಿ ಲೈಂಗಿಕ ಸಂಪರ್ಕ ಬೆಳೆಸಲು ಸಂತ್ರಸ್ತೆ ಹಾಗೂ ಆರೋಪಿಗೆ ಹೇಗೆ ಸಾಧ್ಯವಾಯಿತು ಎಂದವರು ಪ್ರಶ್ನಿಸಿದ್ದರು.

 2007ರಲ್ಲಿ ಗಾನೆಡಿವಾಲಾ ಅವರು ಜಿಲ್ಲಾ ನ್ಯಾಯಾಧೀಶೆಯಾಗಿ ನೇಮಕಗೊಳ್ಳುವ ಮುನ್ನ ನ್ಯಾಯವಾದಿಯಾಗಿದ್ದರು. 2019ರ ಫೆಬ್ರವರಿಯಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶೆಯಾಗಿ ಭಡ್ತಿ ಪಡೆದಿದ್ದರು. ಈ ವರ್ಷದ ಜನವರಿ 20ರಂದು ಹೈಕೋರ್ಟ್ ನ್ಯಾಯಾಧೀಶರಾಗಿ ಅವರ ನೇಮಕಾತಿಯನ್ನು ಖಾಯಂಗೊಳಿಸಲು ಸುಪ್ರೀಂಕೋರ್ಟ್‌ನ ಕೊಲೆಜಿಯಂ ಅನುಮೋದನೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X