Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಂಪುಕೋಟೆ ಘಟನೆಗೂ ಸಂಯುಕ್ತ ಕಿಸಾನ್...

ಕೆಂಪುಕೋಟೆ ಘಟನೆಗೂ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಗೂ ಸಂಬಂಧವಿಲ್ಲ: ಬಡಗಲಪುರ ನಾಗೇಂದ್ರ

ಜ.30 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ29 Jan 2021 11:22 PM IST
share
ಕೆಂಪುಕೋಟೆ ಘಟನೆಗೂ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಗೂ ಸಂಬಂಧವಿಲ್ಲ: ಬಡಗಲಪುರ ನಾಗೇಂದ್ರ

ಮೈಸೂರು,ಜ.29: ಕೆಂಪುಕೋಟೆಯಲ್ಲಿ ನಡೆದ ಕೃತ್ಯಕ್ಕೂ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಗೂ ಯಾವುದೇ ಸಂಬಂಧವಿಲ್ಲ. ರೈತರನ್ನು ಭಯೋತ್ಪಾದಕರಾಗಿ ಬಿಂಬಿಸುವುದನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

ನಗರದ ಜಲದರ್ಶಿನಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಂಪುಕೋಟೆಯಲ್ಲಿ ನಡೆದ ಕೃತ್ಯದ ರೂವಾರಿ ಕೇಂದ್ರ ಸರ್ಕಾರವೇ ಹೊರತು ಅದರ ಹಿಂದೆ ಕಳೆದ 70 ದಿನಗಳಿಂದಲೂ ಶಾಂತಿಯುತವಾಗಿ ನಡೆಯುತ್ತಿರುವ ರೈತ ಚಳವಳಿಯ ಉದ್ದೇಶಿತ ಕಾರ್ಯಕ್ರಮವಲ್ಲ. ಈ ಆರೋಪವನ್ನು ಚಳವಳಿಯ ಮುಖಂಡರ ಮೇಲೆ ಹೊರಿಸಿರುವುದು, ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲೆ ಮಾಡಿರುವುದು ಮತ್ತು ಚಳವಳಿ ನಿರತ ರೈತರನ್ನು ಭಯೋತ್ಪಾದಕರೆಂದು ಬಿಂಬಿಸುವುದು ಖಂಡನೀಯ ಎಂದರು.

ಅಂದು ನವದೆಹಲಿಯಲ್ಲಿ ನಡೆದ ಕೃತ್ಯದ ಬಗ್ಗೆ ವಿಷಾದವಿದೆ. ರೈತರ ಹೆಸರಿನಲ್ಲಿ ಚಳವಳಿ ಮಾಡಿಸುವ ಯಾರೇ ಆಗಲಿ ತತ್ವವನ್ನು ಪಾಲನೆ ಮಾಡಬೇಕು. ಚಳವಳಿಯನ್ನು ಶಾಂತಿಯುತವಾಗಿ ಸಂಘಟಿಸಬೇಕು. ರೈತರ ಹೆಸರಿನಲ್ಲಿ ದುಷ್ಕರ್ಮಿಗಳು ಇಂತಹ ಕೃತ್ಯ ಎಸಗುವುದನ್ನು ರೈತ ಸಂಘಟನೆಗಳು ಸಹಿಸುವುದಿಲ್ಲ. ಈ ಕೃತ್ಯದಲ್ಲಿ ಭಾಗಿಯಾದ ಯಾರೇ ಆಗಲಿ ಅವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.

ಚಳವಳಿಗಾರರನ್ನು ನೈತಿಕವಾಗಿ ಎದುರಿಸಲಾಗದ ಕೇಂದ್ರ ಸರ್ಕಾರ ಕೆಂಪುಕೋಟೆಯಲ್ಲಿ ಕೆಲವು ದುಷ್ಕರ್ಮಿಗಳು ನಡೆಸಿದ ಗಲಭೆಯನ್ನು ದುರುಪಯೋಗಪಡಿಸಿಕೊಂಡು ಶಾಂತಿಯುತವಾಗಿ ಚಳವಳಿ ನಿರತರನ್ನು ಬಲತ್ಕಾರದಿಂದ ಖಾಲಿ ಮಾಡಿಸುವುದು, ಗೂಂಡಾಗಳ ಮುಖಾಂತರ ಬೆದರಿಕೆ ಒಡ್ಡುವುದನ್ನು ಮಾಡುತ್ತಿದ್ದು ಇದು ಅತ್ಯಂತ ಕ್ರೂರ, ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಇಂತಹ ಕ್ರಮಗಳಿಂದ ರೈತ ಚಳವಳಿಯನ್ನು ನಾಶ ಮಾಡಲು ಎಂದಿಗೂ ಸಾಧ್ಯವಿಲ್ಲ ಎಂದು ತಿಳಿಸಿದರು.

ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯಲ್ಲಿ ನಡೆದ ಗಲಭೆ ಅದರಲ್ಲಿ ಭಾಗವಹಿಸಿರುವ ವ್ಯಕ್ತಿಗಳು ಯಾರು, ಅದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಸಮಗ್ರ ತನಿಖೆ ನಡೆಸಿ ಸತ್ಯಾಂಶವು ಹೊರಬೀಳಬೇಕಾಗಿದೆ. ಈ ಸಂಬಂಧ ರಾಷ್ಟ್ರದ ಗಣ್ಯರು ಒಂದು ಸತ್ಯಶೋಧನಾ ಸಮಿತಿ ರಚಿಸಿ  ಸತ್ಯಾಂಶವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಕೆಂಪು ಕೋಟೆ ಪ್ರವೇಶ ಮಾಡಿ ಧ್ವಜಾರೋಹಣ ಮಾಡುವ ಉದ್ದೇಶ ಚಳುವಳಿಗಾರರಲ್ಲಿ ಇದೆ ಎಂದು ಸುಪ್ರೀಂಕೋರ್ಟ್ ಮುಂದೆ ಕೇಂದ್ರದ ಅಟಾರ್ನಿ ಜನರಲ್ ಹೇಳಿದ್ದರು. ಈ ಮಾಹಿತಿ ಇದ್ದಲ್ಲಿ ಕೆಂಪುಕೋಟೆಗೆ ಸುರಕ್ಷಿತ ರಕ್ಷಣೆ ಮಾಡಿಲ್ಲವೇಕೆ? ಕೆಂಪುಕೋಟೆಗೆ ಪ್ರವೇಶ ಮಾಡಬೇಕಾದರೆ ನಾಲ್ಕು ಗೇಟ್ ಗಳನ್ನು ದಾಟಿ ಹೋಗಬೇಕಾಗುತ್ತದೆ. ಆದರೆ ಅದನ್ನು ತಡೆಗಟ್ಟಲು ತೀವ್ರ ಪ್ರಯತ್ನಗಳನ್ನು ಮಾಡಲಿಲ್ಲವೇಕೆ? ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡರು ಮುಂಚಿತವಾಗಿ ಕೆಲವು ದುಷ್ಕರ್ಮಿಗಳು ರೈತರ ಹೆಸರಿನಲ್ಲಿ ಇಂತಹ ಕೃತ್ಯ ಎಸಗುವ ಸಾಧ್ಯತೆ ಇದೆ, ಇಂತಹವರ ಮೇಲೆ ಅನುಮಾನವಿದೆ ಎಂದು ಸ್ಥಳೀಯ ಪೊಲೀಸರಿಗೆ ತಿಳಿಸಿರುತ್ತಾರೆ. ಅಂತಹವರ ವಿರುದ್ಧ ಮುನ್ನೆಚ್ಚರಿಕಾ ಕ್ರಮವೇಕೆ ವಹಿಸಿಲ್ಲ ಎಂಬುದನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸುವಂತೆ ಒತ್ತಾಯಿಸಿದರು.

ನವದೆಹಲಿಯಲ್ಲಿ ನಡೆದ ದುಷ್ಕೃತ್ಯದ ಬಗ್ಗೆ ವಿಷಾದ ವ್ಯಕ್ತಪಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ದೇಶದಾದ್ಯಂತ ಜ.30ರಂದು(ನಾಳೆ) ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದು ರಾಜ್ಯದಲ್ಲೂ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ರಾಜಧಾನಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಇರುವ ಸ್ವಾತಂತ್ರಯ ಉದ್ಯಾನವನದ ಬಳಿ ಹಾಗೂ ಮೈಸೂರಿನಲ್ಲಿ ಗಾಂಧಿ ಪ್ರತಿಮೆ ಮುಂದೆ ಎಲ್ಲಾ ಜನಪರ ಸಂಘಟನೆಗಳ ಪದಾಧಿಕಾರಿಗಳಿಂದ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ  ಗೌ.ಅಧ್ಯಕ್ಷ ಚಾಮರಸ ಮಾಲೀ ಪಾಟೀಲ್, ಉಪಾಧ್ಯಕ್ಷರುಗಳಾದ ಜಿ.ಟಿ.ರಾಮಸ್ವಾಮಿ, ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಕೆಂಪೇಗೌಡ, ಹೊಸಕೋಟೆ ಬಸವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಟ ದೀಪ್ ಸಿಧು ಮತ್ತು ಕೆಲವು ಸಂಘಟನೆಗಳು ಉದ್ದೇಶಪೂರ್ವಕವಾಗಿಯೇ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರಿಗೆ ಕಳಂಕ ತರುವ ಕೆಲಸವನ್ನು ಮಾಡಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಕಿತ್ತೆಸೆದು ಕೆಂಪು ಪ್ರವೇಶ ಮಾಡುವವರೆಗೆ ಪೊಲೀಸರು ಏಕೆ ಸುಮ್ಮನಿದ್ದರು, ಪ್ರಧಾನಿ ಸೇರಿದಂತೆ ಇತರೆ ಗಣ್ಯರು ಆಗಮಿಸುವ ಸ್ಥಳಕ್ಕೆ ಹೆಚ್ಚಿನ ಭದ್ರತೆ ಏಕೆ ನೀಡಿರಲಿಲ್ಲ.

-ಬಡಗಲಪುರ ನಾಗೇಂದ್ರ, ರಾಜ್ಯಾಧ್ಯಕ್ಷ, ಕರ್ನಾಟಕ ರಾಜ್ಯ ರೈತ ಸಂಘ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X