ಪ್ರತ್ಯೇಕ ಪ್ರಕರಣ : ಇಬ್ಬರ ನಾಪತ್ತೆ
ಹೆಬ್ರಿ, ಜ.30: ಹೆಬ್ರಿ ಪೇಟೆಯಲ್ಲಿ ಮೊಬೈಲ್ ರಿಪೇರಿ ಮಾಡಿಕೊಂಡು ಬರುವುದಾಗಿ ಹೇಳಿ ಮನೆಯಿಂದ ಜ.28ರಂದು ಸಂಜೆ ವೇಳೆ ಬೈಕಿನಲ್ಲಿ ಹೋದ ಹೆಬ್ರಿ ಯಳಾಳಿ ನಿವಾಸಿ ಮಹಾಬಲ ಪೂಜಾರಿ ಎಂಬವರ ಮಗ ದಿಕ್ಷಿತ್(26) ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ: ಲಾರಿಯಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಕಾರ್ಕಡ ಗ್ರಾಮದ ಬಳ್ಳಿಕೆರೆ ನಿವಾಸಿ ಅಶೋಕ ಪೂಜಾರಿ(35) ಎಂಬವರು ಜ.13 ರಂದು ರಾತ್ರಿ 8 ಗಂಟೆಗೆ ಕೆಲಸ ಇದೆ ಎಂದು ಹೇಳಿ ಮನೆಯಿಂದ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





